Homeದಲಿತ್ ಫೈಲ್ಸ್ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು...

ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು ಹಾರಾಟ

- Advertisement -
- Advertisement -

ಮೇಲ್ವರ್ಗದ ಜನರಿಗಾಗಿ ಮೀಸಲಾದ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕಾಗಿ ದಲಿತ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳ ಗುಂಪೊಂದು ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದಿಗ್ಗಾ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹಲ್ಲೆ ನಡೆಸಿದ್ದಲ್ಲದೆ ತನ್ನ ಮೇಲೆ ದುಷ್ಕರ್ಮಿಗಳು ಗುಂಡು ಕೂಡಾ ಹಾರಿಸಿದ್ದಾರೆ ಎಂದು ಸಂತ್ರಸ್ತ ಹೇಳಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಸಂಜೆ ಚತುರ ರಾಮ್ ತನ್ನ ಪತ್ನಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಪಾತ್ರೆಯಲ್ಲಿದ್ದ ನೀರು ಕುಡಿದಿದ್ದಾರೆ. ಈ ವೇಳೆ ನಾಲ್ಕೈದು ಜನರು ಅವರನ್ನು ನಿಂದಿಸಿ ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿದ್ದಾರೆ.

ಮೇಲ್ವರ್ಗದ ಜನರಿಗೆ ಇಟ್ಟಿದ್ದ ಪಾತ್ರೆಯಿಂದ ನೀರು ಕುಡಿದಿದ್ದಕ್ಕಾಗಿ ದುಷ್ಕರ್ಮಿಗಳು ಅವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚತುರ ರಾಮ್ ಅವರ ಕಿವಿಯ ಹಿಂದೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ದು ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ: ಮಕ್ಕಳಿಗೆ ವೇದಗಣಿತ ಕಲಿಸುವುದಕ್ಕೆ ತಜ್ಞರು, ಹೋರಾಟಗಾರರ ವಿರೋಧ

ಸಂತ್ರಸ್ತ ಚತುರ ರಾಮ್ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಗುಂಡು ಹಾರಿಸಿದ್ದಾರೆ ಎಂಬ ಚತುರ ರಾಮ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು ಈ ಹೇಳಿಕೆಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನೀರಿನ ಮಡಕೆಯನ್ನು ಮುಟ್ಟಿದ ಆರೋಪದ ಮೇಲೆ ಒಂಬತ್ತು ವರ್ಷದ ದಲಿತ ವಿದ್ಯಾರ್ಥಿ ತನ್ನ ಶಿಕ್ಷಕನಿಂದ ಥಳಿಸಲ್ಪಟ್ಟು ಸಾವಿಗೀಡಾಗಿದ್ದರು. ಈ ಪ್ರಕರಣದಲ್ಲಿ ಶಿಕ್ಷಕನನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ (IPC) ಮತ್ತು SC/ST ಕಾಯಿದೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಗೋ ಏರ್ ಲೈನ್ಸ್, ಮುಗಿಯದ ಸಂಕಷ್ಟ: ಬೆಂಗಳೂರಿನಲ್ಲಿ 73 ವಿಮಾನ, ಸೇರಿ ಹಲವು ವಿಮಾನ ನಿಲ್ದಾಣಗಳಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಸಿಬ್ಬಂದಿ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ಕಾರ್ಯಾಚರಣೆಯಲ್ಲಿ ಬಹುದೊಡ್ಡ ಅಡಚಣೆಗಳನ್ನು ಎದುರಿಸಿದ್ದರಿಂದ ಡಿಸೆಂಬರ್ 3ರಿಂದ, ವಿವಿಧ ವಿಮಾನ ನಿಲ್ದಾಣಗಳಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ...

ಪುನರ್ವಸತಿ ಕೇಂದ್ರದಲ್ಲಿ ದಲಿತ ಯುವಕ ಸಾವು ಪ್ರಕರಣ; ನಾಲ್ವರು ಪೊಲೀಸರು ಅಮಾನತು

ಬೆಂಗಳೂರು ಪೊಲೀಸರ ಕಸ್ಟಡಿಯಲ್ಲಿ 22 ವರ್ಷದ ದಲಿತ ಯುವಕನಿಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಮಂಗಳವಾರ ಇನ್ಸ್‌ಪೆಕ್ಟರ್ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ನಂತರ, ಪುನರ್ವಸತಿ ಕೇಂದ್ರದಲ್ಲಿ ಅವರ...

