Homeಅಂತರಾಷ್ಟ್ರೀಯ'ಮತ್ತೊಂದು ನಕ್ಬಾ': ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

‘ಮತ್ತೊಂದು ನಕ್ಬಾ’: ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

- Advertisement -
- Advertisement -

ಕಳೆದ ಎರಡು ವರ್ಷಗಳಲ್ಲಿ ಇಸ್ರೇಲ್ ಗಾಝಾ ಮೇಲೆ ನಡೆಸಿದ ಆಕ್ರಮಣವನ್ನು ಮತ್ತೊಂದು ನಕ್ಬಾ (ದುರಂತ) ಎನ್ನಬಹುದು. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ವಿಶ್ವಸಂಸ್ಥೆಯ ತಜ್ಞರು ಹೇಳುತ್ತಾರೆ.

ಕದನ ವಿರಾಮ ಜಾರಿಯಾದ ಹಿನ್ನೆಲೆ, ಸದ್ಯಕ್ಕೆ ಇಸ್ರೇಲ್ ಬಾಂಬ್ ದಾಳಿಯನ್ನು ನಿಲ್ಲಿಸಿದೆ. ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈಗಾಗಲೇ ಉತ್ತರ ಗಾಝಾ ತಲುಪಿದವರ ಪೈಕಿ ಕೆಲವರು ರಕ್ಷಣಾ ತಂಡಗಳ ಜೊತೆಗೂಡಿ ತಮ್ಮವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಕುಸಿದ ಕಟ್ಟಡಗಳ ಅವಶೇಷಗಳನ್ನು ಬುಲ್ಡೋಝರ್ ಮೂಲಕ ತೆರವುಗೊಳಿಸಿ ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ತಮ್ಮ ಊರುಗಳತ್ತ ಮರಳುತ್ತಿರುವ ಜನರ ಮನೆಗಳು ಸಂಪೂರ್ಣ ನಾಶವಾಗಿರುವುದರಿಂದ ಅವರಿಗೆ ತಾತ್ಕಾಲಿಕವಾಗಿ ತಂಗಲು ಡೇರೆಗಳು ಮತ್ತು ಕಾರವಾನ್‌ಗಳ ಅಗತ್ಯವಿದೆ. ಅದು ತಕ್ಷಣವೇ ತಲುಪಿಸಲು ಅವಕಾಶ ನೀಡಬೇಕು. ಗಾಝಾದ ಗಡಿಗಳನ್ನು ತೆರೆಯಬೇಕು ಎಂದು ವಿಶ್ವಸಂಸ್ಥೆ ಆಗ್ರಹಿಸಿದೆ.

ಉತ್ತರ ಗಾಝಾದಿಂದ ಇಸ್ರೇಲ್ ತನ್ನ ಸೇನೆಯನ್ನು ಹಿಂತೆಗೆದುಕೊಂಡಿದೆ. ಅಲ್ಲಿಗೆ ಜನರು ಮರಳುತ್ತಿದ್ದಾರೆ. ಆದರೆ, ಕಣ್ಣು ಹಾಯಿಸಿದಷ್ಟು ಪ್ರದೇಶದಲ್ಲಿ ಕೇವಲ ಕಟ್ಟಡಗಳ ಅವಶೇಷಗಳು ಹೊರತು ಇನ್ನೇನು ಕಾಣುತ್ತಿಲ್ಲ ಎಂದು ಜನರ ವಸತಿ ಹಕ್ಕಿನ ಕುರಿತು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಬಾಲಕೃಷ್ಣನ್ ರಾಜಗೋಪಾಲ್ ಹೇಳಿದ್ದಾರೆ.

“ಮಾನಸಿಕ ಪರಿಣಾಮಗಳು ಮತ್ತು ಆಘಾತವು ಆಳವಾದವು. ಉತ್ತರ ಗಾಝಾಗೆ ಹಿಂದಿರುಗುತ್ತಿರುವ ಜನರಲ್ಲಿ ನಾವೀಗ ನೋಡುತ್ತಿರುವುದು ಅದನ್ನೇ ಎಂದು ಶನಿವಾರ ಅಲ್- ಜಝೀರಾಗೆ ನೀಡಿದ ಸಂದರ್ಶನದಲ್ಲಿ ರಾಜಗೋಪಾಲ್ ತಿಳಿಸಿದ್ದಾರೆ.

