Homeಮುಖಪುಟರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಹಿರಿಯ ಮಹಿಳೆಯ ಚಿತ್ರವು ಅಕ್ಟೋಬರ್‌ನದ್ದಾಗಿದೆ. 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್, ಪಂಜಾಬ್‌ನ ಬಟಿಂಡಾ ಜಿಲ್ಲೆಯವರಾಗಿದ್ದಾರೆ

- Advertisement -
- Advertisement -

ದೆಹಲಿ ಸಿಖ್ ಗುರುದ್ವಾರ ಮ್ಯಾನೇಜ್ಮೆಂಟ್ ಕಮಿಟಿ (DSGMC) ಬಾಲಿವುಡ್ ನಟಿ ಕಂಗನಾ ರಣಾವತ್, ತಮ್ಮ ಅವಹೇಳನಕಾರಿ ಟ್ವಿಟ್‌ಗೆ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಲೀಗಲ್ ನೋಟಿಸ್ ಕಳುಹಿಸಿದೆ. ನಟಿ ಕಂಗನಾ, ಹಿರಿಯ ವೃದ್ಧೆಯನ್ನು, ದೆಹಲಿ ಚಲೋ ರೈತರ ಪ್ರತಿಭನೆಯಲ್ಲಿ ಭಾಗಿಯಾಗಿರುವ ಬಿಲ್ಕೀಸ್ ಬಾನು ಎಂದು ತಪ್ಪಾಗಿ ಗುರುತಿಸಿದ್ದರು. ಜೊತೆಗೆ 100 ರೂಪಾಯಿಗೆ ಸಿಗುತ್ತಾರೆ ಎಂದು ವ್ಯಂಗ್ಯವಾಡಿದ್ದರು.

ನಟಿ ಕಂಗನಾ ಟ್ವೀಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆ ವ್ಯಕ್ತವಾದ ನಂತರ ವೃದ್ಧೆಯ ಮೇಲಿನ ಟ್ವೀಟ್  ಅಳಿಸಿದ್ದಾರೆ. ಟ್ವೀಟ್‌ಗೆ ಆಕ್ರೋಶ ವ್ಯಕ್ತಪಡಿಸಿರುವ DSGMC ಲೀಗಲ್ ನೋಟಿಸ್ ಕಳುಹಿಸಿ, ಕ್ಷಮೆ ಕೇಳುವಂತೆ ಆಗ್ರಹಿಸಿದೆ.

“ಹಿರಿಯ ತಾಯಿಯನ್ನು 100 ರೂ.ಗಳಿಗೆ ಲಭ್ಯವಿರುವ ಮಹಿಳೆ ಎಂದು ಕರೆದು ಅವಹೇಳನಕಾರಿ ಟ್ವೀಟ್ ಮಾಡಿರುವ ಕಂಗನಾರಿಗೆ ನಾವು ಲೀಗಲ್ ನೋಟಿಸ್ ಕಳುಹಿಸಿದ್ದೇವೆ. ಅವರ ಟ್ವೀಟ್‌ಗಳು ರೈತರ ಪ್ರತಿಭಟನೆಯನ್ನು ರಾಷ್ಟ್ರ ವಿರೋಧಿ ಎಂದು ಬಿಂಬಿಸುತ್ತವೆ. ರೈತರ ಪ್ರತಿಭಟನೆಯ ಬಗ್ಗೆ ಅವರು ಮಾಡಿದ ಅವಹೇಳನಕಾರಿದ ಟೀಕೆಗಳಿಗೆ ಬೇಷರತ್ತಾಗಿ ಕ್ಷಮೆಯಾಚಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಡಿಎಸ್‌ಜಿಎಂಸಿಯ ಅಧ್ಯಕ್ಷ ಮಂಜಿಂದರ್ ಸಿಂಗ್ ಸಿರ್ಸಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ಕಳೆದ ನವೆಂಬರ್‌ 27 ರಂದು ನಟಿ ಕಂಗನಾ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್. ಅವರು 100 ರೂಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಟ್ವೀಟ್ ಮಾಡಿ ವಿವಾದ ಸೃಷ್ಟಿಸಿದ್ದರು.

