Homeಎಕಾನಮಿಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

ಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿರುವ ರಾಹುಲ್‌ ಗಾಂಧಿ ಭಾರತದ ಆರ್ಥಿಕತೆಯ ಕುಸಿತವನ್ನು ಉಲ್ಲೇಖಿಸಿ, “ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ ಇದು” ಎಂದು ವ್ಯಂಗ್ಯವಾಡಿದ್ದಾರೆ.

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು. ಇದನ್ನು ಉಲ್ಲೇಖಿಸಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಇಂದು (ಜ.9) ಟ್ವೀಟ್‌ ಮಾಡಿದ್ದಾರೆ.

“ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ- ಜಿಡಿಪಿ- -7.7%, ತಲಾದಾಯ- -5.4%, ನಿರುದ್ಯೋಗ ದರ- 9.1%. ಅತಿಯಾದ ವಿಕಾಸ!” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಭಾರತದ ಆರ್ಥಿಕ ಬೆಳವಣಿಗೆಯು 2019-20ರಲ್ಲಿ ಶೇ. 4.2 ಪ್ರಮಾಣದಲ್ಲಿತ್ತು. ಆರ್ಥಿಕ ವರ್ಷದ ಮೊದಲರ್ಧ ಭಾಗದಲ್ಲಿ ಹಲವು ಹಣಕಾಸು ಸಂಸ್ಥೆಗಳು ಮತ್ತು ರೇಟಿಂಗ್ ಏಜೆನ್ಸಿಗಳು, ಭಾರತದ ಆರ್ಥಿಕತೆ ಎರಡಂಕಿ ಪ್ರಮಾಣದಲ್ಲಿ ಸಂಕುಚಿತಗೊಳ್ಳಬಹುದು ಎಂದು ಅಂದಾಜಿಸಿದ್ದವು. ಆದರೆ ಎನ್‌ಎಸ್‌ಒ ಈಗ ಬಿಡುಗಡೆ ಮಾಡಿರುವ ಮೊದಲ ಮುಂಗಡ ಅಂದಾಜು ಕೇವಲ ಒಂದಂಕಿ ಸಂಕುಚಿತತೆ (ಶೇ.7.7) ಎಂದು ಸೂಚಿಸಿದೆ. ಆದರೂ ಇದು ದೇಶದ ಅತಿ ಕೆಟ್ಟ ಆರ್ಥಿಕ ಕುಸಿತ ಎನ್ನಲಾಗಿದೆ.

ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಮೊದಲಿಗೆ ಆರ್ಥಿಕ ವೃದ್ಧಿ ದರವನ್ನು ಶೇಕಡಾ -9.5 ಎಂದು ಅಂದಾಜಿಸಿದ್ದ ಆರ್‌ಬಿಐ, ಡಿಸೆಂಬರ್‌ನಲ್ಲಿ ಅದನ್ನು ಶೇಕಡಾ -7.5 ಎಂದು ಅಂದಾಜಿಸಿದೆ.

2020-21ರಲ್ಲಿ ಕೃಷಿಯು ಶೇ. 3.4 ದರದ ಬೆಳವಣಿಗೆ ಕಾಣುವ ಅಂದಾಜಿದೆ. ನಿರ್ಮಾಣ ಮತ್ತು ಗಣಿಗಾರಿಕೆಗಳು ಕ್ರಮವಾಗಿ ಶೇ. 9.4 ಮತ್ತು ಶೇ. 12.4 ಪ್ರಮಾಣದಲ್ಲಿ ಸಂಕುಚಿತಗೊಳ್ಳಲಿವೆ, ಅಂದರೆ ಎರಡೂ ಖಣಾತ್ಮಕ ಬೆಳವಣಿಗೆ ಕಾಣಲಿವೆ.

ವ್ಯಾಪಾರ, ಹೋಟೆಲ್ ಸಾರಿಗೆ ಮತ್ತು ಕಮ್ಯುನಿಕೇಷನ್ ಕ್ಷೇತ್ರಗಳು ಅತಿ ಹೆಚ್ಚು ಪ್ರಮಾಣದ ಸಂಕುಚಿತತೆಗೆ (ಶೇ.21.4) ಒಳಗಾಗಲಿದ್ದರೆ, ನಂತರದಲ್ಲಿರುವ ನಿರ್ಮಾಣ ಕ್ಷೇತ್ರವು ಶೇ. 12.6 ರ ಪ್ರಮಾಣದ ಕುಸಿತ ಕಾಣಲಿದೆ.

ನಾಮಿನಲ್ ಜಿಡಿಪಿಯು ಶೇ. 4.2 ದರದಲ್ಲಿ ಸಂಕುಚಿತಗೊಂಡು, 194.82 ಲಕ್ಷ ಕೋಟಿ ರೂ.ಗಳಾಗಲಿದೆ. ವಾಸ್ತವ ಬೆಳವಣಿಗೆ ಜೊತೆಗೆ ಬೆಲೆಯೇರಿಕೆ ಅಂಶವನ್ನೂ ನಾಮಿನಲ್ ಜಿಡಿಪಿ ಒಳಗೊಂಡಿದೆ.

ಇದನ್ನೂ ಓದಿ: ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ಮುಚ್ಚಿಟ್ಟ ಆರೋಪ: BJP ಸಂಸದ ಪಿ.ಸಿ. ಮೋಹನ್ ವಿರುದ್ಧ ವಿಚಾರಣೆ

ಸರ್ಕಾರ ಬಜೆಟ್ ಪ್ರಕ್ರಿಯೆ ನಡೆಸಲು ಅನುಕೂಲವಾಗಲೆಂದು ಎನ್‌ಎಸ್‌ಒ ಈ ಅಂದಾಜನ್ನು ಪ್ರಕಟಿಸುತ್ತದೆ.
‘ಜಿಡಿಪಿ ಅಂದಾಜು ಮೂರನೆ ಮತ್ತು ನಾಲ್ಕನೆ ತ್ರೈಮಾಸಿಕದಲ್ಲಿ ಆರ್ಥಿಕತೆಯ ಚೇತರಿಕೆಯನ್ನು ಸೂಚಿಸುತ್ತದೆ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಕಾರಣಕ್ಕೆ ಎರಡು ತಿಂಗಳು ಆರ್ಥಿಕ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡ ಕಾರಣಕ್ಕೆ ಈ ಹಣಕಾಸು ವರ್ಷವು ಭಾರತಕ್ಕೆ ಸವಾಲಿನ ವರ್ಷವಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ ಮೋದಿ ಸರ್ಕಾರದ ಅವೈಜ್ಞಾನಿಕ ನೀತಿಗಳೇ ಕಾರಣ ಎಂದು ಹಲವರು ಟೀಕಿಸಿದ್ದಾರೆ.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಆರ್ಥಿಕತೆ ಶೇ. 23.9 ಕುಸಿತವನ್ನು ಕಂಡಿತ್ತು. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ. 7.5 ಸಂಕುಚಿತತೆ ಕಂಡಿತ್ತು. ಎನ್‌ಎಸ್‌ಒ ಅಂಕಿಅಂಶದ ಪ್ರಕಾರ ರಫ್ತು ಮತ್ತು ಆಮದುಗಳಲ್ಲೂ ಕುಸಿತ ಸಂಭವಿಸಲಿದೆ.


ಇದನ್ನೂ ಓದಿ: ರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...