Homeಎಕಾನಮಿಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

ಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿರುವ ರಾಹುಲ್‌ ಗಾಂಧಿ ಭಾರತದ ಆರ್ಥಿಕತೆಯ ಕುಸಿತವನ್ನು ಉಲ್ಲೇಖಿಸಿ, “ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ ಇದು” ಎಂದು ವ್ಯಂಗ್ಯವಾಡಿದ್ದಾರೆ.

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು. ಇದನ್ನು ಉಲ್ಲೇಖಿಸಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಇಂದು (ಜ.9) ಟ್ವೀಟ್‌ ಮಾಡಿದ್ದಾರೆ.

“ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ- ಜಿಡಿಪಿ- -7.7%, ತಲಾದಾಯ- -5.4%, ನಿರುದ್ಯೋಗ ದರ- 9.1%. ಅತಿಯಾದ ವಿಕಾಸ!” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಭಾರತದ ಆರ್ಥಿಕ ಬೆಳವಣಿಗೆಯು 2019-20ರಲ್ಲಿ ಶೇ. 4.2 ಪ್ರಮಾಣದಲ್ಲಿತ್ತು. ಆರ್ಥಿಕ ವರ್ಷದ ಮೊದಲರ್ಧ ಭಾಗದಲ್ಲಿ ಹಲವು ಹಣಕಾಸು ಸಂಸ್ಥೆಗಳು ಮತ್ತು ರೇಟಿಂಗ್ ಏಜೆನ್ಸಿಗಳು, ಭಾರತದ ಆರ್ಥಿಕತೆ ಎರಡಂಕಿ ಪ್ರಮಾಣದಲ್ಲಿ ಸಂಕುಚಿತಗೊಳ್ಳಬಹುದು ಎಂದು ಅಂದಾಜಿಸಿದ್ದವು. ಆದರೆ ಎನ್‌ಎಸ್‌ಒ ಈಗ ಬಿಡುಗಡೆ ಮಾಡಿರುವ ಮೊದಲ ಮುಂಗಡ ಅಂದಾಜು ಕೇವಲ ಒಂದಂಕಿ ಸಂಕುಚಿತತೆ (ಶೇ.7.7) ಎಂದು ಸೂಚಿಸಿದೆ. ಆದರೂ ಇದು ದೇಶದ ಅತಿ ಕೆಟ್ಟ ಆರ್ಥಿಕ ಕುಸಿತ ಎನ್ನಲಾಗಿದೆ.

ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಮೊದಲಿಗೆ ಆರ್ಥಿಕ ವೃದ್ಧಿ ದರವನ್ನು ಶೇಕಡಾ -9.5 ಎಂದು ಅಂದಾಜಿಸಿದ್ದ ಆರ್‌ಬಿಐ, ಡಿಸೆಂಬರ್‌ನಲ್ಲಿ ಅದನ್ನು ಶೇಕಡಾ -7.5 ಎಂದು ಅಂದಾಜಿಸಿದೆ.

2020-21ರಲ್ಲಿ ಕೃಷಿಯು ಶೇ. 3.4 ದರದ ಬೆಳವಣಿಗೆ ಕಾಣುವ ಅಂದಾಜಿದೆ. ನಿರ್ಮಾಣ ಮತ್ತು ಗಣಿಗಾರಿಕೆಗಳು ಕ್ರಮವಾಗಿ ಶೇ. 9.4 ಮತ್ತು ಶೇ. 12.4 ಪ್ರಮಾಣದಲ್ಲಿ ಸಂಕುಚಿತಗೊಳ್ಳಲಿವೆ, ಅಂದರೆ ಎರಡೂ ಖಣಾತ್ಮಕ ಬೆಳವಣಿಗೆ ಕಾಣಲಿವೆ.

ವ್ಯಾಪಾರ, ಹೋಟೆಲ್ ಸಾರಿಗೆ ಮತ್ತು ಕಮ್ಯುನಿಕೇಷನ್ ಕ್ಷೇತ್ರಗಳು ಅತಿ ಹೆಚ್ಚು ಪ್ರಮಾಣದ ಸಂಕುಚಿತತೆಗೆ (ಶೇ.21.4) ಒಳಗಾಗಲಿದ್ದರೆ, ನಂತರದಲ್ಲಿರುವ ನಿರ್ಮಾಣ ಕ್ಷೇತ್ರವು ಶೇ. 12.6 ರ ಪ್ರಮಾಣದ ಕುಸಿತ ಕಾಣಲಿದೆ.

ನಾಮಿನಲ್ ಜಿಡಿಪಿಯು ಶೇ. 4.2 ದರದಲ್ಲಿ ಸಂಕುಚಿತಗೊಂಡು, 194.82 ಲಕ್ಷ ಕೋಟಿ ರೂ.ಗಳಾಗಲಿದೆ. ವಾಸ್ತವ ಬೆಳವಣಿಗೆ ಜೊತೆಗೆ ಬೆಲೆಯೇರಿಕೆ ಅಂಶವನ್ನೂ ನಾಮಿನಲ್ ಜಿಡಿಪಿ ಒಳಗೊಂಡಿದೆ.

ಇದನ್ನೂ ಓದಿ: ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ಮುಚ್ಚಿಟ್ಟ ಆರೋಪ: BJP ಸಂಸದ ಪಿ.ಸಿ. ಮೋಹನ್ ವಿರುದ್ಧ ವಿಚಾರಣೆ

ಸರ್ಕಾರ ಬಜೆಟ್ ಪ್ರಕ್ರಿಯೆ ನಡೆಸಲು ಅನುಕೂಲವಾಗಲೆಂದು ಎನ್‌ಎಸ್‌ಒ ಈ ಅಂದಾಜನ್ನು ಪ್ರಕಟಿಸುತ್ತದೆ.
‘ಜಿಡಿಪಿ ಅಂದಾಜು ಮೂರನೆ ಮತ್ತು ನಾಲ್ಕನೆ ತ್ರೈಮಾಸಿಕದಲ್ಲಿ ಆರ್ಥಿಕತೆಯ ಚೇತರಿಕೆಯನ್ನು ಸೂಚಿಸುತ್ತದೆ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಕಾರಣಕ್ಕೆ ಎರಡು ತಿಂಗಳು ಆರ್ಥಿಕ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡ ಕಾರಣಕ್ಕೆ ಈ ಹಣಕಾಸು ವರ್ಷವು ಭಾರತಕ್ಕೆ ಸವಾಲಿನ ವರ್ಷವಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ ಮೋದಿ ಸರ್ಕಾರದ ಅವೈಜ್ಞಾನಿಕ ನೀತಿಗಳೇ ಕಾರಣ ಎಂದು ಹಲವರು ಟೀಕಿಸಿದ್ದಾರೆ.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಆರ್ಥಿಕತೆ ಶೇ. 23.9 ಕುಸಿತವನ್ನು ಕಂಡಿತ್ತು. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ. 7.5 ಸಂಕುಚಿತತೆ ಕಂಡಿತ್ತು. ಎನ್‌ಎಸ್‌ಒ ಅಂಕಿಅಂಶದ ಪ್ರಕಾರ ರಫ್ತು ಮತ್ತು ಆಮದುಗಳಲ್ಲೂ ಕುಸಿತ ಸಂಭವಿಸಲಿದೆ.


ಇದನ್ನೂ ಓದಿ: ರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...