Homeಮುಖಪುಟಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

- Advertisement -
- Advertisement -

ಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ.

ವಿಜಯಪುರದ ಹಿಂದು ಯುವತಿ ಹಾಗೂ ಹಾವೇರಿಯ ಮುಸ್ಲಿಂ ಯುವಕ ಇಬ್ಬರು ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಬಜರಂಗದಳದ ಕಾರ್ಯಕರ್ತರು ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಯುವಕ-ಯುವತಿಯನ್ನು ಮಂಗಳೂರಿನ ಬಂದರು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಯುವಕ ಯುವತಿಯರಿಬ್ಬರು ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯಗೊಂಡಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಏಕಾಏಕಿಯಾಗಿ ಹೋಟೆಲ್ ಮೇಲೆ ದಾಳಿ ನಡೆಸುವ ಅಧಿಕಾರವನ್ನು ಬಜರಂಗದಳದವರಿಗೆ ಕೊಟ್ಟಿದ್ಯಾರು? ಪರಸ್ಪರ ಸಮ್ಮತಿ ಮೇರೆಗೆ ಇಬ್ಬರು ಸ್ನೇಹಿತರು ಒಟ್ಟಿಗೆ ಇದ್ದಾಗಲೂ ಅದನ್ನು ತಪ್ಪು ಎಂದು ಹೇಳಿ ಪೊಲೀಸರಿಗೆ ಒಪ್ಪಿಸಲು ಮತೀಯ ಗೂಂಡಾಗಳಿಗೆ ಅಧಿಕಾರವಿದೆಯೇ? ಪೊಲೀಸರು ಬಜರಂಗದಳದವನ್ನು ಬಂಧಿಸದೇ ಆ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದೇಕೆ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿವೆ. ಅಲ್ಲದೇ ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು, ಮಂಡ್ಯದಲ್ಲಿ, ವಿಜಯಪುರದಲ್ಲಿ ನಡೆದಿದ್ದ ಮತೀಯ ಗೂಂಡಾಗಿರಿ ಘಟನೆಗಳು ಮಾಸುವ ಮುಂಚೆಯೇ ಮಂಗಳೂರಿನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಈ ಹಿಂದೆಯೂ ಮಂಗಳೂರಿನಲ್ಲಿ ಹಲವು ಇದೇ ರೀತಿಯ ಘಟನೆಗಳು ನಡೆದಿದ್ದವು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೆ ಇತ್ತೀಚೆಗೆ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಮಾತನಾಡಿದ್ದರು. ಅದಕ್ಕೆ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿತ್ತು. ಅಕ್ಟೋಬರ್ 21 ರಂದು ಬೆಂಗಳೂರಿನಲ್ಲಿ ಪ್ರೀತಿ ಬೇಕು, ದ್ವೇಷ ಸಾಕು ಹೆಸರಿನಲ್ಲಿ ಮತೀಯ ಗೂಂಡಾಗಿರಿ ಮತ್ತು ಅದನ್ನು ಸಮರ್ಥಿಸುವ ಮುಖ್ಯಮಂತ್ರಿಗಳ ಹೇಳಿಕೆಯ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿದೆ. ಸಿಎಂ ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಆಲ್‌ ಇಂಡಿಯಾ ಲಾಯರ್ಸ್ ‌ ಅಸೋಸಿಯೇಷನ್‌ ಫಾರ್‌ ಜಸ್ಟೀಸ್ಸ್ ಸಂಘಟನೆಯು ನೋಟೀಸ್ ಜಾರಿ ಮಾಡಿದೆ.


ಇದನ್ನೂ ಓದಿ: ಬೆಳಗಾವಿ: ಪಾರ್ಕ್‌ಗೆ ಹೊರಟಿದ್ದ ಯುವಕ-ಯುವತಿಗೆ ಥಳಿಸಿ ಮತೀಯ ಗೂಂಡಾಗಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. Election ಹತ್ತಿರ ಬಂದಾಗ ನಾನು ಗೌರಿ ನೀನು ಗೌರಿ ಅಂತಾ ಹೊಸ ಹೊಸ website ಗಳು ಹುಟ್ಟಿಕೊಳ್ಳುತ್ತವೆ ಏನೇನೇ ನ್ಯೂಸ್ ಗಳನ್ನು ಬಿತ್ತಲು ಸುರು ಮಾಡುತ್ತವೆ.

    ನೈತಿಕ ಪೋಲಿಸ್ ಗರಿ ತಪ್ಪು, ಇದನ್ನು ಒಪ್ಪಿಕೊಳ್ಳುತ್ತೇವೆ. ಆದರೆ
    ಇಲ್ಲಿ ಹಿಂದೂ ಯುವತಿ – ಮುಸ್ಲಿಂ ಯುವಕ ವಿಷಯ ಬಂದಾಗ ಎದ್ದೇಳುವ ವೆಬ್ ಸೈಟ್ ಗಳು , ಮುಸ್ಲಿಂ ಯುವತಿ- ಹಿಂದೂ ಯುವಕರ ವಿಷಯ ಬಂದ ಸಂದರ್ಭದಲ್ಲಿ ಯಾಕೆ ಮಲಗಿದ್ದವು. ಇಂತಹ ವಿಷಯ ಬಂದಾಗ ನಡೆದ ಧಾಳಿಗಳ ಸಂದರ್ಭದಲ್ಲಿ ಯಾಕೆ ಮಾಧ್ಯಮ ಗಳು ಜಾಣ ಮೌನ ತೋರಿಸುತ್ತಿವೆ. ಅಂದರೆ ಮಾಧ್ಯಮ ವೆಬ್ ಸೈಟ್ ಗಳು ಏನನ್ನು ಪ್ರಚೋದಿಸುತ್ತಾ ಇವೆ ?

    ಹಾಗೂ ಇಲ್ಲಿ ಪೋಲೀಸರ ರಿಪೋರ್ಟ್ ಬರದೆ ಯಾವುದೇ ಘಟನೆಯನ್ನು ನೈತಿಕ ಹಾಗೂ ಅನೈತಿಕ ಎಂದು ಘೋಷಿಸಲು ಮಾಧ್ಯಮ ಗಳಿಗೆ ಅಧಿಕಾರ ಕೊಟ್ಟವರು ಯಾರು?

  2. ಮಾಧ್ಯಮಗಳು ನಮ್ಮನ್ನು ದಾರಿ ತಪ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...