Homeಅಂತರಾಷ್ಟ್ರೀಯಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

- Advertisement -
- Advertisement -

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ ಈ ಘಟನೆಗೆ ಯಾವುದೇ ಕೋಮು ಆಯಾಮವಿಲ್ಲ, ಇದು ಸಾಮಾನ್ಯ ಅಪರಾಧ ಸ್ವರೂಪದ ಘಟನೆ ಎಂದು ಹೇಳಿದೆ.

ದಿ ಡೈಲಿ ಸ್ಟಾರ್ ವರದಿಯ ಪ್ರಕಾರ, ಡಿಸೆಂಬರ್ 24 ರಂದು ರಾತ್ರಿ 11 ಗಂಟೆ ಸುಮಾರಿಗೆ ರಾಜ್‌ಬರಿಯ ಪಂಗ್ಶಾ ಉಪಜಿಲ್ಲಾದ ಪಂಗ್ಶಾ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸೆಂದಂಗಾ ಗ್ರಾಮದಲ್ಲಿ ‘ಸಾಮ್ರಾಟ್’ ಎಂದೂ ಕರೆಯಲ್ಪಡುವ ಅಮೃತ್ ಮೊಂಡಲ್ ಎಂಬ ವ್ಯಕ್ತಿಯನ್ನು ಸ್ಥಳೀಯರು ಥಳಿಸಿದ್ದಾರೆ. ಸುಲಿಗೆ ಹಣವನ್ನು ಸಂಗ್ರಹಿಸಲು ಮೊಂಡಲ್ ಈ ಪ್ರದೇಶಕ್ಕೆ ಹೋಗಿದ್ದರು ಎಂಬ ಆರೋಪದ ನಂತರ ಹಿಂಸಾಚಾರ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ಪಡೆದ ನಂತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಂಭೀರ ಸ್ಥಿತಿಯಲ್ಲಿದ್ದ ಮೊಂಡಲ್ ಅವರನ್ನು ರಕ್ಷಿಸಿದರು. ಅವರನ್ನು ಪಂಗ್ಶಾ ಉಪಜಿಲ್ಲಾ ಆರೋಗ್ಯ ಸಂಕೀರ್ಣಕ್ಕೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ದೇಬ್ರತಾ ಸರ್ಕಾರ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಮೊಂಡಲ್ ಅವರ ಸಹಚರರಲ್ಲಿ ಒಬ್ಬರಾದ ಮೊಹಮ್ಮದ್ ಸೆಲೀಮ್ ಅವರನ್ನು ಸ್ಥಳದಿಂದ ಬಂಧಿಸಿದ್ದಾರೆ ಮತ್ತು ಪಿಸ್ತೂಲ್, ಪೈಪ್ ಗನ್ ಸೇರಿದಂತೆ ಎರಡು ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊಂಡಲ್ ವಿರುದ್ಧ ಪಂಗ್ಶಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಸೇರಿದಂತೆ ಕನಿಷ್ಠ ಎರಡು ಪ್ರಕರಣಗಳು ದಾಖಲಾಗಿವೆ ಮತ್ತು 2023 ರಲ್ಲಿ ದಾಖಲಾದ ಹಲವಾರು ಸುಲಿಗೆ ಸಂಬಂಧಿತ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎಂದು ಸರ್ಕಾರ್ ಹೇಳಿದ್ದಾರೆ.

ಸ್ಥಳೀಯ ನಿವಾಸಿಗಳು ದಿ ಡೈಲಿ ಸ್ಟಾರ್‌ಗೆ ನೀಡಿದ ಮಾಹಿತಿಯ ಪ್ರಕಾರ, ಮೊಂಡಲ್ ಸುಲಿಗೆ ಮತ್ತು ಇತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಇತ್ತೀಚೆಗೆ ಭಾರತದಿಂದ ಹಿಂದಿರುಗಿದ್ದ. ಬಳಿಕ ಸ್ವಲ್ಪ ಸಮಯ ಸುಮ್ಮನಿದ್ದ. ಹತ್ಯೆಯಾದ ರಾತ್ರಿ, ಆತ ಮತ್ತು ಆತನ ಹಲವಾರು ಸಹಚರರು ಹಣ ಸಂಗ್ರಹಿಸಲು ಗ್ರಾಮಸ್ಥರ ಮನೆಗೆ ಹೋಗಿದ್ದರು ಎನ್ನಲಾಗಿದೆ. ನಿವಾಸಿಗಳು ಎಚ್ಚರಿಕೆ ನೀಡಿದಾಗ, ಸ್ಥಳೀಯರು ಒಟ್ಟುಗೂಡಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಆತನ ಗುಂಪಿನ ಇತರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುವಾರ (ಡಿಸೆಂಬರ್ 25) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಹತ್ಯೆಯನ್ನು ಖಂಡಿಸಿದೆ. ಆದರೆ, ಸಾರ್ವಜನಿಕರು ಮತ್ತು ಅಂತಾರಾಷ್ಟ್ರೀಯ ವೀಕ್ಷಕರು ಈ ಘಟನೆಯನ್ನು ಧಾರ್ಮಿಕ ದೃಷ್ಟಿಕೋನದಿಂದ ನೋಡಿದ್ದಾರೆ.

“ಪೊಲೀಸರ ಮಾಹಿತಿ ಮತ್ತು ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಈ ಘಟನೆಯು ಯಾವುದೇ ರೀತಿಯಲ್ಲಿ ಕೋಮು ದಾಳಿಯಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಸುಲಿಗೆ ಮತ್ತು ಅಪರಾಧ ಚಟುವಟಿಕೆಗಳ ಹಿನ್ನೆಲೆ ನಡೆದಿದೆ” ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಮೊಂಡಲ್‌ ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಆತನ ವಿರುದ್ದ 2023ರಿಂದ ಹಲವಾರು ವಾರೆಂಟ್‌ಗಳನ್ನು ಹೊರಡಿಸಲಾಗಿದೆ. ಕೆಲವು ಗುಂಪುಗಳು ಮೃತನ ಧಾರ್ಮಿಕ ಗುರುತನ್ನು ಮುಂದಿಟ್ಟುಕೊಂಡು ಈ ಘಟನೆಯನ್ನು ಕೋಮು ದಾಳಿ ಎಂದು ಬಿಂಬಿಸಲು ಪ್ರಯತ್ನಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದೆ. ಅಂತಹ ಪ್ರಯತ್ನವು ಸಂಪೂರ್ಣ ಆಧಾರರಹಿತ ಮತ್ತು ದುರುದ್ದೇಶಪೂರಿತ ಎಂದು ಹೇಳಿದೆ.

ಗುಂಪು ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ. ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆ ಅಥವಾ ಗುಂಪು ಹಿಂಸಾಚಾರವನ್ನು ಬೆಂಬಲಿಸುವುದಿಲ್ಲ ಎಂದು ಪುನರುಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...