Homeಮುಖಪುಟರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಹಿರಿಯ ಮಹಿಳೆಯ ಚಿತ್ರವು ಅಕ್ಟೋಬರ್‌ನದ್ದಾಗಿದೆ. 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್, ಪಂಜಾಬ್‌ನ ಬಟಿಂಡಾ ಜಿಲ್ಲೆಯವರಾಗಿದ್ದಾರೆ

- Advertisement -
- Advertisement -

ದೆಹಲಿ ಸಿಖ್ ಗುರುದ್ವಾರ ಮ್ಯಾನೇಜ್ಮೆಂಟ್ ಕಮಿಟಿ (DSGMC) ಬಾಲಿವುಡ್ ನಟಿ ಕಂಗನಾ ರಣಾವತ್, ತಮ್ಮ ಅವಹೇಳನಕಾರಿ ಟ್ವಿಟ್‌ಗೆ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಲೀಗಲ್ ನೋಟಿಸ್ ಕಳುಹಿಸಿದೆ. ನಟಿ ಕಂಗನಾ, ಹಿರಿಯ ವೃದ್ಧೆಯನ್ನು, ದೆಹಲಿ ಚಲೋ ರೈತರ ಪ್ರತಿಭನೆಯಲ್ಲಿ ಭಾಗಿಯಾಗಿರುವ ಬಿಲ್ಕೀಸ್ ಬಾನು ಎಂದು ತಪ್ಪಾಗಿ ಗುರುತಿಸಿದ್ದರು. ಜೊತೆಗೆ 100 ರೂಪಾಯಿಗೆ ಸಿಗುತ್ತಾರೆ ಎಂದು ವ್ಯಂಗ್ಯವಾಡಿದ್ದರು.

ನಟಿ ಕಂಗನಾ ಟ್ವೀಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆ ವ್ಯಕ್ತವಾದ ನಂತರ ವೃದ್ಧೆಯ ಮೇಲಿನ ಟ್ವೀಟ್  ಅಳಿಸಿದ್ದಾರೆ. ಟ್ವೀಟ್‌ಗೆ ಆಕ್ರೋಶ ವ್ಯಕ್ತಪಡಿಸಿರುವ DSGMC ಲೀಗಲ್ ನೋಟಿಸ್ ಕಳುಹಿಸಿ, ಕ್ಷಮೆ ಕೇಳುವಂತೆ ಆಗ್ರಹಿಸಿದೆ.

“ಹಿರಿಯ ತಾಯಿಯನ್ನು 100 ರೂ.ಗಳಿಗೆ ಲಭ್ಯವಿರುವ ಮಹಿಳೆ ಎಂದು ಕರೆದು ಅವಹೇಳನಕಾರಿ ಟ್ವೀಟ್ ಮಾಡಿರುವ ಕಂಗನಾರಿಗೆ ನಾವು ಲೀಗಲ್ ನೋಟಿಸ್ ಕಳುಹಿಸಿದ್ದೇವೆ. ಅವರ ಟ್ವೀಟ್‌ಗಳು ರೈತರ ಪ್ರತಿಭಟನೆಯನ್ನು ರಾಷ್ಟ್ರ ವಿರೋಧಿ ಎಂದು ಬಿಂಬಿಸುತ್ತವೆ. ರೈತರ ಪ್ರತಿಭಟನೆಯ ಬಗ್ಗೆ ಅವರು ಮಾಡಿದ ಅವಹೇಳನಕಾರಿದ ಟೀಕೆಗಳಿಗೆ ಬೇಷರತ್ತಾಗಿ ಕ್ಷಮೆಯಾಚಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಡಿಎಸ್‌ಜಿಎಂಸಿಯ ಅಧ್ಯಕ್ಷ ಮಂಜಿಂದರ್ ಸಿಂಗ್ ಸಿರ್ಸಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ಕಳೆದ ನವೆಂಬರ್‌ 27 ರಂದು ನಟಿ ಕಂಗನಾ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್. ಅವರು 100 ರೂಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಟ್ವೀಟ್ ಮಾಡಿ ವಿವಾದ ಸೃಷ್ಟಿಸಿದ್ದರು.

ನಟಿ ಆ ಟ್ವೀಟನ್ನು ಅಳಿಸಿದ್ದು, ಶಾಹಿನ್ ಭಾಗ್ ಅಜ್ಜಿಯ ಕುರಿತು ಸುಳ್ಳು ಹಾಗೂ ಅವಮಾನಕರ ಹೇಳಿಕೆಗೆ ಕ್ಷಮೆ ಕೋರುವಂತೆ ನಟಿಗೆ ಪಂಜಾಬ್‌ನ ವಕೀಲರೊಬ್ಬರು ಕೂಡ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

“ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೊದಲು ರಣಾವತ್ ಅವರು ದೃಢಿಕರಿಸಿದ ಮಾಹಿತಿಯನ್ನು ಹೊಂದಿರಬೇಕು ಮತ್ತು ಅವರ ಟ್ವೀಟ್‌ಗಳ ಬಗ್ಗೆ ಕ್ಷಮೆಯಾಚಿಸಬೇಕು” ಎಂದು ವಕೀಲ ಹರ್ಕಮ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಹಿರಿಯ ಮಹಿಳೆಯ ಚಿತ್ರವು ಅಕ್ಟೋಬರ್‌ನದ್ದಾಗಿದೆ. ತಮ್ಮ ಮೇಲಿನ ಅಪಪ್ರಚಾರದ ಬಗ್ಗೆ ಮಾತನಾಡಿದ್ದ ಅವರು, “ತನ್ನ ಬಗ್ಗೆ ನಟಿಯೊಬ್ಬರು ಹೇಳಿಕೆ ನೀಡಿದ್ದಾಗಿ ನನಗೆ ಬೇರೊಬ್ಬರಿಂದ ಮಾಹಿತಿ ಸಿಕ್ಕಿತು. ಅವರೆಂದು ನನ್ನ ಮನೆಗೆ ಬಂದಿಲ್ಲ, ಅದು ತುಂಬಾ ಕೆಟ್ಟ ಹೇಳಿಕೆ. ನನಗೆ 73 ವರ್ಷ ವಯಸ್ಸಾಗಿದ್ದರೂ ಯಾವಾಗ ಬೇಕಿದ್ದರೂ ಪ್ರತಿಭಟನೆಗೆ ಸೇರಲು ಸಿದ್ದ” ಎಂದು ಹೇಳಿದ್ದರು.

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಬಹದ್ದೂರ್‌‌ ಗಡ್‌‌ ಜಂಡಿಯಾನ್ ಗ್ರಾಮದ 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್. 13 ಎಕರೆ ಭೂಮಿಯನ್ನು ಹೊಂದಿರುವ ಇವರು ಕೃಷಿಯಲ್ಲೇ ತಮ್ಮ ಇಡೀ ಜೀವನವನ್ನು ಕಳೆದಿದ್ದಾರೆ. ಜೊತೆಗೆ ರೈತ ಚಳುವಳಿಯಲ್ಲಿ ಕೂಡಾ ತೊಡಗಿಸಿಕೊಂಡಿದ್ದಾರೆ.

ನಟಿ ಕಂಗನಾ ಹೇಳಿಕೆಗೆ, ದಿಲ್ಜಿತ್ ದೋಸಾಂಜ್, ಪ್ರಿನ್ಸ್ ನರುಲ್ಲಾ, ಸರ್ಗುನ್ ಮೆಹ್ತಾ, ಹಿಮಾಂಶಿ ಖುರಾನಾ ಮತ್ತು ಇತರ ಹಲವಾರು ನಟರು ತಮ್ಮ ಟ್ವಿಟರ್‌ ಖಾತೆಯಲ್ಲಿ ನಟಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...