Homeದಲಿತ್ ಫೈಲ್ಸ್ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು...

ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು ಹಾರಾಟ

- Advertisement -
- Advertisement -

ಮೇಲ್ವರ್ಗದ ಜನರಿಗಾಗಿ ಮೀಸಲಾದ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕಾಗಿ ದಲಿತ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳ ಗುಂಪೊಂದು ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದಿಗ್ಗಾ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹಲ್ಲೆ ನಡೆಸಿದ್ದಲ್ಲದೆ ತನ್ನ ಮೇಲೆ ದುಷ್ಕರ್ಮಿಗಳು ಗುಂಡು ಕೂಡಾ ಹಾರಿಸಿದ್ದಾರೆ ಎಂದು ಸಂತ್ರಸ್ತ ಹೇಳಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಸಂಜೆ ಚತುರ ರಾಮ್ ತನ್ನ ಪತ್ನಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಪಾತ್ರೆಯಲ್ಲಿದ್ದ ನೀರು ಕುಡಿದಿದ್ದಾರೆ. ಈ ವೇಳೆ ನಾಲ್ಕೈದು ಜನರು ಅವರನ್ನು ನಿಂದಿಸಿ ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿದ್ದಾರೆ.

ಮೇಲ್ವರ್ಗದ ಜನರಿಗೆ ಇಟ್ಟಿದ್ದ ಪಾತ್ರೆಯಿಂದ ನೀರು ಕುಡಿದಿದ್ದಕ್ಕಾಗಿ ದುಷ್ಕರ್ಮಿಗಳು ಅವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚತುರ ರಾಮ್ ಅವರ ಕಿವಿಯ ಹಿಂದೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ದು ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ: ಮಕ್ಕಳಿಗೆ ವೇದಗಣಿತ ಕಲಿಸುವುದಕ್ಕೆ ತಜ್ಞರು, ಹೋರಾಟಗಾರರ ವಿರೋಧ

ಸಂತ್ರಸ್ತ ಚತುರ ರಾಮ್ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಗುಂಡು ಹಾರಿಸಿದ್ದಾರೆ ಎಂಬ ಚತುರ ರಾಮ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು ಈ ಹೇಳಿಕೆಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನೀರಿನ ಮಡಕೆಯನ್ನು ಮುಟ್ಟಿದ ಆರೋಪದ ಮೇಲೆ ಒಂಬತ್ತು ವರ್ಷದ ದಲಿತ ವಿದ್ಯಾರ್ಥಿ ತನ್ನ ಶಿಕ್ಷಕನಿಂದ ಥಳಿಸಲ್ಪಟ್ಟು ಸಾವಿಗೀಡಾಗಿದ್ದರು. ಈ ಪ್ರಕರಣದಲ್ಲಿ ಶಿಕ್ಷಕನನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ (IPC) ಮತ್ತು SC/ST ಕಾಯಿದೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...