ಉತ್ತರ ಪ್ರದೇಶ| ಮುಜಫರ್‌ನಗರದ ಮಸೀದಿ-ದೇವಸ್ಥಾನಗಳ 55 ಕ್ಕೂ ಹೆಚ್ಚು ಧ್ವನಿವರ್ಧಕ ತೆರವು

ಉತ್ತರ ಪ್ರದೇಶದ ಮುಜಫರ್‌ನಗರದ ಪೊಲೀಸರು, ನಗರದಲ್ಲಿ ಹೆಚ್ಚಿನ ಶಬ್ದ ಮಾಡುತ್ತಿದ್ದ ಧ್ವನಿವರ್ಧಕಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಧ್ವನಿ ಮಿತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿವಿಧ ಮಸೀದಿಗಳಿಂದ 55 ಕ್ಕೂ...

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಕೌತಾಳ್ ಮಾಹಿತಿ...

ಮೊಬೈಲ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸ್ಮಾರ್ಟ್‌ ಫೋನ್ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಅಪ್ಲಿಕೇಶನ್ ಪ್ರಿ-ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ (ಡಿ.3) ಹಿಂಪಡೆದಿದೆ. ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಸಾವು, ಇಬ್ಬರು ಯೋಧರು ಹುತಾತ್ಮ

ಛತ್ತೀಸ್‌ಗಢದ ಬಿಜಾಪುರದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಆರು ಜನ ನಕ್ಸಲರು ಸಾವನ್ನಪ್ಪಿದ್ದು, ದುರದೃಷ್ಟವಶಾತ್, ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಇಬ್ಬರು ಜವಾನರು ಹುತಾತ್ಮರಾಗಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ,...

ಏಪ್ರಿಲ್ 2026 ರಿಂದ 2 ಹಂತದ ಡಿಜಿಟಲ್ ಜನಗಣತಿ: ಕೇಂದ್ರ ಸರ್ಕಾರ

2027 ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಮೊದಲ ಹಂತವು ಏಪ್ರಿಲ್ ಮತ್ತು ಸೆಪ್ಟೆಂಬರ್ 2026 ರ ನಡುವೆ ನಿಗದಿಯಾಗಿದೆ. ಎರಡನೇ ಹಂತವು ಫೆಬ್ರವರಿ...

ಬಂಗಾಳಿ ಕಾರ್ಮಿಕರನ್ನು ಒಡಿಶಾ ಪೊಲೀಸರು ಬಲವಂತವಾಗಿ ಹೊರಹಾಕಿದ್ದಾರೆ

ಒಡಿಶಾದ ನಯಾಗಢ ಜಿಲ್ಲೆಯ ಪೊಲೀಸರು ನಾಲ್ಕು ಜನ ಬಂಗಾಳಿ ಮಾತನಾಡುವ ಮುಸ್ಲಿಂ ವ್ಯಾಪಾರಿಗಳನ್ನು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸುವ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳ ಹೊರತಾಗಿಯೂ ಬಲವಂತವಾಗಿ ಹೊರಹಾಕಿದ್ದಾರೆ ಎಂದು ತೃಣಮೂಲ...

‘ಸಂಚಾರ್ ಸಾಥಿ ಆ್ಯಪ್‌’ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

ಕೇಂದ್ರ ಸರ್ಕಾರ ಎಲ್ಲಾ ಸ್ಮಾರ್ಟ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯಗೊಳಿಸಿರುವುದರಿಂದ ಜನರು ಗೌಪ್ಯತೆ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಕುರಿತು ಬುಧವಾರ (ಡಿ.3) ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ದೂರ ಸಂಪರ್ಕ ಸಚಿವ ಜೋತಿರಾಧಿತ್ಯ...

ಮಹಾರಾಷ್ಟ್ರ| ವರದಕ್ಷಿಣೆಯಾಗಿ ಬೈಕ್‌ ಕೊಡಲಿಲ್ಲವೆಂದು ಪತ್ನಿಗೆ ‘ತಲಾಖ್’ ನೀಡಿದ ಪತಿ

ಭಾರತೀಯ ಕಾನೂನಿನಡಿಯಲ್ಲಿ ಕ್ರಿಮಿನಲ್ ಅಪರಾಧವಾಗಿದ್ದರೂ, ವರದಕ್ಷಿಣೆಯಾಗಿ ಮೋಟಾರ್ ಸೈಕಲ್ (ಬೈಕ್‌) ಕೊಡದ ಕಾರಣ ತನ್ನ ಪತ್ನಿಗೆ 'ತ್ರಿವಳಿ ತಲಾಖ್' ನೀಡಿದ ಆರೋಪದ ಮೇಲೆ ಮಹಾರಾಷ್ಟ್ರದ ಭಿವಂಡಿಯ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಥಾಣೆ...