Homeಮುಖಪುಟಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಸಾವು: ಗಂಡ ಹಿಂಸಿಸಿ ಕೊಂದಿರುವ ಆರೋಪ

ಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಸಾವು: ಗಂಡ ಹಿಂಸಿಸಿ ಕೊಂದಿರುವ ಆರೋಪ

ತಿಂಗಳೊಳಗೆ ಇಬ್ಬರು ಮಲಯಾಳಿ ಮಹಿಳೆಯರು ಶಾರ್ಜಾದಲ್ಲಿ ಸಾವನ್ನಪ್ಪಿದ್ದು, ಎರಡು ಪ್ರಕರಣಗಳಲ್ಲೂ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ

- Advertisement -
- Advertisement -

ಕೇರಳದ ಅಥುಲ್ಯಾ ಶೇಖರ್ ಎಂಬ ಮಹಿಳೆ ಶನಿವಾರ (ಜು.19) ಮುಂಜಾನೆ ಯುಎಇಯ ಶಾರ್ಜಾದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಸಂಬಂಧ ಕೇರಳ ಪೊಲೀಸರು ಆಕೆಯ ಪತಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ತನ್ನ 30ನೇ ಹುಟ್ಟುಹಬ್ಬ ಮತ್ತು ಹೊಸ ಕೆಲಸದ ಮೊದಲ ದಿನದಂದೇ ಅಥುಲ್ಯಾ ಅವರ ಸಾವು ಸಂಭವಿಸಿದೆ ಎಂದು ಅವರ ಕುಟುಂಬವನ್ನು ಉಲ್ಲೇಖಿಸಿ ಗಲ್ಫ್ ನ್ಯೂಸ್ ವರದಿ ಮಾಡಿದೆ.

ಮಹಿಳೆಯ ತಾಯಿ ನೀಡಿದ ದೂರಿನ ಪ್ರಕಾರ, ಜುಲೈ 18 ಮತ್ತು 19 ರ ನಡುವೆ ಅಥುಲ್ಯಾ ಅವರ ಪತಿ ಸತೀಶ್ ಆಕೆಯ ಕತ್ತು ಹಿಸುಕಿ, ಹೊಟ್ಟೆಗೆ ಒದ್ದು, ತಲೆಗೆ ತಟ್ಟೆಯಿಂದ ಹೊಡೆದು ಹಿಂಸಿದಿದ್ದಾರೆ. ಇದರಿಂದ ಆಕೆ ಸಾವನಪ್ಪಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶಾರ್ಜಾದಲ್ಲಿ ವಾಸಿಸುತ್ತಿರುವ ಅವರ ಸಹೋದರಿ ಮತ್ತು ಸೋದರ ಮಾವನ ಪ್ರಕಾರ, ಅಥುಲ್ಯಾ ಶೇಖರ್ ರೋಲ್ಲಾ ಪ್ರದೇಶದ ತಮ್ಮ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

10 ವರ್ಷದ ಬಾಲಕಿಯ ತಾಯಿ ಅಥುಲ್ಯಾ ಅವರ ಸಾವು ಯುಎಇಯಲ್ಲಿರುವ ಭಾರತೀಯ ಸಮುದಾಯದಲ್ಲಿ ಹೊಸ ಆಘಾತದ ಉಂಟುಮಾಡಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಮತ್ತು ಆಕೆಯ 16 ತಿಂಗಳ ಮಗು ಸಾವಿಗೀಡಾದ ವಾರದೊಳಗೆ ಈ ಘಟನೆ ನಡೆದಿದೆ.

ಜುಲೈ 8ರಂದು ವಿಪಂಚಿಕಾ ಎಂಬ ಮಹಿಳೆ ಗಂಡನ ಚಿತ್ರಹಿಂಸೆ ತಾಳಲಾರದೆ ತನ್ನ ಮಗಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೊಲ್ಲಂ ಜಿಲ್ಲೆಯ ಕುಂದರಾ ಪೊಲೀಸರು ವಿಪಂಚಿಕಾ ಅವರ ಗಂಡ ನಿತೀಶ್, ಅತ್ತಿಗೆ ನೀತು ಮತ್ತು ಮಾವ ಮೋಹನನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ವರದಕ್ಷಿಣೆ ಕಿರುಕುಳ ಆರೋಪ

ಅಥುಲ್ಯಾ ಪ್ರಕರಣದಲ್ಲಿ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ. 2014ರಲ್ಲಿ ಅಥುಲ್ಯಾ ಅವರ ಮದುವೆ ಸಮಯದಲ್ಲಿ ಒಂದು ಬೈಕ್ ಮತ್ತು 43 ಪೌಂಡ್ ಚಿನ್ನ ನೀಡಿದ್ದರೂ, ಸಾಕಷ್ಟು ವರದಕ್ಷಿಣೆ ನೀಡಿಲ್ಲ ಎಂದು ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎಂದು ಆಕೆಯ ತವರು ಮನೆಯವರು ಆರೋಪಿಸಿದ್ದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ನಿರಂತರ ವರದಕ್ಷಿಣೆ ಕಿರುಕುಳದಿಂದ ಅಥುಲ್ಯಾ ಹಲವು ವರ್ಷಗಳಿಂದ ಮಾನಸಿಕ ಮತ್ತು ದೈಹಿಕ ಹಿಂಸೆಯನ್ನು ಅನುಭವಿಸುತ್ತಿದ್ದರು ಎಂದು ಆಕೆಯ ಕುಟುಂಬ ಆರೋಪಿಸಿದೆ.

ಅಥುಲ್ಯಾ ಪತಿ ಸತೀಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ, 1961 ರ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪ ನಿರಾಕರಿಸಿದ ಪತಿ

ಯುಎಇಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಥುಲ್ಯಾ ಪತಿ ಸತೀಶ್ ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿದ್ದಾರೆ. ಅಥುಲ್ಯಾ ಸಾವಿನಲ್ಲಿ ತನ್ನ ಪಾತ್ರವಿಲ್ಲ ಎಂದು ಹೇಳಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದನ್ನು ನಾನು ನಂಬುವುದಿಲ್ಲ. ನಾನು ಕೂಡ ಆಕೆಯ ಸಾವಿಗೆ ಕಾರಣ ಹುಡುಕುತ್ತಿದ್ದೇನೆ ಎಂದು ಹೇಳಿದ್ದಾರೆ.

ಅಥುಲ್ಯಾ ತಂದೆ ಕೂಡ ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. “ನನ್ನ ಮಗಳು ಆತ್ಮಹತ್ಯೆಯಿಂದ ಸಾಯುತ್ತಾಳೆ ಎಂದು ನಾನು ನಂಬುವುದಿಲ್ಲ. ಆಕೆ ತನ್ನ ಮಗಳೊಂದಿಗೆ ಬಹಳ ಆತ್ಮೀಯ ಸಂಬಂಧವನ್ನು ಹೊಂದಿದ್ದಳು. ಎಲ್ಲವನ್ನೂ ಆಕೆಯ ಜೊತೆ ಹಂಚಿಕೊಳ್ಳುತ್ತಿದ್ದಳು. ಅವಳ ಸಾವು ನಿಗೂಢವಾಗಿದೆ. ಅವಳಿಗೆ ನಿಖರವಾಗಿ ಏನಾಯಿತು ಎಂಬುದನ್ನು ನಾವು ಕಂಡುಹಿಡಿಯಬೇಕಿದೆ” ಎಂದಿದ್ದಾರೆ.

ಅಥುಲ್ಯಾ ಗಂಡನ ಕುರಿತು ಪ್ರತಿಕ್ರಿಯಿಸಿದ ಅವರು, “ಅವನೊಬ್ಬ ಮದ್ಯವ್ಯಸನಿ. ಯಾವಾಗಲೂ ಆಕೆಗೆ ಹಿಂಸೆ ನೀಡುತ್ತಿದ್ದ. ಆದರೆ, ಆಕೆ ಎಲ್ಲವನ್ನೂ ಸಹಿಸಿಕೊಂಡಿದ್ದಳು. ಈ ಹಿಂದೆಯೂ ಸಹ ಅಂತಹ ಸಮಸ್ಯೆಗಳು ಸಂಭವಿಸಿದ್ದವು. ಪೊಲೀಸ್ ಪ್ರಕರಣ ದಾಖಲಾಗಿತ್ತು. ಆದರೆ, ಈಗ ಆಕೆಗೆ ಏನಾಯಿತು ಎಂದು ನಿಖರವಾಗಿ ನಾವು ತಿಳಿದುಕೊಳ್ಳಬೇಕಿದೆ” ಎಂದು ಹೇಳಿದ್ದಾರೆ.

ಅಥುಲ್ಯಾ ಮೈ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಆಕೆಯ ಪತಿ ಪ್ಲಾಸ್ಟಿಕ್ ಸ್ಟೂಲ್ ಎತ್ತಿ ಹೊಡೆಯುತ್ತಿರುವುದನ್ನು ತೋರಿಸುವ ವೀಡಿಯೊಗಳನ್ನು ಆಕೆಯ ಕುಟುಂಬ ಬಿಡುಗಡೆ ಮಾಡಿದೆ.

“ನಾವು ನಾಳೆ ಶಾರ್ಜಾ ಪೊಲೀಸರನ್ನು ಭೇಟಿ ಮಾಡಿ ಪ್ರಕರಣ ದಾಖಲಿಸುವ ಕುರಿತು ಚರ್ಚಿಸುತ್ತೇವೆ. ನಾವು ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನೂ ಸಹ ಸಂಪರ್ಕಿಸುತ್ತಿದ್ದೇವೆ” ಎಂದು ಅಥುಲ್ಯಾ ಅವರ ಸೋದರ ಮಾವ ಭಾನುವಾರ ಹೇಳಿರುವುದಾಗಿ ಗಲ್ಫ್ ನ್ಯೂಸ್ ವರದಿ ಮಾಡಿದೆ.

ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...