ಇಸ್ರೇಲ್ ಆಕ್ರಮಣದಿಂದ ಗಾಝಾ ಶೇಕಡ 92ರಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ಧ್ವಂಸಗೊಂಡಿವೆ. ಹಾಗಾಗಿ, ಲಕ್ಷಾಂತರು ಜನರು ಡೇರೆಗಳು ಮತ್ತು ಇತರ ತಾತ್ಕಾಲಿಕ ಆಶ್ರಯಗಳಲ್ಲಿ ವಾಸಿಸಬೇಕಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಈ ವರ್ಷದ ಆರಂಭದಲ್ಲಿ ತಾತ್ಕಾಲಿಕ ಕದನ ವಿರಾಮ ಜಾರಿಯಾದಾಗ ಗಾಝಾಗೆ ಡೇರೆಗಳು ಮತ್ತು ಕಾರವಾನ್‌ಗಳನ್ನು ತಲುಪಿಸಬೇಕಾಗಿತ್ತು. ಆದರೆ, ಇಸ್ರೇಲ್‌ನ ಕಟ್ಟುನಿಟ್ಟಿನ ದಿಗ್ಬಂಧನದಿಂದಾಗಿ ಅದು ಸಾಧ್ಯವಾಗಿಲ್ಲ ಎಂದು ರಾಜಗೋಪಾಲ್ ಹೇಳಿದ್ದಾರೆ.

ಈಗ ತಕ್ಷಣ ಗಾಝಾದ ಗಡಿಗಳನ್ನು ತೆರೆದು ನೆರವು ಸಾಮಾಗ್ರಿಗಳನ್ನು ಜನರಿಗೆ ತಲುಪಿಸಲು ಅನುಮತಿಸಬೇಕು. ಯುದ್ಧ ಭೂಮಿಯಲ್ಲಿ ಕಟ್ಟಡಗಳ ಅವಶೇಷಗಳು ಹೊರತು ಜೀವಿಸಲು ಬೇಕಾದ ಏನೂ ಇಲ್ಲ. ಗಡಿ ತೆರೆಯದ ಹೊರತು ಗಾಝಾಗೆ ಹಿಂದಿರುಗಿದ ಜನರಿಗೆ ಯಾವುದೇ ಪ್ರಯೋಜನ ಆಗದು ಎಂದು ರಾಜಗೋಪಾಲ್ ತಿಳಿಸಿದ್ದಾರೆ.

ಗಾಝಾ ಪಟ್ಟಿಯಾದ್ಯಂತ ಮನೆಗಳ ನಾಶವನ್ನು ವಿವರಿಸಲು ‘ದೇಶ ಹತ್ಯೆ’ ಎಂಬ ಪದವನ್ನು ಬಳಸಿದ ರಾಜಗೋಪಾಲ್, ಗಾಝಾದಲ್ಲಿನ ವಸತಿ ನಾಶವು ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನಡೆಸಿದ ನರಮೇಧದ ಪ್ರಮುಖ ಅಂಶ ಎಂದಿದ್ದಾರೆ.

ಮನೆಗಳನ್ನು ನಾಶಪಡಿಸುವುದು, ಒಂದು ಪ್ರದೇಶದಿಂದ ಜನರನ್ನು ತೆರವುಗೊಳಿಸುವುದು ಮತ್ತು ಆ ಪ್ರದೇಶವನ್ನು ವಾಸಯೋಗ್ಯವಲ್ಲದವನ್ನಾಗಿ ಮಾಡುವುದು ನರಮೇಧದಕ್ಕೆ ಪ್ರಮುಖ ಉದಾಹರಣೆಗಳಾಗಿವೆ. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ರಾಜಗೋಪಾಲ್ ಹೇಳಿದ್ದಾರೆ.

1948ರಲ್ಲಿ ಇಸ್ರೇಲ್ ರಚನೆಯಾದಾಗ ಪ್ಯಾಲೆಸ್ತೀನ್‌ನಲ್ಲಿ ನಡೆದ ಜನಾಂಗೀಯ ಉಲ್ಲೇಖಿಸಿದ ಅವರು, “ಇದು ಮತ್ತೊಂದು ನಕ್ಬಾದಂತಿದೆ. ಏಕೆಂದರೆ, 1948ರಲ್ಲಿ ಏನು ನಡೆದಿತ್ತೋ ಅದೇ ಕಳೆದ ಎರಡು ವರ್ಷಗಳಲ್ಲಿ ನಡೆದಿದೆ ಎಂದಿದ್ದಾರೆ.

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...