Homeಅಂತರಾಷ್ಟ್ರೀಯ'ಮತ್ತೊಂದು ನಕ್ಬಾ': ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

‘ಮತ್ತೊಂದು ನಕ್ಬಾ’: ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

- Advertisement -
- Advertisement -

ಕಳೆದ ಎರಡು ವರ್ಷಗಳಲ್ಲಿ ಇಸ್ರೇಲ್ ಗಾಝಾ ಮೇಲೆ ನಡೆಸಿದ ಆಕ್ರಮಣವನ್ನು ಮತ್ತೊಂದು ನಕ್ಬಾ (ದುರಂತ) ಎನ್ನಬಹುದು. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ವಿಶ್ವಸಂಸ್ಥೆಯ ತಜ್ಞರು ಹೇಳುತ್ತಾರೆ.

ಕದನ ವಿರಾಮ ಜಾರಿಯಾದ ಹಿನ್ನೆಲೆ, ಸದ್ಯಕ್ಕೆ ಇಸ್ರೇಲ್ ಬಾಂಬ್ ದಾಳಿಯನ್ನು ನಿಲ್ಲಿಸಿದೆ. ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈಗಾಗಲೇ ಉತ್ತರ ಗಾಝಾ ತಲುಪಿದವರ ಪೈಕಿ ಕೆಲವರು ರಕ್ಷಣಾ ತಂಡಗಳ ಜೊತೆಗೂಡಿ ತಮ್ಮವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಕುಸಿದ ಕಟ್ಟಡಗಳ ಅವಶೇಷಗಳನ್ನು ಬುಲ್ಡೋಝರ್ ಮೂಲಕ ತೆರವುಗೊಳಿಸಿ ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ತಮ್ಮ ಊರುಗಳತ್ತ ಮರಳುತ್ತಿರುವ ಜನರ ಮನೆಗಳು ಸಂಪೂರ್ಣ ನಾಶವಾಗಿರುವುದರಿಂದ ಅವರಿಗೆ ತಾತ್ಕಾಲಿಕವಾಗಿ ತಂಗಲು ಡೇರೆಗಳು ಮತ್ತು ಕಾರವಾನ್‌ಗಳ ಅಗತ್ಯವಿದೆ. ಅದು ತಕ್ಷಣವೇ ತಲುಪಿಸಲು ಅವಕಾಶ ನೀಡಬೇಕು. ಗಾಝಾದ ಗಡಿಗಳನ್ನು ತೆರೆಯಬೇಕು ಎಂದು ವಿಶ್ವಸಂಸ್ಥೆ ಆಗ್ರಹಿಸಿದೆ.

ಉತ್ತರ ಗಾಝಾದಿಂದ ಇಸ್ರೇಲ್ ತನ್ನ ಸೇನೆಯನ್ನು ಹಿಂತೆಗೆದುಕೊಂಡಿದೆ. ಅಲ್ಲಿಗೆ ಜನರು ಮರಳುತ್ತಿದ್ದಾರೆ. ಆದರೆ, ಕಣ್ಣು ಹಾಯಿಸಿದಷ್ಟು ಪ್ರದೇಶದಲ್ಲಿ ಕೇವಲ ಕಟ್ಟಡಗಳ ಅವಶೇಷಗಳು ಹೊರತು ಇನ್ನೇನು ಕಾಣುತ್ತಿಲ್ಲ ಎಂದು ಜನರ ವಸತಿ ಹಕ್ಕಿನ ಕುರಿತು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಬಾಲಕೃಷ್ಣನ್ ರಾಜಗೋಪಾಲ್ ಹೇಳಿದ್ದಾರೆ.

“ಮಾನಸಿಕ ಪರಿಣಾಮಗಳು ಮತ್ತು ಆಘಾತವು ಆಳವಾದವು. ಉತ್ತರ ಗಾಝಾಗೆ ಹಿಂದಿರುಗುತ್ತಿರುವ ಜನರಲ್ಲಿ ನಾವೀಗ ನೋಡುತ್ತಿರುವುದು ಅದನ್ನೇ ಎಂದು ಶನಿವಾರ ಅಲ್- ಜಝೀರಾಗೆ ನೀಡಿದ ಸಂದರ್ಶನದಲ್ಲಿ ರಾಜಗೋಪಾಲ್ ತಿಳಿಸಿದ್ದಾರೆ.

