Homeಮುಖಪುಟಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಸಾವು: ಗಂಡ ಹಿಂಸಿಸಿ ಕೊಂದಿರುವ ಆರೋಪ

ಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಸಾವು: ಗಂಡ ಹಿಂಸಿಸಿ ಕೊಂದಿರುವ ಆರೋಪ

ತಿಂಗಳೊಳಗೆ ಇಬ್ಬರು ಮಲಯಾಳಿ ಮಹಿಳೆಯರು ಶಾರ್ಜಾದಲ್ಲಿ ಸಾವನ್ನಪ್ಪಿದ್ದು, ಎರಡು ಪ್ರಕರಣಗಳಲ್ಲೂ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ

- Advertisement -
- Advertisement -

ಕೇರಳದ ಅಥುಲ್ಯಾ ಶೇಖರ್ ಎಂಬ ಮಹಿಳೆ ಶನಿವಾರ (ಜು.19) ಮುಂಜಾನೆ ಯುಎಇಯ ಶಾರ್ಜಾದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಸಂಬಂಧ ಕೇರಳ ಪೊಲೀಸರು ಆಕೆಯ ಪತಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ತನ್ನ 30ನೇ ಹುಟ್ಟುಹಬ್ಬ ಮತ್ತು ಹೊಸ ಕೆಲಸದ ಮೊದಲ ದಿನದಂದೇ ಅಥುಲ್ಯಾ ಅವರ ಸಾವು ಸಂಭವಿಸಿದೆ ಎಂದು ಅವರ ಕುಟುಂಬವನ್ನು ಉಲ್ಲೇಖಿಸಿ ಗಲ್ಫ್ ನ್ಯೂಸ್ ವರದಿ ಮಾಡಿದೆ.

ಮಹಿಳೆಯ ತಾಯಿ ನೀಡಿದ ದೂರಿನ ಪ್ರಕಾರ, ಜುಲೈ 18 ಮತ್ತು 19 ರ ನಡುವೆ ಅಥುಲ್ಯಾ ಅವರ ಪತಿ ಸತೀಶ್ ಆಕೆಯ ಕತ್ತು ಹಿಸುಕಿ, ಹೊಟ್ಟೆಗೆ ಒದ್ದು, ತಲೆಗೆ ತಟ್ಟೆಯಿಂದ ಹೊಡೆದು ಹಿಂಸಿದಿದ್ದಾರೆ. ಇದರಿಂದ ಆಕೆ ಸಾವನಪ್ಪಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶಾರ್ಜಾದಲ್ಲಿ ವಾಸಿಸುತ್ತಿರುವ ಅವರ ಸಹೋದರಿ ಮತ್ತು ಸೋದರ ಮಾವನ ಪ್ರಕಾರ, ಅಥುಲ್ಯಾ ಶೇಖರ್ ರೋಲ್ಲಾ ಪ್ರದೇಶದ ತಮ್ಮ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

10 ವರ್ಷದ ಬಾಲಕಿಯ ತಾಯಿ ಅಥುಲ್ಯಾ ಅವರ ಸಾವು ಯುಎಇಯಲ್ಲಿರುವ ಭಾರತೀಯ ಸಮುದಾಯದಲ್ಲಿ ಹೊಸ ಆಘಾತದ ಉಂಟುಮಾಡಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಮತ್ತು ಆಕೆಯ 16 ತಿಂಗಳ ಮಗು ಸಾವಿಗೀಡಾದ ವಾರದೊಳಗೆ ಈ ಘಟನೆ ನಡೆದಿದೆ.

ಜುಲೈ 8ರಂದು ವಿಪಂಚಿಕಾ ಎಂಬ ಮಹಿಳೆ ಗಂಡನ ಚಿತ್ರಹಿಂಸೆ ತಾಳಲಾರದೆ ತನ್ನ ಮಗಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೊಲ್ಲಂ ಜಿಲ್ಲೆಯ ಕುಂದರಾ ಪೊಲೀಸರು ವಿಪಂಚಿಕಾ ಅವರ ಗಂಡ ನಿತೀಶ್, ಅತ್ತಿಗೆ ನೀತು ಮತ್ತು ಮಾವ ಮೋಹನನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ವರದಕ್ಷಿಣೆ ಕಿರುಕುಳ ಆರೋಪ

ಅಥುಲ್ಯಾ ಪ್ರಕರಣದಲ್ಲಿ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ. 2014ರಲ್ಲಿ ಅಥುಲ್ಯಾ ಅವರ ಮದುವೆ ಸಮಯದಲ್ಲಿ ಒಂದು ಬೈಕ್ ಮತ್ತು 43 ಪೌಂಡ್ ಚಿನ್ನ ನೀಡಿದ್ದರೂ, ಸಾಕಷ್ಟು ವರದಕ್ಷಿಣೆ ನೀಡಿಲ್ಲ ಎಂದು ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎಂದು ಆಕೆಯ ತವರು ಮನೆಯವರು ಆರೋಪಿಸಿದ್ದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ನಿರಂತರ ವರದಕ್ಷಿಣೆ ಕಿರುಕುಳದಿಂದ ಅಥುಲ್ಯಾ ಹಲವು ವರ್ಷಗಳಿಂದ ಮಾನಸಿಕ ಮತ್ತು ದೈಹಿಕ ಹಿಂಸೆಯನ್ನು ಅನುಭವಿಸುತ್ತಿದ್ದರು ಎಂದು ಆಕೆಯ ಕುಟುಂಬ ಆರೋಪಿಸಿದೆ.

