Homeಎಕಾನಮಿಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

ಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿರುವ ರಾಹುಲ್‌ ಗಾಂಧಿ ಭಾರತದ ಆರ್ಥಿಕತೆಯ ಕುಸಿತವನ್ನು ಉಲ್ಲೇಖಿಸಿ, “ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ ಇದು” ಎಂದು ವ್ಯಂಗ್ಯವಾಡಿದ್ದಾರೆ.

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು. ಇದನ್ನು ಉಲ್ಲೇಖಿಸಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಇಂದು (ಜ.9) ಟ್ವೀಟ್‌ ಮಾಡಿದ್ದಾರೆ.

“ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ- ಜಿಡಿಪಿ- -7.7%, ತಲಾದಾಯ- -5.4%, ನಿರುದ್ಯೋಗ ದರ- 9.1%. ಅತಿಯಾದ ವಿಕಾಸ!” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಭಾರತದ ಆರ್ಥಿಕ ಬೆಳವಣಿಗೆಯು 2019-20ರಲ್ಲಿ ಶೇ. 4.2 ಪ್ರಮಾಣದಲ್ಲಿತ್ತು. ಆರ್ಥಿಕ ವರ್ಷದ ಮೊದಲರ್ಧ ಭಾಗದಲ್ಲಿ ಹಲವು ಹಣಕಾಸು ಸಂಸ್ಥೆಗಳು ಮತ್ತು ರೇಟಿಂಗ್ ಏಜೆನ್ಸಿಗಳು, ಭಾರತದ ಆರ್ಥಿಕತೆ ಎರಡಂಕಿ ಪ್ರಮಾಣದಲ್ಲಿ ಸಂಕುಚಿತಗೊಳ್ಳಬಹುದು ಎಂದು ಅಂದಾಜಿಸಿದ್ದವು. ಆದರೆ ಎನ್‌ಎಸ್‌ಒ ಈಗ ಬಿಡುಗಡೆ ಮಾಡಿರುವ ಮೊದಲ ಮುಂಗಡ ಅಂದಾಜು ಕೇವಲ ಒಂದಂಕಿ ಸಂಕುಚಿತತೆ (ಶೇ.7.7) ಎಂದು ಸೂಚಿಸಿದೆ. ಆದರೂ ಇದು ದೇಶದ ಅತಿ ಕೆಟ್ಟ ಆರ್ಥಿಕ ಕುಸಿತ ಎನ್ನಲಾಗಿದೆ.

ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಮೊದಲಿಗೆ ಆರ್ಥಿಕ ವೃದ್ಧಿ ದರವನ್ನು ಶೇಕಡಾ -9.5 ಎಂದು ಅಂದಾಜಿಸಿದ್ದ ಆರ್‌ಬಿಐ, ಡಿಸೆಂಬರ್‌ನಲ್ಲಿ ಅದನ್ನು ಶೇಕಡಾ -7.5 ಎಂದು ಅಂದಾಜಿಸಿದೆ.

2020-21ರಲ್ಲಿ ಕೃಷಿಯು ಶೇ. 3.4 ದರದ ಬೆಳವಣಿಗೆ ಕಾಣುವ ಅಂದಾಜಿದೆ. ನಿರ್ಮಾಣ ಮತ್ತು ಗಣಿಗಾರಿಕೆಗಳು ಕ್ರಮವಾಗಿ ಶೇ. 9.4 ಮತ್ತು ಶೇ. 12.4 ಪ್ರಮಾಣದಲ್ಲಿ ಸಂಕುಚಿತಗೊಳ್ಳಲಿವೆ, ಅಂದರೆ ಎರಡೂ ಖಣಾತ್ಮಕ ಬೆಳವಣಿಗೆ ಕಾಣಲಿವೆ.

ವ್ಯಾಪಾರ, ಹೋಟೆಲ್ ಸಾರಿಗೆ ಮತ್ತು ಕಮ್ಯುನಿಕೇಷನ್ ಕ್ಷೇತ್ರಗಳು ಅತಿ ಹೆಚ್ಚು ಪ್ರಮಾಣದ ಸಂಕುಚಿತತೆಗೆ (ಶೇ.21.4) ಒಳಗಾಗಲಿದ್ದರೆ, ನಂತರದಲ್ಲಿರುವ ನಿರ್ಮಾಣ ಕ್ಷೇತ್ರವು ಶೇ. 12.6 ರ ಪ್ರಮಾಣದ ಕುಸಿತ ಕಾಣಲಿದೆ.

ನಾಮಿನಲ್ ಜಿಡಿಪಿಯು ಶೇ. 4.2 ದರದಲ್ಲಿ ಸಂಕುಚಿತಗೊಂಡು, 194.82 ಲಕ್ಷ ಕೋಟಿ ರೂ.ಗಳಾಗಲಿದೆ. ವಾಸ್ತವ ಬೆಳವಣಿಗೆ ಜೊತೆಗೆ ಬೆಲೆಯೇರಿಕೆ ಅಂಶವನ್ನೂ ನಾಮಿನಲ್ ಜಿಡಿಪಿ ಒಳಗೊಂಡಿದೆ.

ಇದನ್ನೂ ಓದಿ: ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ಮುಚ್ಚಿಟ್ಟ ಆರೋಪ: BJP ಸಂಸದ ಪಿ.ಸಿ. ಮೋಹನ್ ವಿರುದ್ಧ ವಿಚಾರಣೆ

ಸರ್ಕಾರ ಬಜೆಟ್ ಪ್ರಕ್ರಿಯೆ ನಡೆಸಲು ಅನುಕೂಲವಾಗಲೆಂದು ಎನ್‌ಎಸ್‌ಒ ಈ ಅಂದಾಜನ್ನು ಪ್ರಕಟಿಸುತ್ತದೆ.
‘ಜಿಡಿಪಿ ಅಂದಾಜು ಮೂರನೆ ಮತ್ತು ನಾಲ್ಕನೆ ತ್ರೈಮಾಸಿಕದಲ್ಲಿ ಆರ್ಥಿಕತೆಯ ಚೇತರಿಕೆಯನ್ನು ಸೂಚಿಸುತ್ತದೆ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಕಾರಣಕ್ಕೆ ಎರಡು ತಿಂಗಳು ಆರ್ಥಿಕ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡ ಕಾರಣಕ್ಕೆ ಈ ಹಣಕಾಸು ವರ್ಷವು ಭಾರತಕ್ಕೆ ಸವಾಲಿನ ವರ್ಷವಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ ಮೋದಿ ಸರ್ಕಾರದ ಅವೈಜ್ಞಾನಿಕ ನೀತಿಗಳೇ ಕಾರಣ ಎಂದು ಹಲವರು ಟೀಕಿಸಿದ್ದಾರೆ.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಆರ್ಥಿಕತೆ ಶೇ. 23.9 ಕುಸಿತವನ್ನು ಕಂಡಿತ್ತು. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ. 7.5 ಸಂಕುಚಿತತೆ ಕಂಡಿತ್ತು. ಎನ್‌ಎಸ್‌ಒ ಅಂಕಿಅಂಶದ ಪ್ರಕಾರ ರಫ್ತು ಮತ್ತು ಆಮದುಗಳಲ್ಲೂ ಕುಸಿತ ಸಂಭವಿಸಲಿದೆ.


ಇದನ್ನೂ ಓದಿ: ರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...