Homeಮುಖಪುಟತಮಿಳುನಾಡಿನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ; 26 ವರ್ಷದ ದಲಿತ ಯುವಕನ ಕೊಲೆ

ತಮಿಳುನಾಡಿನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ; 26 ವರ್ಷದ ದಲಿತ ಯುವಕನ ಕೊಲೆ

- Advertisement -
- Advertisement -

ತಮಿಳುನಾಡಿನ ಚೆನ್ನೈನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಅತಿ ಹಿಂದುಳಿದ ಜಾತಿಗೆ (ಒಬಿಸಿ) ಸೇರಿದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದ ಆದಿ ದ್ರಾವಿಡ (ಎಸ್‌ಸಿ) ಸಮುದಾಯದ ಯುವಕನನ್ನು ಪತ್ನಿ ಸಹೋದರನೆ ಹತ್ಯೆ ಮಾಡಿದ್ದಾನೆ.

ಶಂಕಿತ ಮರ್ಯಾದೆಗೇಡು ಹತ್ಯೆಯ ಪ್ರಕರಣದಲ್ಲಿ 26 ವರ್ಷದ ದಲಿತ ಯುವಕನನ್ನು ಚೆನ್ನೈನಲ್ಲಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ಅಪರಾಧಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸೋದರ ಸೇರಿದಂತೆ ಐವರು ಶಂಕಿತರನ್ನು ಈಗಾಗಲೇ ಬಂಧಿಸಲಾಗಿದೆ.

ಹತ್ಯೆಯಾದ ದಲಿತ ಯುವಕನು ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಪ್ರವೀಣ್ ಎಂದು ಗುರುತಿಸಲಾಗಿದೆ. ನಗರದ ಪಲ್ಲಿಕರಣೈ ಬಳಿ ಶನಿವಾರ ಈ ಘಟನೆ ನಡೆದಿದೆ; ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಚೆನ್ನೈನ ಪಲ್ಲಿಕರಣೈನಲ್ಲಿರುವ ಖಾಸಗಿ ಬಾರ್‌ನಲ್ಲಿ ಪ್ರವೀಣ್‌ನನ್ನು ಅವನ ಹೆಂಡತಿಯ ಸಹೋದರ ಮತ್ತು ಅವನ ಸ್ನೇಹಿತರು ಕೊಲೆ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಪ್ರವೀಣ್ ಮತ್ತು ಶರ್ಮಿ ಅವರು ನವೆಂಬರ್ 2023ರಲ್ಲಿ ವಿವಾಹ ನೋಂದಾಯಿಸಿಕೊಳ್ಳುವ ಮೂಲಕ ಮದುವೆಯಾಗಿದ್ದರು. ಏಕೆಂದರೆ, ಅವರ ಕುಟುಂಬಗಳು ಅವರ ಅಂತರ್ಜಾತಿ ಸಂಬಂಧವನ್ನು ಒಪ್ಪಿರಲಿಲ್ಲ. ಪ್ರವೀಣ್ ಪರಿಶಿಷ್ಟ ಜಾತಿಯಡಿ ಬರುವ ಆದಿ ದ್ರಾವಿಡರ್ ಸಮುದಾಯಕ್ಕೆ ಸೇರಿದವರಾಗಿದ್ದರೆ, ಶರ್ಮಿ ಒಬಿಸಿ ಅಡಿಯಲ್ಲಿ ಬರುವ ಯಾದವ ಜಾತಿಗೆ ಸೇರಿದವರು.

ಶರ್ಮಿಯ ಸಹೋದರ ದಿನೇಶ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಪಲ್ಲಿಕರಣೈನಲ್ಲಿರುವ ಖಾಸಗಿ ಬಾರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಪ್ರವೀಣ್ ಕೂಡ ಇದ್ದರು. ಗುಂಪು ಪ್ರವೀಣ್ ಬಳಿಗೆ ಬಂದಿತು ಮತ್ತು ವಾಗ್ವಾದ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ದಿನೇಶ್ ಮತ್ತು ಆತನ ಸ್ನೇಹಿತರು ತಮ್ಮೊಂದಿಗೆ ತಂದಿದ್ದ ಚಾಕುಗಳನ್ನು ಹೊರತೆಗೆದು ಪ್ರವೀಣ್ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ತೀವ್ರವಾಗಿ ಗಾಯಗೊಂಡ ಪ್ರವೀಣ್‌ನನ್ನು ಕ್ರೋಂಪೇಟೆಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಎಸ್ 10 ಪಲ್ಲಿಕರನೈ ಪೊಲೀಸ್ ಠಾಣೆಯಲ್ಲಿ ದಿನೇಶ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಲ್ಲ ಐವರು ಆರೋಪಿಗಳನ್ನು ಫೆಬ್ರವರಿ 25 ರಂದು ಮಂಬಕ್ಕಂ ಬಳಿ ಪೊಲೀಸರು ಬಂಧಿಸಿದ್ದರು.

ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು, ಐವರು ಆರೋಪಿಗಳಾದ ಸ್ಟೀಫನ್ ಕುಮಾರ್, ಜೋತಿ ಲಿಂಗಂ, ಶ್ರೀರಾಮ್, ಅಶೋಕ್, ವಿಷ್ಣು ರಾಜ್ ಮತ್ತು ದಿನೇಶ್ ಅವರನ್ನು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಪ್ರವೀಣ್ ಶರ್ಮಿಳಾಳನ್ನು ಆಕೆಯ ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಶನಿವಾರ ಊಟ ಖರೀದಿಸಲು ಪ್ರವೀಣ್ ಮನೆಯಿಂದ ಹೊರಬಂದಿದ್ದರು, ಅದೇ ಸಮಯಕ್ಕೆ ಅಲ್ಲಿಗೆ ಬಂದಿದ್ದ ಶರ್ಮಿಳಾ ಅವರ ಸಹೋದರ ದಿನೇಶ್ ಮತ್ತು ಇತರ ನಾಲ್ವರು ಆರೋಪಿಗಳು ಆತನನ್ನು ಸುತ್ತುವರೆದು ಹಲ್ಲೆ ನಡೆಸಿದ್ದಾರೆ.

ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರವೀಣ್ ಅವರ ತಂದೆ ಗೋಪಿ, ‘ನನ್ನ ಮಗ ಊಟ ಖರೀದಿಸಲು ಹೊರಗೆ ಹೋಗಿದ್ದ; ಎರಡು ಗಂಟೆಯಾದರೂ ಅವನು ಹಿಂತಿರುಗದಿದ್ದಾಗ, ನಾನು ಚಿಂತೆ ಮಾಡಲು ಪ್ರಾರಂಭಿಸಿದೆ. ನನ್ನ ಸೊಸೆ ಅಳಲು ಪ್ರಾರಂಭಿಸಿದಾಗ ಮಾತ್ರ, ಏನೋ ಆಗಿದೆ ಎಂದು ನನಗೆ ಅರ್ಥವಾಯಿತು. ಕೊಲೆಯಲ್ಲಿ ಭಾಗಿಯಾದ ಅವರೆಲ್ಲರಿಗೂ ಶಿಕ್ಷೆಯಾಗಬೇಕೆಂದು ನಾನು ಬಯಸುತ್ತೇನೆ. ನನ್ನ ಸೊಸೆಗಾಗಿ ಸರ್ಕಾರ ಏನಾದರೂ ಮಾಡಬೇಕೆಂದು ನಾನು ಬಯಸುತ್ತೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...