Homeಮುಖಪುಟಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಸಾವು: ಗಂಡ ಹಿಂಸಿಸಿ ಕೊಂದಿರುವ ಆರೋಪ

ಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಸಾವು: ಗಂಡ ಹಿಂಸಿಸಿ ಕೊಂದಿರುವ ಆರೋಪ

ತಿಂಗಳೊಳಗೆ ಇಬ್ಬರು ಮಲಯಾಳಿ ಮಹಿಳೆಯರು ಶಾರ್ಜಾದಲ್ಲಿ ಸಾವನ್ನಪ್ಪಿದ್ದು, ಎರಡು ಪ್ರಕರಣಗಳಲ್ಲೂ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ

- Advertisement -
- Advertisement -

ಕೇರಳದ ಅಥುಲ್ಯಾ ಶೇಖರ್ ಎಂಬ ಮಹಿಳೆ ಶನಿವಾರ (ಜು.19) ಮುಂಜಾನೆ ಯುಎಇಯ ಶಾರ್ಜಾದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಸಂಬಂಧ ಕೇರಳ ಪೊಲೀಸರು ಆಕೆಯ ಪತಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ತನ್ನ 30ನೇ ಹುಟ್ಟುಹಬ್ಬ ಮತ್ತು ಹೊಸ ಕೆಲಸದ ಮೊದಲ ದಿನದಂದೇ ಅಥುಲ್ಯಾ ಅವರ ಸಾವು ಸಂಭವಿಸಿದೆ ಎಂದು ಅವರ ಕುಟುಂಬವನ್ನು ಉಲ್ಲೇಖಿಸಿ ಗಲ್ಫ್ ನ್ಯೂಸ್ ವರದಿ ಮಾಡಿದೆ.

ಮಹಿಳೆಯ ತಾಯಿ ನೀಡಿದ ದೂರಿನ ಪ್ರಕಾರ, ಜುಲೈ 18 ಮತ್ತು 19 ರ ನಡುವೆ ಅಥುಲ್ಯಾ ಅವರ ಪತಿ ಸತೀಶ್ ಆಕೆಯ ಕತ್ತು ಹಿಸುಕಿ, ಹೊಟ್ಟೆಗೆ ಒದ್ದು, ತಲೆಗೆ ತಟ್ಟೆಯಿಂದ ಹೊಡೆದು ಹಿಂಸಿದಿದ್ದಾರೆ. ಇದರಿಂದ ಆಕೆ ಸಾವನಪ್ಪಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶಾರ್ಜಾದಲ್ಲಿ ವಾಸಿಸುತ್ತಿರುವ ಅವರ ಸಹೋದರಿ ಮತ್ತು ಸೋದರ ಮಾವನ ಪ್ರಕಾರ, ಅಥುಲ್ಯಾ ಶೇಖರ್ ರೋಲ್ಲಾ ಪ್ರದೇಶದ ತಮ್ಮ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

10 ವರ್ಷದ ಬಾಲಕಿಯ ತಾಯಿ ಅಥುಲ್ಯಾ ಅವರ ಸಾವು ಯುಎಇಯಲ್ಲಿರುವ ಭಾರತೀಯ ಸಮುದಾಯದಲ್ಲಿ ಹೊಸ ಆಘಾತದ ಉಂಟುಮಾಡಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಮತ್ತು ಆಕೆಯ 16 ತಿಂಗಳ ಮಗು ಸಾವಿಗೀಡಾದ ವಾರದೊಳಗೆ ಈ ಘಟನೆ ನಡೆದಿದೆ.

ಜುಲೈ 8ರಂದು ವಿಪಂಚಿಕಾ ಎಂಬ ಮಹಿಳೆ ಗಂಡನ ಚಿತ್ರಹಿಂಸೆ ತಾಳಲಾರದೆ ತನ್ನ ಮಗಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೊಲ್ಲಂ ಜಿಲ್ಲೆಯ ಕುಂದರಾ ಪೊಲೀಸರು ವಿಪಂಚಿಕಾ ಅವರ ಗಂಡ ನಿತೀಶ್, ಅತ್ತಿಗೆ ನೀತು ಮತ್ತು ಮಾವ ಮೋಹನನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ವರದಕ್ಷಿಣೆ ಕಿರುಕುಳ ಆರೋಪ

ಅಥುಲ್ಯಾ ಪ್ರಕರಣದಲ್ಲಿ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ. 2014ರಲ್ಲಿ ಅಥುಲ್ಯಾ ಅವರ ಮದುವೆ ಸಮಯದಲ್ಲಿ ಒಂದು ಬೈಕ್ ಮತ್ತು 43 ಪೌಂಡ್ ಚಿನ್ನ ನೀಡಿದ್ದರೂ, ಸಾಕಷ್ಟು ವರದಕ್ಷಿಣೆ ನೀಡಿಲ್ಲ ಎಂದು ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎಂದು ಆಕೆಯ ತವರು ಮನೆಯವರು ಆರೋಪಿಸಿದ್ದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ನಿರಂತರ ವರದಕ್ಷಿಣೆ ಕಿರುಕುಳದಿಂದ ಅಥುಲ್ಯಾ ಹಲವು ವರ್ಷಗಳಿಂದ ಮಾನಸಿಕ ಮತ್ತು ದೈಹಿಕ ಹಿಂಸೆಯನ್ನು ಅನುಭವಿಸುತ್ತಿದ್ದರು ಎಂದು ಆಕೆಯ ಕುಟುಂಬ ಆರೋಪಿಸಿದೆ.

