Homeದಲಿತ್ ಫೈಲ್ಸ್ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು...

ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು ಹಾರಾಟ

- Advertisement -
- Advertisement -

ಮೇಲ್ವರ್ಗದ ಜನರಿಗಾಗಿ ಮೀಸಲಾದ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕಾಗಿ ದಲಿತ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳ ಗುಂಪೊಂದು ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದಿಗ್ಗಾ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹಲ್ಲೆ ನಡೆಸಿದ್ದಲ್ಲದೆ ತನ್ನ ಮೇಲೆ ದುಷ್ಕರ್ಮಿಗಳು ಗುಂಡು ಕೂಡಾ ಹಾರಿಸಿದ್ದಾರೆ ಎಂದು ಸಂತ್ರಸ್ತ ಹೇಳಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಸಂಜೆ ಚತುರ ರಾಮ್ ತನ್ನ ಪತ್ನಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಪಾತ್ರೆಯಲ್ಲಿದ್ದ ನೀರು ಕುಡಿದಿದ್ದಾರೆ. ಈ ವೇಳೆ ನಾಲ್ಕೈದು ಜನರು ಅವರನ್ನು ನಿಂದಿಸಿ ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿದ್ದಾರೆ.

ಮೇಲ್ವರ್ಗದ ಜನರಿಗೆ ಇಟ್ಟಿದ್ದ ಪಾತ್ರೆಯಿಂದ ನೀರು ಕುಡಿದಿದ್ದಕ್ಕಾಗಿ ದುಷ್ಕರ್ಮಿಗಳು ಅವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚತುರ ರಾಮ್ ಅವರ ಕಿವಿಯ ಹಿಂದೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ದು ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ: ಮಕ್ಕಳಿಗೆ ವೇದಗಣಿತ ಕಲಿಸುವುದಕ್ಕೆ ತಜ್ಞರು, ಹೋರಾಟಗಾರರ ವಿರೋಧ

ಸಂತ್ರಸ್ತ ಚತುರ ರಾಮ್ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಗುಂಡು ಹಾರಿಸಿದ್ದಾರೆ ಎಂಬ ಚತುರ ರಾಮ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು ಈ ಹೇಳಿಕೆಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನೀರಿನ ಮಡಕೆಯನ್ನು ಮುಟ್ಟಿದ ಆರೋಪದ ಮೇಲೆ ಒಂಬತ್ತು ವರ್ಷದ ದಲಿತ ವಿದ್ಯಾರ್ಥಿ ತನ್ನ ಶಿಕ್ಷಕನಿಂದ ಥಳಿಸಲ್ಪಟ್ಟು ಸಾವಿಗೀಡಾಗಿದ್ದರು. ಈ ಪ್ರಕರಣದಲ್ಲಿ ಶಿಕ್ಷಕನನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ (IPC) ಮತ್ತು SC/ST ಕಾಯಿದೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮರ್ಯಾದೆಗೇಡು ಹತ್ಯೆ ತಡೆಗೆ ವಿಶೇಷ ಕಾನೂನು : ಸಿಎಂ ಸಿದ್ದರಾಮಯ್ಯ

ಮರ್ಯಾದೆಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ...

ವೆನೆಜುವೆಲಾ ಮೇಲೆ ಅಮೆರಿಕ ದಾಳಿಗೆ ಖಂಡನೆ : ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಭಾರತದ ಎಡಪಕ್ಷಗಳು

ವೆನೆಜುವೆಲಾ ಮೇಲೆ ಅಮೆರಿಕ ನಡೆಸಿದ ಆಕ್ರಮಣವನ್ನು ಭಾರತದ ಎಡಪಕ್ಷಗಳು ತೀವ್ರವಾಗಿ ಖಂಡಿಸಿದ್ದು, ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರ ಬಂಧನವನ್ನು ‘ಅಪಹರಣ’ ಎಂದು ಹೇಳಿದೆ. ಹಾಗೆಯೇ, ಅಮೆರಿಕದ...

ವೆನೆಜುವೆಲಾ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 40 ಮಂದಿ ಸಾವು: ವರದಿ

ಶನಿವಾರ ನಡೆದ ದಾಳಿಯಲ್ಲಿ ವೆನೆಜುವೆಲಾದಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವೆನೆಜುವೆಲಾದ ಹಿರಿಯ ಅಧಿಕಾರಿಯೊಬ್ಬರು ನ್ಯೂಯಾರ್ಕ್ ಟೈಮ್ಸ್‌ಗೆ ತಿಳಿಸಿದ್ದಾರೆ, ಅವರಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ನಾಗರಿಕರು ಸೇರಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ...

