Homeಎಕಾನಮಿಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

ಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿರುವ ರಾಹುಲ್‌ ಗಾಂಧಿ ಭಾರತದ ಆರ್ಥಿಕತೆಯ ಕುಸಿತವನ್ನು ಉಲ್ಲೇಖಿಸಿ, “ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ ಇದು” ಎಂದು ವ್ಯಂಗ್ಯವಾಡಿದ್ದಾರೆ.

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು. ಇದನ್ನು ಉಲ್ಲೇಖಿಸಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಇಂದು (ಜ.9) ಟ್ವೀಟ್‌ ಮಾಡಿದ್ದಾರೆ.

“ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ- ಜಿಡಿಪಿ- -7.7%, ತಲಾದಾಯ- -5.4%, ನಿರುದ್ಯೋಗ ದರ- 9.1%. ಅತಿಯಾದ ವಿಕಾಸ!” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಭಾರತದ ಆರ್ಥಿಕ ಬೆಳವಣಿಗೆಯು 2019-20ರಲ್ಲಿ ಶೇ. 4.2 ಪ್ರಮಾಣದಲ್ಲಿತ್ತು. ಆರ್ಥಿಕ ವರ್ಷದ ಮೊದಲರ್ಧ ಭಾಗದಲ್ಲಿ ಹಲವು ಹಣಕಾಸು ಸಂಸ್ಥೆಗಳು ಮತ್ತು ರೇಟಿಂಗ್ ಏಜೆನ್ಸಿಗಳು, ಭಾರತದ ಆರ್ಥಿಕತೆ ಎರಡಂಕಿ ಪ್ರಮಾಣದಲ್ಲಿ ಸಂಕುಚಿತಗೊಳ್ಳಬಹುದು ಎಂದು ಅಂದಾಜಿಸಿದ್ದವು. ಆದರೆ ಎನ್‌ಎಸ್‌ಒ ಈಗ ಬಿಡುಗಡೆ ಮಾಡಿರುವ ಮೊದಲ ಮುಂಗಡ ಅಂದಾಜು ಕೇವಲ ಒಂದಂಕಿ ಸಂಕುಚಿತತೆ (ಶೇ.7.7) ಎಂದು ಸೂಚಿಸಿದೆ. ಆದರೂ ಇದು ದೇಶದ ಅತಿ ಕೆಟ್ಟ ಆರ್ಥಿಕ ಕುಸಿತ ಎನ್ನಲಾಗಿದೆ.

ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಮೊದಲಿಗೆ ಆರ್ಥಿಕ ವೃದ್ಧಿ ದರವನ್ನು ಶೇಕಡಾ -9.5 ಎಂದು ಅಂದಾಜಿಸಿದ್ದ ಆರ್‌ಬಿಐ, ಡಿಸೆಂಬರ್‌ನಲ್ಲಿ ಅದನ್ನು ಶೇಕಡಾ -7.5 ಎಂದು ಅಂದಾಜಿಸಿದೆ.

2020-21ರಲ್ಲಿ ಕೃಷಿಯು ಶೇ. 3.4 ದರದ ಬೆಳವಣಿಗೆ ಕಾಣುವ ಅಂದಾಜಿದೆ. ನಿರ್ಮಾಣ ಮತ್ತು ಗಣಿಗಾರಿಕೆಗಳು ಕ್ರಮವಾಗಿ ಶೇ. 9.4 ಮತ್ತು ಶೇ. 12.4 ಪ್ರಮಾಣದಲ್ಲಿ ಸಂಕುಚಿತಗೊಳ್ಳಲಿವೆ, ಅಂದರೆ ಎರಡೂ ಖಣಾತ್ಮಕ ಬೆಳವಣಿಗೆ ಕಾಣಲಿವೆ.

ವ್ಯಾಪಾರ, ಹೋಟೆಲ್ ಸಾರಿಗೆ ಮತ್ತು ಕಮ್ಯುನಿಕೇಷನ್ ಕ್ಷೇತ್ರಗಳು ಅತಿ ಹೆಚ್ಚು ಪ್ರಮಾಣದ ಸಂಕುಚಿತತೆಗೆ (ಶೇ.21.4) ಒಳಗಾಗಲಿದ್ದರೆ, ನಂತರದಲ್ಲಿರುವ ನಿರ್ಮಾಣ ಕ್ಷೇತ್ರವು ಶೇ. 12.6 ರ ಪ್ರಮಾಣದ ಕುಸಿತ ಕಾಣಲಿದೆ.

ನಾಮಿನಲ್ ಜಿಡಿಪಿಯು ಶೇ. 4.2 ದರದಲ್ಲಿ ಸಂಕುಚಿತಗೊಂಡು, 194.82 ಲಕ್ಷ ಕೋಟಿ ರೂ.ಗಳಾಗಲಿದೆ. ವಾಸ್ತವ ಬೆಳವಣಿಗೆ ಜೊತೆಗೆ ಬೆಲೆಯೇರಿಕೆ ಅಂಶವನ್ನೂ ನಾಮಿನಲ್ ಜಿಡಿಪಿ ಒಳಗೊಂಡಿದೆ.

ಇದನ್ನೂ ಓದಿ: ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ಮುಚ್ಚಿಟ್ಟ ಆರೋಪ: BJP ಸಂಸದ ಪಿ.ಸಿ. ಮೋಹನ್ ವಿರುದ್ಧ ವಿಚಾರಣೆ

ಸರ್ಕಾರ ಬಜೆಟ್ ಪ್ರಕ್ರಿಯೆ ನಡೆಸಲು ಅನುಕೂಲವಾಗಲೆಂದು ಎನ್‌ಎಸ್‌ಒ ಈ ಅಂದಾಜನ್ನು ಪ್ರಕಟಿಸುತ್ತದೆ.
‘ಜಿಡಿಪಿ ಅಂದಾಜು ಮೂರನೆ ಮತ್ತು ನಾಲ್ಕನೆ ತ್ರೈಮಾಸಿಕದಲ್ಲಿ ಆರ್ಥಿಕತೆಯ ಚೇತರಿಕೆಯನ್ನು ಸೂಚಿಸುತ್ತದೆ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಕಾರಣಕ್ಕೆ ಎರಡು ತಿಂಗಳು ಆರ್ಥಿಕ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡ ಕಾರಣಕ್ಕೆ ಈ ಹಣಕಾಸು ವರ್ಷವು ಭಾರತಕ್ಕೆ ಸವಾಲಿನ ವರ್ಷವಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ ಮೋದಿ ಸರ್ಕಾರದ ಅವೈಜ್ಞಾನಿಕ ನೀತಿಗಳೇ ಕಾರಣ ಎಂದು ಹಲವರು ಟೀಕಿಸಿದ್ದಾರೆ.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಆರ್ಥಿಕತೆ ಶೇ. 23.9 ಕುಸಿತವನ್ನು ಕಂಡಿತ್ತು. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ. 7.5 ಸಂಕುಚಿತತೆ ಕಂಡಿತ್ತು. ಎನ್‌ಎಸ್‌ಒ ಅಂಕಿಅಂಶದ ಪ್ರಕಾರ ರಫ್ತು ಮತ್ತು ಆಮದುಗಳಲ್ಲೂ ಕುಸಿತ ಸಂಭವಿಸಲಿದೆ.


ಇದನ್ನೂ ಓದಿ: ರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...