ಅಥುಲ್ಯಾ ಪತಿ ಸತೀಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ, 1961 ರ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪ ನಿರಾಕರಿಸಿದ ಪತಿ

ಯುಎಇಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಥುಲ್ಯಾ ಪತಿ ಸತೀಶ್ ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿದ್ದಾರೆ. ಅಥುಲ್ಯಾ ಸಾವಿನಲ್ಲಿ ತನ್ನ ಪಾತ್ರವಿಲ್ಲ ಎಂದು ಹೇಳಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದನ್ನು ನಾನು ನಂಬುವುದಿಲ್ಲ. ನಾನು ಕೂಡ ಆಕೆಯ ಸಾವಿಗೆ ಕಾರಣ ಹುಡುಕುತ್ತಿದ್ದೇನೆ ಎಂದು ಹೇಳಿದ್ದಾರೆ.

ಅಥುಲ್ಯಾ ತಂದೆ ಕೂಡ ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. “ನನ್ನ ಮಗಳು ಆತ್ಮಹತ್ಯೆಯಿಂದ ಸಾಯುತ್ತಾಳೆ ಎಂದು ನಾನು ನಂಬುವುದಿಲ್ಲ. ಆಕೆ ತನ್ನ ಮಗಳೊಂದಿಗೆ ಬಹಳ ಆತ್ಮೀಯ ಸಂಬಂಧವನ್ನು ಹೊಂದಿದ್ದಳು. ಎಲ್ಲವನ್ನೂ ಆಕೆಯ ಜೊತೆ ಹಂಚಿಕೊಳ್ಳುತ್ತಿದ್ದಳು. ಅವಳ ಸಾವು ನಿಗೂಢವಾಗಿದೆ. ಅವಳಿಗೆ ನಿಖರವಾಗಿ ಏನಾಯಿತು ಎಂಬುದನ್ನು ನಾವು ಕಂಡುಹಿಡಿಯಬೇಕಿದೆ” ಎಂದಿದ್ದಾರೆ.

ಅಥುಲ್ಯಾ ಗಂಡನ ಕುರಿತು ಪ್ರತಿಕ್ರಿಯಿಸಿದ ಅವರು, “ಅವನೊಬ್ಬ ಮದ್ಯವ್ಯಸನಿ. ಯಾವಾಗಲೂ ಆಕೆಗೆ ಹಿಂಸೆ ನೀಡುತ್ತಿದ್ದ. ಆದರೆ, ಆಕೆ ಎಲ್ಲವನ್ನೂ ಸಹಿಸಿಕೊಂಡಿದ್ದಳು. ಈ ಹಿಂದೆಯೂ ಸಹ ಅಂತಹ ಸಮಸ್ಯೆಗಳು ಸಂಭವಿಸಿದ್ದವು. ಪೊಲೀಸ್ ಪ್ರಕರಣ ದಾಖಲಾಗಿತ್ತು. ಆದರೆ, ಈಗ ಆಕೆಗೆ ಏನಾಯಿತು ಎಂದು ನಿಖರವಾಗಿ ನಾವು ತಿಳಿದುಕೊಳ್ಳಬೇಕಿದೆ” ಎಂದು ಹೇಳಿದ್ದಾರೆ.

ಅಥುಲ್ಯಾ ಮೈ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಆಕೆಯ ಪತಿ ಪ್ಲಾಸ್ಟಿಕ್ ಸ್ಟೂಲ್ ಎತ್ತಿ ಹೊಡೆಯುತ್ತಿರುವುದನ್ನು ತೋರಿಸುವ ವೀಡಿಯೊಗಳನ್ನು ಆಕೆಯ ಕುಟುಂಬ ಬಿಡುಗಡೆ ಮಾಡಿದೆ.

“ನಾವು ನಾಳೆ ಶಾರ್ಜಾ ಪೊಲೀಸರನ್ನು ಭೇಟಿ ಮಾಡಿ ಪ್ರಕರಣ ದಾಖಲಿಸುವ ಕುರಿತು ಚರ್ಚಿಸುತ್ತೇವೆ. ನಾವು ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನೂ ಸಹ ಸಂಪರ್ಕಿಸುತ್ತಿದ್ದೇವೆ” ಎಂದು ಅಥುಲ್ಯಾ ಅವರ ಸೋದರ ಮಾವ ಭಾನುವಾರ ಹೇಳಿರುವುದಾಗಿ ಗಲ್ಫ್ ನ್ಯೂಸ್ ವರದಿ ಮಾಡಿದೆ.

ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...