Homeಮುಖಪುಟರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಹಿರಿಯ ಮಹಿಳೆಯ ಚಿತ್ರವು ಅಕ್ಟೋಬರ್‌ನದ್ದಾಗಿದೆ. 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್, ಪಂಜಾಬ್‌ನ ಬಟಿಂಡಾ ಜಿಲ್ಲೆಯವರಾಗಿದ್ದಾರೆ

- Advertisement -
- Advertisement -

ದೆಹಲಿ ಸಿಖ್ ಗುರುದ್ವಾರ ಮ್ಯಾನೇಜ್ಮೆಂಟ್ ಕಮಿಟಿ (DSGMC) ಬಾಲಿವುಡ್ ನಟಿ ಕಂಗನಾ ರಣಾವತ್, ತಮ್ಮ ಅವಹೇಳನಕಾರಿ ಟ್ವಿಟ್‌ಗೆ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಲೀಗಲ್ ನೋಟಿಸ್ ಕಳುಹಿಸಿದೆ. ನಟಿ ಕಂಗನಾ, ಹಿರಿಯ ವೃದ್ಧೆಯನ್ನು, ದೆಹಲಿ ಚಲೋ ರೈತರ ಪ್ರತಿಭನೆಯಲ್ಲಿ ಭಾಗಿಯಾಗಿರುವ ಬಿಲ್ಕೀಸ್ ಬಾನು ಎಂದು ತಪ್ಪಾಗಿ ಗುರುತಿಸಿದ್ದರು. ಜೊತೆಗೆ 100 ರೂಪಾಯಿಗೆ ಸಿಗುತ್ತಾರೆ ಎಂದು ವ್ಯಂಗ್ಯವಾಡಿದ್ದರು.

ನಟಿ ಕಂಗನಾ ಟ್ವೀಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆ ವ್ಯಕ್ತವಾದ ನಂತರ ವೃದ್ಧೆಯ ಮೇಲಿನ ಟ್ವೀಟ್  ಅಳಿಸಿದ್ದಾರೆ. ಟ್ವೀಟ್‌ಗೆ ಆಕ್ರೋಶ ವ್ಯಕ್ತಪಡಿಸಿರುವ DSGMC ಲೀಗಲ್ ನೋಟಿಸ್ ಕಳುಹಿಸಿ, ಕ್ಷಮೆ ಕೇಳುವಂತೆ ಆಗ್ರಹಿಸಿದೆ.

“ಹಿರಿಯ ತಾಯಿಯನ್ನು 100 ರೂ.ಗಳಿಗೆ ಲಭ್ಯವಿರುವ ಮಹಿಳೆ ಎಂದು ಕರೆದು ಅವಹೇಳನಕಾರಿ ಟ್ವೀಟ್ ಮಾಡಿರುವ ಕಂಗನಾರಿಗೆ ನಾವು ಲೀಗಲ್ ನೋಟಿಸ್ ಕಳುಹಿಸಿದ್ದೇವೆ. ಅವರ ಟ್ವೀಟ್‌ಗಳು ರೈತರ ಪ್ರತಿಭಟನೆಯನ್ನು ರಾಷ್ಟ್ರ ವಿರೋಧಿ ಎಂದು ಬಿಂಬಿಸುತ್ತವೆ. ರೈತರ ಪ್ರತಿಭಟನೆಯ ಬಗ್ಗೆ ಅವರು ಮಾಡಿದ ಅವಹೇಳನಕಾರಿದ ಟೀಕೆಗಳಿಗೆ ಬೇಷರತ್ತಾಗಿ ಕ್ಷಮೆಯಾಚಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಡಿಎಸ್‌ಜಿಎಂಸಿಯ ಅಧ್ಯಕ್ಷ ಮಂಜಿಂದರ್ ಸಿಂಗ್ ಸಿರ್ಸಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ಕಳೆದ ನವೆಂಬರ್‌ 27 ರಂದು ನಟಿ ಕಂಗನಾ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್. ಅವರು 100 ರೂಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಟ್ವೀಟ್ ಮಾಡಿ ವಿವಾದ ಸೃಷ್ಟಿಸಿದ್ದರು.