ಇಸ್ರೇಲ್ ಆಕ್ರಮಣದಿಂದ ಗಾಝಾ ಶೇಕಡ 92ರಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ಧ್ವಂಸಗೊಂಡಿವೆ. ಹಾಗಾಗಿ, ಲಕ್ಷಾಂತರು ಜನರು ಡೇರೆಗಳು ಮತ್ತು ಇತರ ತಾತ್ಕಾಲಿಕ ಆಶ್ರಯಗಳಲ್ಲಿ ವಾಸಿಸಬೇಕಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಈ ವರ್ಷದ ಆರಂಭದಲ್ಲಿ ತಾತ್ಕಾಲಿಕ ಕದನ ವಿರಾಮ ಜಾರಿಯಾದಾಗ ಗಾಝಾಗೆ ಡೇರೆಗಳು ಮತ್ತು ಕಾರವಾನ್‌ಗಳನ್ನು ತಲುಪಿಸಬೇಕಾಗಿತ್ತು. ಆದರೆ, ಇಸ್ರೇಲ್‌ನ ಕಟ್ಟುನಿಟ್ಟಿನ ದಿಗ್ಬಂಧನದಿಂದಾಗಿ ಅದು ಸಾಧ್ಯವಾಗಿಲ್ಲ ಎಂದು ರಾಜಗೋಪಾಲ್ ಹೇಳಿದ್ದಾರೆ.

ಈಗ ತಕ್ಷಣ ಗಾಝಾದ ಗಡಿಗಳನ್ನು ತೆರೆದು ನೆರವು ಸಾಮಾಗ್ರಿಗಳನ್ನು ಜನರಿಗೆ ತಲುಪಿಸಲು ಅನುಮತಿಸಬೇಕು. ಯುದ್ಧ ಭೂಮಿಯಲ್ಲಿ ಕಟ್ಟಡಗಳ ಅವಶೇಷಗಳು ಹೊರತು ಜೀವಿಸಲು ಬೇಕಾದ ಏನೂ ಇಲ್ಲ. ಗಡಿ ತೆರೆಯದ ಹೊರತು ಗಾಝಾಗೆ ಹಿಂದಿರುಗಿದ ಜನರಿಗೆ ಯಾವುದೇ ಪ್ರಯೋಜನ ಆಗದು ಎಂದು ರಾಜಗೋಪಾಲ್ ತಿಳಿಸಿದ್ದಾರೆ.

ಗಾಝಾ ಪಟ್ಟಿಯಾದ್ಯಂತ ಮನೆಗಳ ನಾಶವನ್ನು ವಿವರಿಸಲು ‘ದೇಶ ಹತ್ಯೆ’ ಎಂಬ ಪದವನ್ನು ಬಳಸಿದ ರಾಜಗೋಪಾಲ್, ಗಾಝಾದಲ್ಲಿನ ವಸತಿ ನಾಶವು ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನಡೆಸಿದ ನರಮೇಧದ ಪ್ರಮುಖ ಅಂಶ ಎಂದಿದ್ದಾರೆ.

ಮನೆಗಳನ್ನು ನಾಶಪಡಿಸುವುದು, ಒಂದು ಪ್ರದೇಶದಿಂದ ಜನರನ್ನು ತೆರವುಗೊಳಿಸುವುದು ಮತ್ತು ಆ ಪ್ರದೇಶವನ್ನು ವಾಸಯೋಗ್ಯವಲ್ಲದವನ್ನಾಗಿ ಮಾಡುವುದು ನರಮೇಧದಕ್ಕೆ ಪ್ರಮುಖ ಉದಾಹರಣೆಗಳಾಗಿವೆ. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ರಾಜಗೋಪಾಲ್ ಹೇಳಿದ್ದಾರೆ.

1948ರಲ್ಲಿ ಇಸ್ರೇಲ್ ರಚನೆಯಾದಾಗ ಪ್ಯಾಲೆಸ್ತೀನ್‌ನಲ್ಲಿ ನಡೆದ ಜನಾಂಗೀಯ ಉಲ್ಲೇಖಿಸಿದ ಅವರು, “ಇದು ಮತ್ತೊಂದು ನಕ್ಬಾದಂತಿದೆ. ಏಕೆಂದರೆ, 1948ರಲ್ಲಿ ಏನು ನಡೆದಿತ್ತೋ ಅದೇ ಕಳೆದ ಎರಡು ವರ್ಷಗಳಲ್ಲಿ ನಡೆದಿದೆ ಎಂದಿದ್ದಾರೆ.

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...