ಅಥುಲ್ಯಾ ಪತಿ ಸತೀಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ, 1961 ರ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪ ನಿರಾಕರಿಸಿದ ಪತಿ

ಯುಎಇಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಥುಲ್ಯಾ ಪತಿ ಸತೀಶ್ ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿದ್ದಾರೆ. ಅಥುಲ್ಯಾ ಸಾವಿನಲ್ಲಿ ತನ್ನ ಪಾತ್ರವಿಲ್ಲ ಎಂದು ಹೇಳಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದನ್ನು ನಾನು ನಂಬುವುದಿಲ್ಲ. ನಾನು ಕೂಡ ಆಕೆಯ ಸಾವಿಗೆ ಕಾರಣ ಹುಡುಕುತ್ತಿದ್ದೇನೆ ಎಂದು ಹೇಳಿದ್ದಾರೆ.

ಅಥುಲ್ಯಾ ತಂದೆ ಕೂಡ ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. “ನನ್ನ ಮಗಳು ಆತ್ಮಹತ್ಯೆಯಿಂದ ಸಾಯುತ್ತಾಳೆ ಎಂದು ನಾನು ನಂಬುವುದಿಲ್ಲ. ಆಕೆ ತನ್ನ ಮಗಳೊಂದಿಗೆ ಬಹಳ ಆತ್ಮೀಯ ಸಂಬಂಧವನ್ನು ಹೊಂದಿದ್ದಳು. ಎಲ್ಲವನ್ನೂ ಆಕೆಯ ಜೊತೆ ಹಂಚಿಕೊಳ್ಳುತ್ತಿದ್ದಳು. ಅವಳ ಸಾವು ನಿಗೂಢವಾಗಿದೆ. ಅವಳಿಗೆ ನಿಖರವಾಗಿ ಏನಾಯಿತು ಎಂಬುದನ್ನು ನಾವು ಕಂಡುಹಿಡಿಯಬೇಕಿದೆ” ಎಂದಿದ್ದಾರೆ.

ಅಥುಲ್ಯಾ ಗಂಡನ ಕುರಿತು ಪ್ರತಿಕ್ರಿಯಿಸಿದ ಅವರು, “ಅವನೊಬ್ಬ ಮದ್ಯವ್ಯಸನಿ. ಯಾವಾಗಲೂ ಆಕೆಗೆ ಹಿಂಸೆ ನೀಡುತ್ತಿದ್ದ. ಆದರೆ, ಆಕೆ ಎಲ್ಲವನ್ನೂ ಸಹಿಸಿಕೊಂಡಿದ್ದಳು. ಈ ಹಿಂದೆಯೂ ಸಹ ಅಂತಹ ಸಮಸ್ಯೆಗಳು ಸಂಭವಿಸಿದ್ದವು. ಪೊಲೀಸ್ ಪ್ರಕರಣ ದಾಖಲಾಗಿತ್ತು. ಆದರೆ, ಈಗ ಆಕೆಗೆ ಏನಾಯಿತು ಎಂದು ನಿಖರವಾಗಿ ನಾವು ತಿಳಿದುಕೊಳ್ಳಬೇಕಿದೆ” ಎಂದು ಹೇಳಿದ್ದಾರೆ.

ಅಥುಲ್ಯಾ ಮೈ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಆಕೆಯ ಪತಿ ಪ್ಲಾಸ್ಟಿಕ್ ಸ್ಟೂಲ್ ಎತ್ತಿ ಹೊಡೆಯುತ್ತಿರುವುದನ್ನು ತೋರಿಸುವ ವೀಡಿಯೊಗಳನ್ನು ಆಕೆಯ ಕುಟುಂಬ ಬಿಡುಗಡೆ ಮಾಡಿದೆ.

“ನಾವು ನಾಳೆ ಶಾರ್ಜಾ ಪೊಲೀಸರನ್ನು ಭೇಟಿ ಮಾಡಿ ಪ್ರಕರಣ ದಾಖಲಿಸುವ ಕುರಿತು ಚರ್ಚಿಸುತ್ತೇವೆ. ನಾವು ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನೂ ಸಹ ಸಂಪರ್ಕಿಸುತ್ತಿದ್ದೇವೆ” ಎಂದು ಅಥುಲ್ಯಾ ಅವರ ಸೋದರ ಮಾವ ಭಾನುವಾರ ಹೇಳಿರುವುದಾಗಿ ಗಲ್ಫ್ ನ್ಯೂಸ್ ವರದಿ ಮಾಡಿದೆ.

ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...