ನಟಿ ಆ ಟ್ವೀಟನ್ನು ಅಳಿಸಿದ್ದು, ಶಾಹಿನ್ ಭಾಗ್ ಅಜ್ಜಿಯ ಕುರಿತು ಸುಳ್ಳು ಹಾಗೂ ಅವಮಾನಕರ ಹೇಳಿಕೆಗೆ ಕ್ಷಮೆ ಕೋರುವಂತೆ ನಟಿಗೆ ಪಂಜಾಬ್‌ನ ವಕೀಲರೊಬ್ಬರು ಕೂಡ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

“ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೊದಲು ರಣಾವತ್ ಅವರು ದೃಢಿಕರಿಸಿದ ಮಾಹಿತಿಯನ್ನು ಹೊಂದಿರಬೇಕು ಮತ್ತು ಅವರ ಟ್ವೀಟ್‌ಗಳ ಬಗ್ಗೆ ಕ್ಷಮೆಯಾಚಿಸಬೇಕು” ಎಂದು ವಕೀಲ ಹರ್ಕಮ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಹಿರಿಯ ಮಹಿಳೆಯ ಚಿತ್ರವು ಅಕ್ಟೋಬರ್‌ನದ್ದಾಗಿದೆ. ತಮ್ಮ ಮೇಲಿನ ಅಪಪ್ರಚಾರದ ಬಗ್ಗೆ ಮಾತನಾಡಿದ್ದ ಅವರು, “ತನ್ನ ಬಗ್ಗೆ ನಟಿಯೊಬ್ಬರು ಹೇಳಿಕೆ ನೀಡಿದ್ದಾಗಿ ನನಗೆ ಬೇರೊಬ್ಬರಿಂದ ಮಾಹಿತಿ ಸಿಕ್ಕಿತು. ಅವರೆಂದು ನನ್ನ ಮನೆಗೆ ಬಂದಿಲ್ಲ, ಅದು ತುಂಬಾ ಕೆಟ್ಟ ಹೇಳಿಕೆ. ನನಗೆ 73 ವರ್ಷ ವಯಸ್ಸಾಗಿದ್ದರೂ ಯಾವಾಗ ಬೇಕಿದ್ದರೂ ಪ್ರತಿಭಟನೆಗೆ ಸೇರಲು ಸಿದ್ದ” ಎಂದು ಹೇಳಿದ್ದರು.

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಬಹದ್ದೂರ್‌‌ ಗಡ್‌‌ ಜಂಡಿಯಾನ್ ಗ್ರಾಮದ 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್. 13 ಎಕರೆ ಭೂಮಿಯನ್ನು ಹೊಂದಿರುವ ಇವರು ಕೃಷಿಯಲ್ಲೇ ತಮ್ಮ ಇಡೀ ಜೀವನವನ್ನು ಕಳೆದಿದ್ದಾರೆ. ಜೊತೆಗೆ ರೈತ ಚಳುವಳಿಯಲ್ಲಿ ಕೂಡಾ ತೊಡಗಿಸಿಕೊಂಡಿದ್ದಾರೆ.

ನಟಿ ಕಂಗನಾ ಹೇಳಿಕೆಗೆ, ದಿಲ್ಜಿತ್ ದೋಸಾಂಜ್, ಪ್ರಿನ್ಸ್ ನರುಲ್ಲಾ, ಸರ್ಗುನ್ ಮೆಹ್ತಾ, ಹಿಮಾಂಶಿ ಖುರಾನಾ ಮತ್ತು ಇತರ ಹಲವಾರು ನಟರು ತಮ್ಮ ಟ್ವಿಟರ್‌ ಖಾತೆಯಲ್ಲಿ ನಟಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....