ಅತ್ಯಾಚಾರ-ಕೊಲೆ ಅಪರಾಧಿ ಗುರ್ಮೀತ್ ರಾಮ್ ರಹೀಮ್‌ಗೆ ಮತ್ತೆ 40 ದಿನಗಳ ಪೆರೋಲ್

ಇಬ್ಬರು ಸಾಧ್ವಿಯರ ಮೇಲಿನ ಅತ್ಯಾಚಾರ ಮತ್ತು ಪತ್ರಕರ್ತನ ಹತ್ಯೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಮತ್ತೊಮ್ಮೆ 40 ದಿನಗಳ ಪೆರೋಲ್ ಮಂಜೂರಾಗಿದೆ....

ವೆನೆಜುವೆಲಾ ಮೇಲೆ ಅಮೆರಿಕಾ ದಾಳಿ: ಕಳವಳ ವ್ಯಕ್ತಪಡಿಸಿದ ಭಾರತ: ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಕರೆ

ನವದೆಹಲಿ: ಅಮೆರಿಕವು ತೈಲ ಸಮೃದ್ಧ ದೇಶದ ಮೇಲೆ ದಾಳಿ ಮಾಡಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಮಿಲಿಟರಿ ಕಾರ್ಯಾಚರಣೆಯಲ್ಲಿ ಅಪಹರಿಸಿದ ನಂತರ, ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳು "ತೀವ್ರ ಕಳವಳಕಾರಿ...

ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಅಮೆರಿಕ ಸೇನೆ ಬಂಧಿಸಿರುವ ಹಿನ್ನೆಲೆ, ಹಂಗಾಮಿ ಅಧ್ಯಕ್ಷೆಯಾಗಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರಿಗೆ ವೆನಿಜುವೆಲಾದ ಸುಪ್ರೀಂ ಕೋರ್ಟ್...

ರ‍್ಯಾಗಿಂಗ್‌ಗೆ ದಲಿತ ವಿದ್ಯಾರ್ಥಿನಿ ಬಲಿ: ‘ಜಾತಿ ಮತ್ತು ಲಿಂಗ ಆಧಾರಿತ ಸಾಂಸ್ಥಿಕ ಹಿಂಸಾಚಾರದ ಗಂಭೀರ ನಿದರ್ಶನ’ ಎಂದ ಮಾನವ ಹಕ್ಕುಗಳ ಸಂಘಟನೆ

ಹಿಮಾಚಲ ಪ್ರದೇಶದ ಸರ್ಕಾರಿ ಕಾಲೇಜಿನಲ್ಲಿ 19 ವರ್ಷದ ದಲಿತ ವಿದ್ಯಾರ್ಥಿನಿಯ ಸಾವಿನ ನಂತರ, ದಲಿತ ಹಕ್ಕುಗಳ ಸಂಘಟನೆಗಳು ಶುಕ್ರವಾರ ಮೂವರು ಹಿರಿಯ ವಿದ್ಯಾರ್ಥಿಗಳು ಮತ್ತು ಕಾಲೇಜು ಪ್ರಾಧ್ಯಾಪಕರನ್ನು ಬಂಧಿಸಬೇಕು ಮತ್ತು ಅಧಿಕಾರಿಗಳು ಅದಕ್ಕೆ...

ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ

ಗಾಝಾ ಮೇಲೆ ವಿಧಿಸಲಾಗಿದ್ದ ದಿಗ್ಬಂಧನವನ್ನು ಮುರಿಯಲು ಪ್ರಯತ್ನಿಸಿದ ಫ್ಲೋಟಿಲ್ಲಾ ಹಡಗುಗಳನ್ನು ತಡೆದ ನಂತರ, ಅವುಗಳಲ್ಲಿದ್ದ ಜಗತ್ತಿನ ವಿವಿಧ ಭಾಗಗಳ ಹಲವು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿದೆ. ಈ ಬಂಧಿತರ ಮೇಲೆ ಇಸ್ರೇಲಿ...

‘ನನಗೆ, ನನ್ನ ಕುಟುಂಬಕ್ಕೆ ‘ಝಡ್‌’ ಶ್ರೇಣಿ ಭದ್ರತೆ ಒದಗಿಸಿ’: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನಾರ್ದನ ರೆಡ್ಡಿ ಪತ್ರ 

ಕೊಪ್ಪಳ: ಬಳ್ಳಾರಿಯಲ್ಲಿ ತಮ್ಮ ಮೇಲೆ "ಪೂರ್ವ ಯೋಜಿತ ಹತ್ಯೆ ಯತ್ನ" ನಡೆದಿದೆ ಎಂದು ಆರೋಪಿಸಿ, ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಗೃಹ ಸಚಿವ...

ಪೋಕ್ಸೋ ಪ್ರಕರಣದ ದೂರು ತಿರುಚಿದ ಪೊಲೀಸರು : ಸಂತ್ರಸ್ತೆಯ ತಾಯಿ ಆರೋಪ

​ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣವೊಂದನ್ನು ದಾಖಲಿಸುವ ವೇಳೆ ಸಂತ್ರಸ್ತೆಯ ತಾಯಿ ನೀಡಿದ ಮೂಲ ದೂರನ್ನು ತಿರುಚಿ, ಪೊಲೀಸರು ತಮಗೆ ಇಷ್ಟ ಬಂದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ...