Homeಎಕಾನಮಿಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

ಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿರುವ ರಾಹುಲ್‌ ಗಾಂಧಿ ಭಾರತದ ಆರ್ಥಿಕತೆಯ ಕುಸಿತವನ್ನು ಉಲ್ಲೇಖಿಸಿ, “ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ ಇದು” ಎಂದು ವ್ಯಂಗ್ಯವಾಡಿದ್ದಾರೆ.

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು. ಇದನ್ನು ಉಲ್ಲೇಖಿಸಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಇಂದು (ಜ.9) ಟ್ವೀಟ್‌ ಮಾಡಿದ್ದಾರೆ.

“ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ- ಜಿಡಿಪಿ- -7.7%, ತಲಾದಾಯ- -5.4%, ನಿರುದ್ಯೋಗ ದರ- 9.1%. ಅತಿಯಾದ ವಿಕಾಸ!” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಭಾರತದ ಆರ್ಥಿಕ ಬೆಳವಣಿಗೆಯು 2019-20ರಲ್ಲಿ ಶೇ. 4.2 ಪ್ರಮಾಣದಲ್ಲಿತ್ತು. ಆರ್ಥಿಕ ವರ್ಷದ ಮೊದಲರ್ಧ ಭಾಗದಲ್ಲಿ ಹಲವು ಹಣಕಾಸು ಸಂಸ್ಥೆಗಳು ಮತ್ತು ರೇಟಿಂಗ್ ಏಜೆನ್ಸಿಗಳು, ಭಾರತದ ಆರ್ಥಿಕತೆ ಎರಡಂಕಿ ಪ್ರಮಾಣದಲ್ಲಿ ಸಂಕುಚಿತಗೊಳ್ಳಬಹುದು ಎಂದು ಅಂದಾಜಿಸಿದ್ದವು. ಆದರೆ ಎನ್‌ಎಸ್‌ಒ ಈಗ ಬಿಡುಗಡೆ ಮಾಡಿರುವ ಮೊದಲ ಮುಂಗಡ ಅಂದಾಜು ಕೇವಲ ಒಂದಂಕಿ ಸಂಕುಚಿತತೆ (ಶೇ.7.7) ಎಂದು ಸೂಚಿಸಿದೆ. ಆದರೂ ಇದು ದೇಶದ ಅತಿ ಕೆಟ್ಟ ಆರ್ಥಿಕ ಕುಸಿತ ಎನ್ನಲಾಗಿದೆ.

ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಮೊದಲಿಗೆ ಆರ್ಥಿಕ ವೃದ್ಧಿ ದರವನ್ನು ಶೇಕಡಾ -9.5 ಎಂದು ಅಂದಾಜಿಸಿದ್ದ ಆರ್‌ಬಿಐ, ಡಿಸೆಂಬರ್‌ನಲ್ಲಿ ಅದನ್ನು ಶೇಕಡಾ -7.5 ಎಂದು ಅಂದಾಜಿಸಿದೆ.

2020-21ರಲ್ಲಿ ಕೃಷಿಯು ಶೇ. 3.4 ದರದ ಬೆಳವಣಿಗೆ ಕಾಣುವ ಅಂದಾಜಿದೆ. ನಿರ್ಮಾಣ ಮತ್ತು ಗಣಿಗಾರಿಕೆಗಳು ಕ್ರಮವಾಗಿ ಶೇ. 9.4 ಮತ್ತು ಶೇ. 12.4 ಪ್ರಮಾಣದಲ್ಲಿ ಸಂಕುಚಿತಗೊಳ್ಳಲಿವೆ, ಅಂದರೆ ಎರಡೂ ಖಣಾತ್ಮಕ ಬೆಳವಣಿಗೆ ಕಾಣಲಿವೆ.

ವ್ಯಾಪಾರ, ಹೋಟೆಲ್ ಸಾರಿಗೆ ಮತ್ತು ಕಮ್ಯುನಿಕೇಷನ್ ಕ್ಷೇತ್ರಗಳು ಅತಿ ಹೆಚ್ಚು ಪ್ರಮಾಣದ ಸಂಕುಚಿತತೆಗೆ (ಶೇ.21.4) ಒಳಗಾಗಲಿದ್ದರೆ, ನಂತರದಲ್ಲಿರುವ ನಿರ್ಮಾಣ ಕ್ಷೇತ್ರವು ಶೇ. 12.6 ರ ಪ್ರಮಾಣದ ಕುಸಿತ ಕಾಣಲಿದೆ.

ನಾಮಿನಲ್ ಜಿಡಿಪಿಯು ಶೇ. 4.2 ದರದಲ್ಲಿ ಸಂಕುಚಿತಗೊಂಡು, 194.82 ಲಕ್ಷ ಕೋಟಿ ರೂ.ಗಳಾಗಲಿದೆ. ವಾಸ್ತವ ಬೆಳವಣಿಗೆ ಜೊತೆಗೆ ಬೆಲೆಯೇರಿಕೆ ಅಂಶವನ್ನೂ ನಾಮಿನಲ್ ಜಿಡಿಪಿ ಒಳಗೊಂಡಿದೆ.

ಇದನ್ನೂ ಓದಿ: ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ಮುಚ್ಚಿಟ್ಟ ಆರೋಪ: BJP ಸಂಸದ ಪಿ.ಸಿ. ಮೋಹನ್ ವಿರುದ್ಧ ವಿಚಾರಣೆ

ಸರ್ಕಾರ ಬಜೆಟ್ ಪ್ರಕ್ರಿಯೆ ನಡೆಸಲು ಅನುಕೂಲವಾಗಲೆಂದು ಎನ್‌ಎಸ್‌ಒ ಈ ಅಂದಾಜನ್ನು ಪ್ರಕಟಿಸುತ್ತದೆ.
‘ಜಿಡಿಪಿ ಅಂದಾಜು ಮೂರನೆ ಮತ್ತು ನಾಲ್ಕನೆ ತ್ರೈಮಾಸಿಕದಲ್ಲಿ ಆರ್ಥಿಕತೆಯ ಚೇತರಿಕೆಯನ್ನು ಸೂಚಿಸುತ್ತದೆ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಕಾರಣಕ್ಕೆ ಎರಡು ತಿಂಗಳು ಆರ್ಥಿಕ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡ ಕಾರಣಕ್ಕೆ ಈ ಹಣಕಾಸು ವರ್ಷವು ಭಾರತಕ್ಕೆ ಸವಾಲಿನ ವರ್ಷವಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ ಮೋದಿ ಸರ್ಕಾರದ ಅವೈಜ್ಞಾನಿಕ ನೀತಿಗಳೇ ಕಾರಣ ಎಂದು ಹಲವರು ಟೀಕಿಸಿದ್ದಾರೆ.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಆರ್ಥಿಕತೆ ಶೇ. 23.9 ಕುಸಿತವನ್ನು ಕಂಡಿತ್ತು. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ. 7.5 ಸಂಕುಚಿತತೆ ಕಂಡಿತ್ತು. ಎನ್‌ಎಸ್‌ಒ ಅಂಕಿಅಂಶದ ಪ್ರಕಾರ ರಫ್ತು ಮತ್ತು ಆಮದುಗಳಲ್ಲೂ ಕುಸಿತ ಸಂಭವಿಸಲಿದೆ.


ಇದನ್ನೂ ಓದಿ: ರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...