Homeಮುಖಪುಟಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

20 ದಿನಗಳಲ್ಲಿ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದ ಮೂರನೇ ಅತ್ಯಾಚಾರ ಕೊಲೆ ಇದಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಗುರುವಾರ ಬೆಳಿಗ್ಗೆ, ಮೂರು ವರ್ಷದ ಬಾಲಕಿಯೊಬ್ಬಳು ಹೊಲವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಅತ್ಯಾಚಾರದ ನಂತರ, ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

20 ದಿನಗಳಲ್ಲಿ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದ ಮೂರನೇ ಅತ್ಯಾಚಾರ ಕೊಲೆ ಇದಾಗಿದೆ.

ಬಾಲಕಿಯು ಬುಧವಾರದಿಂದ ಕಾಣೆಯಾಗಿದ್ದಳು. ನಂತರ ಆಕೆಯ ಮೃತ ದೇಹವು, ತಲೆಯಲ್ಲಿ ಗಾಯದ ಗುರುತುಗಳೊಂದಿಗೆ, ಮನೆಯಿಂದ ಕೇವಲ ಅರ್ಧ ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿದೆ.


ಇದನ್ನೂ ಓದಿ: ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು


ನಿನ್ನೆ, ಪೊಲೀಸರು ಇದನ್ನು ಕೊಲೆ ಎಂದು ಕರೆದಿದ್ದರು. ಆದರೆ, ನಂತರದ ಶವಪರೀಕ್ಷೆಯಿಂದ ಲೈಂಗಿಕ ದೌರ್ಜನ್ಯ ಖಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.

ಬಾಲಕಿಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ, “ಲೆಖ್ರಾಮ್ ಎಂಬುವವನು ಹಳೆಯ ದ್ವೇಷದಿಂದ ತನ್ನ ಮಗಳನ್ನು ಅಪಹರಿಸಿ ಕೊಂದಿದ್ದಾನೆ” ಎಂದು ಆರೋಪಿಸಿದ್ದಾರೆ. ಆರೋಪಿ ವ್ಯಕ್ತಿಯನ್ನು ಹುಡುಕಲು ಪೊಲೀಸರು ನಾಲ್ಕು ತಂಡಗಳನ್ನು ರಚಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಇಂತಹದ್ದೇ ಮತ್ತೊಂದು ಪ್ರಕರಣ, ವಿದ್ಯಾರ್ಥಿವೇತನ ಅರ್ಜಿಯನ್ನು ಭರ್ತಿ ಮಾಡಲು ಮನೆ ಬಿಟ್ಟು ತೆರಳಿದ್ದ 17 ವರ್ಷದ ಬಾಲಕಿ ತನ್ನ ಗ್ರಾಮದ ಹೊರಗೆ ಶವವಾಗಿ ಪತ್ತೆಯಾದ ನಂತರ ಲಖಿಂಪುರ ಖೇರಿ ಜಿಲ್ಲೆ ಸುದ್ದಿಯಲ್ಲಿತ್ತು. ಆಕೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಆಕೆಯ ದೇಹವು ತನ್ನ ಹಳ್ಳಿಯಿಂದ 200 ಮೀಟರ್ ದೂರದಲ್ಲಿರುವ ಕೊಳದ ಬಳಿ ಪತ್ತೆಯಾಗಿತ್ತು.

ಇದಕ್ಕೂ ಮುನ್ನ ಅದೇ ಜಿಲ್ಲೆಯ ಇನ್ನೊಂದು ಪ್ರಕರಣದಲ್ಲಿ, 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ,  ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಬಾಲಕಿ ಮಧ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದಳು. ಅವಳು ಮನೆಗೆ ಹಿಂತಿರುಗದಿದ್ದಾಗ, ಆಕೆಯ ಕುಟುಂಬವು ಅವಳನ್ನು ಹುಡುಕಲು ಪ್ರಾರಂಭಿಸಿತು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಅವಳು ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಸಾರ್ವಜನಿಕರು ಸೇರಿದಂತೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷವು ಯೋಗಿಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...