Homeಎಕಾನಮಿಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

ಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿರುವ ರಾಹುಲ್‌ ಗಾಂಧಿ ಭಾರತದ ಆರ್ಥಿಕತೆಯ ಕುಸಿತವನ್ನು ಉಲ್ಲೇಖಿಸಿ, “ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ ಇದು” ಎಂದು ವ್ಯಂಗ್ಯವಾಡಿದ್ದಾರೆ.

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು. ಇದನ್ನು ಉಲ್ಲೇಖಿಸಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಇಂದು (ಜ.9) ಟ್ವೀಟ್‌ ಮಾಡಿದ್ದಾರೆ.

“ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ- ಜಿಡಿಪಿ- -7.7%, ತಲಾದಾಯ- -5.4%, ನಿರುದ್ಯೋಗ ದರ- 9.1%. ಅತಿಯಾದ ವಿಕಾಸ!” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಭಾರತದ ಆರ್ಥಿಕ ಬೆಳವಣಿಗೆಯು 2019-20ರಲ್ಲಿ ಶೇ. 4.2 ಪ್ರಮಾಣದಲ್ಲಿತ್ತು. ಆರ್ಥಿಕ ವರ್ಷದ ಮೊದಲರ್ಧ ಭಾಗದಲ್ಲಿ ಹಲವು ಹಣಕಾಸು ಸಂಸ್ಥೆಗಳು ಮತ್ತು ರೇಟಿಂಗ್ ಏಜೆನ್ಸಿಗಳು, ಭಾರತದ ಆರ್ಥಿಕತೆ ಎರಡಂಕಿ ಪ್ರಮಾಣದಲ್ಲಿ ಸಂಕುಚಿತಗೊಳ್ಳಬಹುದು ಎಂದು ಅಂದಾಜಿಸಿದ್ದವು. ಆದರೆ ಎನ್‌ಎಸ್‌ಒ ಈಗ ಬಿಡುಗಡೆ ಮಾಡಿರುವ ಮೊದಲ ಮುಂಗಡ ಅಂದಾಜು ಕೇವಲ ಒಂದಂಕಿ ಸಂಕುಚಿತತೆ (ಶೇ.7.7) ಎಂದು ಸೂಚಿಸಿದೆ. ಆದರೂ ಇದು ದೇಶದ ಅತಿ ಕೆಟ್ಟ ಆರ್ಥಿಕ ಕುಸಿತ ಎನ್ನಲಾಗಿದೆ.

ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಮೊದಲಿಗೆ ಆರ್ಥಿಕ ವೃದ್ಧಿ ದರವನ್ನು ಶೇಕಡಾ -9.5 ಎಂದು ಅಂದಾಜಿಸಿದ್ದ ಆರ್‌ಬಿಐ, ಡಿಸೆಂಬರ್‌ನಲ್ಲಿ ಅದನ್ನು ಶೇಕಡಾ -7.5 ಎಂದು ಅಂದಾಜಿಸಿದೆ.

2020-21ರಲ್ಲಿ ಕೃಷಿಯು ಶೇ. 3.4 ದರದ ಬೆಳವಣಿಗೆ ಕಾಣುವ ಅಂದಾಜಿದೆ. ನಿರ್ಮಾಣ ಮತ್ತು ಗಣಿಗಾರಿಕೆಗಳು ಕ್ರಮವಾಗಿ ಶೇ. 9.4 ಮತ್ತು ಶೇ. 12.4 ಪ್ರಮಾಣದಲ್ಲಿ ಸಂಕುಚಿತಗೊಳ್ಳಲಿವೆ, ಅಂದರೆ ಎರಡೂ ಖಣಾತ್ಮಕ ಬೆಳವಣಿಗೆ ಕಾಣಲಿವೆ.

ವ್ಯಾಪಾರ, ಹೋಟೆಲ್ ಸಾರಿಗೆ ಮತ್ತು ಕಮ್ಯುನಿಕೇಷನ್ ಕ್ಷೇತ್ರಗಳು ಅತಿ ಹೆಚ್ಚು ಪ್ರಮಾಣದ ಸಂಕುಚಿತತೆಗೆ (ಶೇ.21.4) ಒಳಗಾಗಲಿದ್ದರೆ, ನಂತರದಲ್ಲಿರುವ ನಿರ್ಮಾಣ ಕ್ಷೇತ್ರವು ಶೇ. 12.6 ರ ಪ್ರಮಾಣದ ಕುಸಿತ ಕಾಣಲಿದೆ.

ನಾಮಿನಲ್ ಜಿಡಿಪಿಯು ಶೇ. 4.2 ದರದಲ್ಲಿ ಸಂಕುಚಿತಗೊಂಡು, 194.82 ಲಕ್ಷ ಕೋಟಿ ರೂ.ಗಳಾಗಲಿದೆ. ವಾಸ್ತವ ಬೆಳವಣಿಗೆ ಜೊತೆಗೆ ಬೆಲೆಯೇರಿಕೆ ಅಂಶವನ್ನೂ ನಾಮಿನಲ್ ಜಿಡಿಪಿ ಒಳಗೊಂಡಿದೆ.

ಇದನ್ನೂ ಓದಿ: ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ಮುಚ್ಚಿಟ್ಟ ಆರೋಪ: BJP ಸಂಸದ ಪಿ.ಸಿ. ಮೋಹನ್ ವಿರುದ್ಧ ವಿಚಾರಣೆ

ಸರ್ಕಾರ ಬಜೆಟ್ ಪ್ರಕ್ರಿಯೆ ನಡೆಸಲು ಅನುಕೂಲವಾಗಲೆಂದು ಎನ್‌ಎಸ್‌ಒ ಈ ಅಂದಾಜನ್ನು ಪ್ರಕಟಿಸುತ್ತದೆ.
‘ಜಿಡಿಪಿ ಅಂದಾಜು ಮೂರನೆ ಮತ್ತು ನಾಲ್ಕನೆ ತ್ರೈಮಾಸಿಕದಲ್ಲಿ ಆರ್ಥಿಕತೆಯ ಚೇತರಿಕೆಯನ್ನು ಸೂಚಿಸುತ್ತದೆ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಕಾರಣಕ್ಕೆ ಎರಡು ತಿಂಗಳು ಆರ್ಥಿಕ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡ ಕಾರಣಕ್ಕೆ ಈ ಹಣಕಾಸು ವರ್ಷವು ಭಾರತಕ್ಕೆ ಸವಾಲಿನ ವರ್ಷವಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ ಮೋದಿ ಸರ್ಕಾರದ ಅವೈಜ್ಞಾನಿಕ ನೀತಿಗಳೇ ಕಾರಣ ಎಂದು ಹಲವರು ಟೀಕಿಸಿದ್ದಾರೆ.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಆರ್ಥಿಕತೆ ಶೇ. 23.9 ಕುಸಿತವನ್ನು ಕಂಡಿತ್ತು. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ. 7.5 ಸಂಕುಚಿತತೆ ಕಂಡಿತ್ತು. ಎನ್‌ಎಸ್‌ಒ ಅಂಕಿಅಂಶದ ಪ್ರಕಾರ ರಫ್ತು ಮತ್ತು ಆಮದುಗಳಲ್ಲೂ ಕುಸಿತ ಸಂಭವಿಸಲಿದೆ.


ಇದನ್ನೂ ಓದಿ: ರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...