Homeಮುಖಪುಟಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಸಾವು: ಗಂಡ ಹಿಂಸಿಸಿ ಕೊಂದಿರುವ ಆರೋಪ

ಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಸಾವು: ಗಂಡ ಹಿಂಸಿಸಿ ಕೊಂದಿರುವ ಆರೋಪ

ತಿಂಗಳೊಳಗೆ ಇಬ್ಬರು ಮಲಯಾಳಿ ಮಹಿಳೆಯರು ಶಾರ್ಜಾದಲ್ಲಿ ಸಾವನ್ನಪ್ಪಿದ್ದು, ಎರಡು ಪ್ರಕರಣಗಳಲ್ಲೂ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ

- Advertisement -
- Advertisement -

ಕೇರಳದ ಅಥುಲ್ಯಾ ಶೇಖರ್ ಎಂಬ ಮಹಿಳೆ ಶನಿವಾರ (ಜು.19) ಮುಂಜಾನೆ ಯುಎಇಯ ಶಾರ್ಜಾದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಸಂಬಂಧ ಕೇರಳ ಪೊಲೀಸರು ಆಕೆಯ ಪತಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ತನ್ನ 30ನೇ ಹುಟ್ಟುಹಬ್ಬ ಮತ್ತು ಹೊಸ ಕೆಲಸದ ಮೊದಲ ದಿನದಂದೇ ಅಥುಲ್ಯಾ ಅವರ ಸಾವು ಸಂಭವಿಸಿದೆ ಎಂದು ಅವರ ಕುಟುಂಬವನ್ನು ಉಲ್ಲೇಖಿಸಿ ಗಲ್ಫ್ ನ್ಯೂಸ್ ವರದಿ ಮಾಡಿದೆ.

ಮಹಿಳೆಯ ತಾಯಿ ನೀಡಿದ ದೂರಿನ ಪ್ರಕಾರ, ಜುಲೈ 18 ಮತ್ತು 19 ರ ನಡುವೆ ಅಥುಲ್ಯಾ ಅವರ ಪತಿ ಸತೀಶ್ ಆಕೆಯ ಕತ್ತು ಹಿಸುಕಿ, ಹೊಟ್ಟೆಗೆ ಒದ್ದು, ತಲೆಗೆ ತಟ್ಟೆಯಿಂದ ಹೊಡೆದು ಹಿಂಸಿದಿದ್ದಾರೆ. ಇದರಿಂದ ಆಕೆ ಸಾವನಪ್ಪಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶಾರ್ಜಾದಲ್ಲಿ ವಾಸಿಸುತ್ತಿರುವ ಅವರ ಸಹೋದರಿ ಮತ್ತು ಸೋದರ ಮಾವನ ಪ್ರಕಾರ, ಅಥುಲ್ಯಾ ಶೇಖರ್ ರೋಲ್ಲಾ ಪ್ರದೇಶದ ತಮ್ಮ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

10 ವರ್ಷದ ಬಾಲಕಿಯ ತಾಯಿ ಅಥುಲ್ಯಾ ಅವರ ಸಾವು ಯುಎಇಯಲ್ಲಿರುವ ಭಾರತೀಯ ಸಮುದಾಯದಲ್ಲಿ ಹೊಸ ಆಘಾತದ ಉಂಟುಮಾಡಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ಶಾರ್ಜಾದಲ್ಲಿ ಮತ್ತೊಬ್ಬರು ಮಲಯಾಳಿ ಮಹಿಳೆ ಮತ್ತು ಆಕೆಯ 16 ತಿಂಗಳ ಮಗು ಸಾವಿಗೀಡಾದ ವಾರದೊಳಗೆ ಈ ಘಟನೆ ನಡೆದಿದೆ.

ಜುಲೈ 8ರಂದು ವಿಪಂಚಿಕಾ ಎಂಬ ಮಹಿಳೆ ಗಂಡನ ಚಿತ್ರಹಿಂಸೆ ತಾಳಲಾರದೆ ತನ್ನ ಮಗಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೊಲ್ಲಂ ಜಿಲ್ಲೆಯ ಕುಂದರಾ ಪೊಲೀಸರು ವಿಪಂಚಿಕಾ ಅವರ ಗಂಡ ನಿತೀಶ್, ಅತ್ತಿಗೆ ನೀತು ಮತ್ತು ಮಾವ ಮೋಹನನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ವರದಕ್ಷಿಣೆ ಕಿರುಕುಳ ಆರೋಪ

ಅಥುಲ್ಯಾ ಪ್ರಕರಣದಲ್ಲಿ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ. 2014ರಲ್ಲಿ ಅಥುಲ್ಯಾ ಅವರ ಮದುವೆ ಸಮಯದಲ್ಲಿ ಒಂದು ಬೈಕ್ ಮತ್ತು 43 ಪೌಂಡ್ ಚಿನ್ನ ನೀಡಿದ್ದರೂ, ಸಾಕಷ್ಟು ವರದಕ್ಷಿಣೆ ನೀಡಿಲ್ಲ ಎಂದು ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎಂದು ಆಕೆಯ ತವರು ಮನೆಯವರು ಆರೋಪಿಸಿದ್ದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ನಿರಂತರ ವರದಕ್ಷಿಣೆ ಕಿರುಕುಳದಿಂದ ಅಥುಲ್ಯಾ ಹಲವು ವರ್ಷಗಳಿಂದ ಮಾನಸಿಕ ಮತ್ತು ದೈಹಿಕ ಹಿಂಸೆಯನ್ನು ಅನುಭವಿಸುತ್ತಿದ್ದರು ಎಂದು ಆಕೆಯ ಕುಟುಂಬ ಆರೋಪಿಸಿದೆ.

