Homeಮುಖಪುಟತಮಿಳುನಾಡಿನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ; 26 ವರ್ಷದ ದಲಿತ ಯುವಕನ ಕೊಲೆ

ತಮಿಳುನಾಡಿನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ; 26 ವರ್ಷದ ದಲಿತ ಯುವಕನ ಕೊಲೆ

- Advertisement -
- Advertisement -

ತಮಿಳುನಾಡಿನ ಚೆನ್ನೈನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಅತಿ ಹಿಂದುಳಿದ ಜಾತಿಗೆ (ಒಬಿಸಿ) ಸೇರಿದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದ ಆದಿ ದ್ರಾವಿಡ (ಎಸ್‌ಸಿ) ಸಮುದಾಯದ ಯುವಕನನ್ನು ಪತ್ನಿ ಸಹೋದರನೆ ಹತ್ಯೆ ಮಾಡಿದ್ದಾನೆ.

ಶಂಕಿತ ಮರ್ಯಾದೆಗೇಡು ಹತ್ಯೆಯ ಪ್ರಕರಣದಲ್ಲಿ 26 ವರ್ಷದ ದಲಿತ ಯುವಕನನ್ನು ಚೆನ್ನೈನಲ್ಲಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ಅಪರಾಧಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸೋದರ ಸೇರಿದಂತೆ ಐವರು ಶಂಕಿತರನ್ನು ಈಗಾಗಲೇ ಬಂಧಿಸಲಾಗಿದೆ.

ಹತ್ಯೆಯಾದ ದಲಿತ ಯುವಕನು ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಪ್ರವೀಣ್ ಎಂದು ಗುರುತಿಸಲಾಗಿದೆ. ನಗರದ ಪಲ್ಲಿಕರಣೈ ಬಳಿ ಶನಿವಾರ ಈ ಘಟನೆ ನಡೆದಿದೆ; ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಚೆನ್ನೈನ ಪಲ್ಲಿಕರಣೈನಲ್ಲಿರುವ ಖಾಸಗಿ ಬಾರ್‌ನಲ್ಲಿ ಪ್ರವೀಣ್‌ನನ್ನು ಅವನ ಹೆಂಡತಿಯ ಸಹೋದರ ಮತ್ತು ಅವನ ಸ್ನೇಹಿತರು ಕೊಲೆ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಪ್ರವೀಣ್ ಮತ್ತು ಶರ್ಮಿ ಅವರು ನವೆಂಬರ್ 2023ರಲ್ಲಿ ವಿವಾಹ ನೋಂದಾಯಿಸಿಕೊಳ್ಳುವ ಮೂಲಕ ಮದುವೆಯಾಗಿದ್ದರು. ಏಕೆಂದರೆ, ಅವರ ಕುಟುಂಬಗಳು ಅವರ ಅಂತರ್ಜಾತಿ ಸಂಬಂಧವನ್ನು ಒಪ್ಪಿರಲಿಲ್ಲ. ಪ್ರವೀಣ್ ಪರಿಶಿಷ್ಟ ಜಾತಿಯಡಿ ಬರುವ ಆದಿ ದ್ರಾವಿಡರ್ ಸಮುದಾಯಕ್ಕೆ ಸೇರಿದವರಾಗಿದ್ದರೆ, ಶರ್ಮಿ ಒಬಿಸಿ ಅಡಿಯಲ್ಲಿ ಬರುವ ಯಾದವ ಜಾತಿಗೆ ಸೇರಿದವರು.

ಶರ್ಮಿಯ ಸಹೋದರ ದಿನೇಶ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಪಲ್ಲಿಕರಣೈನಲ್ಲಿರುವ ಖಾಸಗಿ ಬಾರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಪ್ರವೀಣ್ ಕೂಡ ಇದ್ದರು. ಗುಂಪು ಪ್ರವೀಣ್ ಬಳಿಗೆ ಬಂದಿತು ಮತ್ತು ವಾಗ್ವಾದ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ದಿನೇಶ್ ಮತ್ತು ಆತನ ಸ್ನೇಹಿತರು ತಮ್ಮೊಂದಿಗೆ ತಂದಿದ್ದ ಚಾಕುಗಳನ್ನು ಹೊರತೆಗೆದು ಪ್ರವೀಣ್ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ತೀವ್ರವಾಗಿ ಗಾಯಗೊಂಡ ಪ್ರವೀಣ್‌ನನ್ನು ಕ್ರೋಂಪೇಟೆಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಎಸ್ 10 ಪಲ್ಲಿಕರನೈ ಪೊಲೀಸ್ ಠಾಣೆಯಲ್ಲಿ ದಿನೇಶ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಲ್ಲ ಐವರು ಆರೋಪಿಗಳನ್ನು ಫೆಬ್ರವರಿ 25 ರಂದು ಮಂಬಕ್ಕಂ ಬಳಿ ಪೊಲೀಸರು ಬಂಧಿಸಿದ್ದರು.

ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು, ಐವರು ಆರೋಪಿಗಳಾದ ಸ್ಟೀಫನ್ ಕುಮಾರ್, ಜೋತಿ ಲಿಂಗಂ, ಶ್ರೀರಾಮ್, ಅಶೋಕ್, ವಿಷ್ಣು ರಾಜ್ ಮತ್ತು ದಿನೇಶ್ ಅವರನ್ನು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಪ್ರವೀಣ್ ಶರ್ಮಿಳಾಳನ್ನು ಆಕೆಯ ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಶನಿವಾರ ಊಟ ಖರೀದಿಸಲು ಪ್ರವೀಣ್ ಮನೆಯಿಂದ ಹೊರಬಂದಿದ್ದರು, ಅದೇ ಸಮಯಕ್ಕೆ ಅಲ್ಲಿಗೆ ಬಂದಿದ್ದ ಶರ್ಮಿಳಾ ಅವರ ಸಹೋದರ ದಿನೇಶ್ ಮತ್ತು ಇತರ ನಾಲ್ವರು ಆರೋಪಿಗಳು ಆತನನ್ನು ಸುತ್ತುವರೆದು ಹಲ್ಲೆ ನಡೆಸಿದ್ದಾರೆ.

ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರವೀಣ್ ಅವರ ತಂದೆ ಗೋಪಿ, ‘ನನ್ನ ಮಗ ಊಟ ಖರೀದಿಸಲು ಹೊರಗೆ ಹೋಗಿದ್ದ; ಎರಡು ಗಂಟೆಯಾದರೂ ಅವನು ಹಿಂತಿರುಗದಿದ್ದಾಗ, ನಾನು ಚಿಂತೆ ಮಾಡಲು ಪ್ರಾರಂಭಿಸಿದೆ. ನನ್ನ ಸೊಸೆ ಅಳಲು ಪ್ರಾರಂಭಿಸಿದಾಗ ಮಾತ್ರ, ಏನೋ ಆಗಿದೆ ಎಂದು ನನಗೆ ಅರ್ಥವಾಯಿತು. ಕೊಲೆಯಲ್ಲಿ ಭಾಗಿಯಾದ ಅವರೆಲ್ಲರಿಗೂ ಶಿಕ್ಷೆಯಾಗಬೇಕೆಂದು ನಾನು ಬಯಸುತ್ತೇನೆ. ನನ್ನ ಸೊಸೆಗಾಗಿ ಸರ್ಕಾರ ಏನಾದರೂ ಮಾಡಬೇಕೆಂದು ನಾನು ಬಯಸುತ್ತೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...