Homeಅಂತರಾಷ್ಟ್ರೀಯ'ಮತ್ತೊಂದು ನಕ್ಬಾ': ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

‘ಮತ್ತೊಂದು ನಕ್ಬಾ’: ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

- Advertisement -
- Advertisement -

ಕಳೆದ ಎರಡು ವರ್ಷಗಳಲ್ಲಿ ಇಸ್ರೇಲ್ ಗಾಝಾ ಮೇಲೆ ನಡೆಸಿದ ಆಕ್ರಮಣವನ್ನು ಮತ್ತೊಂದು ನಕ್ಬಾ (ದುರಂತ) ಎನ್ನಬಹುದು. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ವಿಶ್ವಸಂಸ್ಥೆಯ ತಜ್ಞರು ಹೇಳುತ್ತಾರೆ.

ಕದನ ವಿರಾಮ ಜಾರಿಯಾದ ಹಿನ್ನೆಲೆ, ಸದ್ಯಕ್ಕೆ ಇಸ್ರೇಲ್ ಬಾಂಬ್ ದಾಳಿಯನ್ನು ನಿಲ್ಲಿಸಿದೆ. ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈಗಾಗಲೇ ಉತ್ತರ ಗಾಝಾ ತಲುಪಿದವರ ಪೈಕಿ ಕೆಲವರು ರಕ್ಷಣಾ ತಂಡಗಳ ಜೊತೆಗೂಡಿ ತಮ್ಮವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಕುಸಿದ ಕಟ್ಟಡಗಳ ಅವಶೇಷಗಳನ್ನು ಬುಲ್ಡೋಝರ್ ಮೂಲಕ ತೆರವುಗೊಳಿಸಿ ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ತಮ್ಮ ಊರುಗಳತ್ತ ಮರಳುತ್ತಿರುವ ಜನರ ಮನೆಗಳು ಸಂಪೂರ್ಣ ನಾಶವಾಗಿರುವುದರಿಂದ ಅವರಿಗೆ ತಾತ್ಕಾಲಿಕವಾಗಿ ತಂಗಲು ಡೇರೆಗಳು ಮತ್ತು ಕಾರವಾನ್‌ಗಳ ಅಗತ್ಯವಿದೆ. ಅದು ತಕ್ಷಣವೇ ತಲುಪಿಸಲು ಅವಕಾಶ ನೀಡಬೇಕು. ಗಾಝಾದ ಗಡಿಗಳನ್ನು ತೆರೆಯಬೇಕು ಎಂದು ವಿಶ್ವಸಂಸ್ಥೆ ಆಗ್ರಹಿಸಿದೆ.

ಉತ್ತರ ಗಾಝಾದಿಂದ ಇಸ್ರೇಲ್ ತನ್ನ ಸೇನೆಯನ್ನು ಹಿಂತೆಗೆದುಕೊಂಡಿದೆ. ಅಲ್ಲಿಗೆ ಜನರು ಮರಳುತ್ತಿದ್ದಾರೆ. ಆದರೆ, ಕಣ್ಣು ಹಾಯಿಸಿದಷ್ಟು ಪ್ರದೇಶದಲ್ಲಿ ಕೇವಲ ಕಟ್ಟಡಗಳ ಅವಶೇಷಗಳು ಹೊರತು ಇನ್ನೇನು ಕಾಣುತ್ತಿಲ್ಲ ಎಂದು ಜನರ ವಸತಿ ಹಕ್ಕಿನ ಕುರಿತು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಬಾಲಕೃಷ್ಣನ್ ರಾಜಗೋಪಾಲ್ ಹೇಳಿದ್ದಾರೆ.

“ಮಾನಸಿಕ ಪರಿಣಾಮಗಳು ಮತ್ತು ಆಘಾತವು ಆಳವಾದವು. ಉತ್ತರ ಗಾಝಾಗೆ ಹಿಂದಿರುಗುತ್ತಿರುವ ಜನರಲ್ಲಿ ನಾವೀಗ ನೋಡುತ್ತಿರುವುದು ಅದನ್ನೇ ಎಂದು ಶನಿವಾರ ಅಲ್- ಜಝೀರಾಗೆ ನೀಡಿದ ಸಂದರ್ಶನದಲ್ಲಿ ರಾಜಗೋಪಾಲ್ ತಿಳಿಸಿದ್ದಾರೆ.