ಅಥುಲ್ಯಾ ಪತಿ ಸತೀಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ, 1961 ರ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪ ನಿರಾಕರಿಸಿದ ಪತಿ

ಯುಎಇಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಥುಲ್ಯಾ ಪತಿ ಸತೀಶ್ ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿದ್ದಾರೆ. ಅಥುಲ್ಯಾ ಸಾವಿನಲ್ಲಿ ತನ್ನ ಪಾತ್ರವಿಲ್ಲ ಎಂದು ಹೇಳಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದನ್ನು ನಾನು ನಂಬುವುದಿಲ್ಲ. ನಾನು ಕೂಡ ಆಕೆಯ ಸಾವಿಗೆ ಕಾರಣ ಹುಡುಕುತ್ತಿದ್ದೇನೆ ಎಂದು ಹೇಳಿದ್ದಾರೆ.

ಅಥುಲ್ಯಾ ತಂದೆ ಕೂಡ ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. “ನನ್ನ ಮಗಳು ಆತ್ಮಹತ್ಯೆಯಿಂದ ಸಾಯುತ್ತಾಳೆ ಎಂದು ನಾನು ನಂಬುವುದಿಲ್ಲ. ಆಕೆ ತನ್ನ ಮಗಳೊಂದಿಗೆ ಬಹಳ ಆತ್ಮೀಯ ಸಂಬಂಧವನ್ನು ಹೊಂದಿದ್ದಳು. ಎಲ್ಲವನ್ನೂ ಆಕೆಯ ಜೊತೆ ಹಂಚಿಕೊಳ್ಳುತ್ತಿದ್ದಳು. ಅವಳ ಸಾವು ನಿಗೂಢವಾಗಿದೆ. ಅವಳಿಗೆ ನಿಖರವಾಗಿ ಏನಾಯಿತು ಎಂಬುದನ್ನು ನಾವು ಕಂಡುಹಿಡಿಯಬೇಕಿದೆ” ಎಂದಿದ್ದಾರೆ.

ಅಥುಲ್ಯಾ ಗಂಡನ ಕುರಿತು ಪ್ರತಿಕ್ರಿಯಿಸಿದ ಅವರು, “ಅವನೊಬ್ಬ ಮದ್ಯವ್ಯಸನಿ. ಯಾವಾಗಲೂ ಆಕೆಗೆ ಹಿಂಸೆ ನೀಡುತ್ತಿದ್ದ. ಆದರೆ, ಆಕೆ ಎಲ್ಲವನ್ನೂ ಸಹಿಸಿಕೊಂಡಿದ್ದಳು. ಈ ಹಿಂದೆಯೂ ಸಹ ಅಂತಹ ಸಮಸ್ಯೆಗಳು ಸಂಭವಿಸಿದ್ದವು. ಪೊಲೀಸ್ ಪ್ರಕರಣ ದಾಖಲಾಗಿತ್ತು. ಆದರೆ, ಈಗ ಆಕೆಗೆ ಏನಾಯಿತು ಎಂದು ನಿಖರವಾಗಿ ನಾವು ತಿಳಿದುಕೊಳ್ಳಬೇಕಿದೆ” ಎಂದು ಹೇಳಿದ್ದಾರೆ.

ಅಥುಲ್ಯಾ ಮೈ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಆಕೆಯ ಪತಿ ಪ್ಲಾಸ್ಟಿಕ್ ಸ್ಟೂಲ್ ಎತ್ತಿ ಹೊಡೆಯುತ್ತಿರುವುದನ್ನು ತೋರಿಸುವ ವೀಡಿಯೊಗಳನ್ನು ಆಕೆಯ ಕುಟುಂಬ ಬಿಡುಗಡೆ ಮಾಡಿದೆ.

“ನಾವು ನಾಳೆ ಶಾರ್ಜಾ ಪೊಲೀಸರನ್ನು ಭೇಟಿ ಮಾಡಿ ಪ್ರಕರಣ ದಾಖಲಿಸುವ ಕುರಿತು ಚರ್ಚಿಸುತ್ತೇವೆ. ನಾವು ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನೂ ಸಹ ಸಂಪರ್ಕಿಸುತ್ತಿದ್ದೇವೆ” ಎಂದು ಅಥುಲ್ಯಾ ಅವರ ಸೋದರ ಮಾವ ಭಾನುವಾರ ಹೇಳಿರುವುದಾಗಿ ಗಲ್ಫ್ ನ್ಯೂಸ್ ವರದಿ ಮಾಡಿದೆ.

ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...