ನಟಿ ಆ ಟ್ವೀಟನ್ನು ಅಳಿಸಿದ್ದು, ಶಾಹಿನ್ ಭಾಗ್ ಅಜ್ಜಿಯ ಕುರಿತು ಸುಳ್ಳು ಹಾಗೂ ಅವಮಾನಕರ ಹೇಳಿಕೆಗೆ ಕ್ಷಮೆ ಕೋರುವಂತೆ ನಟಿಗೆ ಪಂಜಾಬ್‌ನ ವಕೀಲರೊಬ್ಬರು ಕೂಡ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

“ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೊದಲು ರಣಾವತ್ ಅವರು ದೃಢಿಕರಿಸಿದ ಮಾಹಿತಿಯನ್ನು ಹೊಂದಿರಬೇಕು ಮತ್ತು ಅವರ ಟ್ವೀಟ್‌ಗಳ ಬಗ್ಗೆ ಕ್ಷಮೆಯಾಚಿಸಬೇಕು” ಎಂದು ವಕೀಲ ಹರ್ಕಮ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಹಿರಿಯ ಮಹಿಳೆಯ ಚಿತ್ರವು ಅಕ್ಟೋಬರ್‌ನದ್ದಾಗಿದೆ. ತಮ್ಮ ಮೇಲಿನ ಅಪಪ್ರಚಾರದ ಬಗ್ಗೆ ಮಾತನಾಡಿದ್ದ ಅವರು, “ತನ್ನ ಬಗ್ಗೆ ನಟಿಯೊಬ್ಬರು ಹೇಳಿಕೆ ನೀಡಿದ್ದಾಗಿ ನನಗೆ ಬೇರೊಬ್ಬರಿಂದ ಮಾಹಿತಿ ಸಿಕ್ಕಿತು. ಅವರೆಂದು ನನ್ನ ಮನೆಗೆ ಬಂದಿಲ್ಲ, ಅದು ತುಂಬಾ ಕೆಟ್ಟ ಹೇಳಿಕೆ. ನನಗೆ 73 ವರ್ಷ ವಯಸ್ಸಾಗಿದ್ದರೂ ಯಾವಾಗ ಬೇಕಿದ್ದರೂ ಪ್ರತಿಭಟನೆಗೆ ಸೇರಲು ಸಿದ್ದ” ಎಂದು ಹೇಳಿದ್ದರು.

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಬಹದ್ದೂರ್‌‌ ಗಡ್‌‌ ಜಂಡಿಯಾನ್ ಗ್ರಾಮದ 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್. 13 ಎಕರೆ ಭೂಮಿಯನ್ನು ಹೊಂದಿರುವ ಇವರು ಕೃಷಿಯಲ್ಲೇ ತಮ್ಮ ಇಡೀ ಜೀವನವನ್ನು ಕಳೆದಿದ್ದಾರೆ. ಜೊತೆಗೆ ರೈತ ಚಳುವಳಿಯಲ್ಲಿ ಕೂಡಾ ತೊಡಗಿಸಿಕೊಂಡಿದ್ದಾರೆ.

ನಟಿ ಕಂಗನಾ ಹೇಳಿಕೆಗೆ, ದಿಲ್ಜಿತ್ ದೋಸಾಂಜ್, ಪ್ರಿನ್ಸ್ ನರುಲ್ಲಾ, ಸರ್ಗುನ್ ಮೆಹ್ತಾ, ಹಿಮಾಂಶಿ ಖುರಾನಾ ಮತ್ತು ಇತರ ಹಲವಾರು ನಟರು ತಮ್ಮ ಟ್ವಿಟರ್‌ ಖಾತೆಯಲ್ಲಿ ನಟಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...