ಇಸ್ರೇಲ್ ಆಕ್ರಮಣದಿಂದ ಗಾಝಾ ಶೇಕಡ 92ರಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ಧ್ವಂಸಗೊಂಡಿವೆ. ಹಾಗಾಗಿ, ಲಕ್ಷಾಂತರು ಜನರು ಡೇರೆಗಳು ಮತ್ತು ಇತರ ತಾತ್ಕಾಲಿಕ ಆಶ್ರಯಗಳಲ್ಲಿ ವಾಸಿಸಬೇಕಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಈ ವರ್ಷದ ಆರಂಭದಲ್ಲಿ ತಾತ್ಕಾಲಿಕ ಕದನ ವಿರಾಮ ಜಾರಿಯಾದಾಗ ಗಾಝಾಗೆ ಡೇರೆಗಳು ಮತ್ತು ಕಾರವಾನ್‌ಗಳನ್ನು ತಲುಪಿಸಬೇಕಾಗಿತ್ತು. ಆದರೆ, ಇಸ್ರೇಲ್‌ನ ಕಟ್ಟುನಿಟ್ಟಿನ ದಿಗ್ಬಂಧನದಿಂದಾಗಿ ಅದು ಸಾಧ್ಯವಾಗಿಲ್ಲ ಎಂದು ರಾಜಗೋಪಾಲ್ ಹೇಳಿದ್ದಾರೆ.

ಈಗ ತಕ್ಷಣ ಗಾಝಾದ ಗಡಿಗಳನ್ನು ತೆರೆದು ನೆರವು ಸಾಮಾಗ್ರಿಗಳನ್ನು ಜನರಿಗೆ ತಲುಪಿಸಲು ಅನುಮತಿಸಬೇಕು. ಯುದ್ಧ ಭೂಮಿಯಲ್ಲಿ ಕಟ್ಟಡಗಳ ಅವಶೇಷಗಳು ಹೊರತು ಜೀವಿಸಲು ಬೇಕಾದ ಏನೂ ಇಲ್ಲ. ಗಡಿ ತೆರೆಯದ ಹೊರತು ಗಾಝಾಗೆ ಹಿಂದಿರುಗಿದ ಜನರಿಗೆ ಯಾವುದೇ ಪ್ರಯೋಜನ ಆಗದು ಎಂದು ರಾಜಗೋಪಾಲ್ ತಿಳಿಸಿದ್ದಾರೆ.

ಗಾಝಾ ಪಟ್ಟಿಯಾದ್ಯಂತ ಮನೆಗಳ ನಾಶವನ್ನು ವಿವರಿಸಲು ‘ದೇಶ ಹತ್ಯೆ’ ಎಂಬ ಪದವನ್ನು ಬಳಸಿದ ರಾಜಗೋಪಾಲ್, ಗಾಝಾದಲ್ಲಿನ ವಸತಿ ನಾಶವು ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನಡೆಸಿದ ನರಮೇಧದ ಪ್ರಮುಖ ಅಂಶ ಎಂದಿದ್ದಾರೆ.

ಮನೆಗಳನ್ನು ನಾಶಪಡಿಸುವುದು, ಒಂದು ಪ್ರದೇಶದಿಂದ ಜನರನ್ನು ತೆರವುಗೊಳಿಸುವುದು ಮತ್ತು ಆ ಪ್ರದೇಶವನ್ನು ವಾಸಯೋಗ್ಯವಲ್ಲದವನ್ನಾಗಿ ಮಾಡುವುದು ನರಮೇಧದಕ್ಕೆ ಪ್ರಮುಖ ಉದಾಹರಣೆಗಳಾಗಿವೆ. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ರಾಜಗೋಪಾಲ್ ಹೇಳಿದ್ದಾರೆ.

1948ರಲ್ಲಿ ಇಸ್ರೇಲ್ ರಚನೆಯಾದಾಗ ಪ್ಯಾಲೆಸ್ತೀನ್‌ನಲ್ಲಿ ನಡೆದ ಜನಾಂಗೀಯ ಉಲ್ಲೇಖಿಸಿದ ಅವರು, “ಇದು ಮತ್ತೊಂದು ನಕ್ಬಾದಂತಿದೆ. ಏಕೆಂದರೆ, 1948ರಲ್ಲಿ ಏನು ನಡೆದಿತ್ತೋ ಅದೇ ಕಳೆದ ಎರಡು ವರ್ಷಗಳಲ್ಲಿ ನಡೆದಿದೆ ಎಂದಿದ್ದಾರೆ.

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...