Homeಕರ್ನಾಟಕಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ - ಬಜರಂಗದಳ ಕಾರ್ಯಕರ್ತರ ಬಂಧನ

ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

- Advertisement -
- Advertisement -

ಮಂಗಳೂರಿನಲ್ಲಿ ಮತ್ತೊಮ್ಮೆ ಅನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ. ಜೊತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಘಟನೆ ಯಾವಾಗ ನಡೆದಿದೆ ಎಂದು ಇನ್ನೂ ತಿಳಿದು ಬಂದಿಲ್ಲ.

ಏಳು ವೈದ್ಯಕೀಯ ವಿದ್ಯಾರ್ಥಿಗಳು ಪಿಕ್‌ನಿಕ್ ತೆರಳಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಿಂದಿರುಗುವಾಗ ಪಡುಬಿದ್ರಿ ಪೆಟ್ರೋಲ್‌ ಬಂಕ್‌ನಲ್ಲಿ ವಿದ್ಯಾರ್ಥಿಗಳನ್ನು ತಡೆದು, ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಬಜರಂಗದಳದ ಕಾರ್ಯಕರ್ತರಿಬ್ಬರ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್‌ ಶಶಿಕುಮಾರ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ವಾರ್ತಾಭಾರತಿ ವರದಿ ಮಾಡಿದೆ. ಘಟನೆಯು ಸುರತ್ಕಲ್ ಟೋಲ್‌ಗೇಟ್‌ ಸಮೀಪ ನಡೆದಿದೆ ಎನ್ನಲಾಗಿದೆ ಎಂದು ಪತ್ರಿಕೆಯು ವರದಿ ಮಾಡಿದೆ.

ಇತ್ತೀಚೆಗಷ್ಟೇ ತನ್ನ ಸಹೋದ್ಯೋಗಿ ಹಾಗೂ ಇನ್ನೊಬ್ಬ ಮುಸ್ಲಿಂ ಗೆಳೆಯನೊಂದಿಗೆ ಹೋಟೆಲೊಂದರಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ, ಬಜರಂಗದಳದ ಸುಮಾರು ಐದು ಜನರ ತಂಡವೊಂದು ಕಿರುಕುಳ ನೀಡಿತ್ತು. ಈ ಸಂಬಂಧ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಭಜರಂಗದಳದ ಸದಸ್ಯರನ್ನು ಬಂಧಿಸಿದ್ದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಹಲವಾರು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ವರದಿಯಾಗಿತ್ತು. ಬಂಟ್ವಾಳದಲ್ಲಿ ಕಾರಿಂಜ ದೇವಸ್ಥಾನಕ್ಕೆ ತೆರಳಿದ್ದ ಆರು ವಿದ್ಯಾರ್ಥಿಗಳನ್ನು ತಡೆದು ಹಲವು ಗಂಟೆಗಳ ಕಾಲ ಪ್ರಶ್ನಿಸಿದ್ದ ತಂಡದ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಇದಕ್ಕಿಂಲೂ ಮುಂಚೆ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ವಿಭಿನ್ನಕೋಮಿನ ಯುವಕ ಯುವತಿಯರು ಒಟ್ಟಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಆರೋಪಿಸಿ ಬಸ್ಸನ್ನು ತಡೆದಿದ್ದು ವರದಿಯಾಗಿತ್ತು.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ಇದನ್ನೂ ಓದಿ: ದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

‘ಸ್ನೇಹಿತರ’ ಮೇಲಿನ ದಾಳಿಯು ಮೋದಿಯ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

0
ತೆಲಂಗಾಣದಲ್ಲಿ ಚುನಾವಣಾ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಚುನಾವಣೆ ಘೋಷಣೆಯಾದ ಬಳಿಕ ರಾಹುಲ್ ಗಾಂಧಿಯೇಕೆ ಅದಾನಿ–ಅಂಬಾನಿ ಬಗ್ಗೆ ಮಾತನಾಡುತ್ತಿಲ್ಲ. ಏನಾದರೂ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರಾ? ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಎಐಸಿಸಿ...