Homeಅಂತರಾಷ್ಟ್ರೀಯ'ಮತ್ತೊಂದು ನಕ್ಬಾ': ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

‘ಮತ್ತೊಂದು ನಕ್ಬಾ’: ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

- Advertisement -
- Advertisement -

ಕಳೆದ ಎರಡು ವರ್ಷಗಳಲ್ಲಿ ಇಸ್ರೇಲ್ ಗಾಝಾ ಮೇಲೆ ನಡೆಸಿದ ಆಕ್ರಮಣವನ್ನು ಮತ್ತೊಂದು ನಕ್ಬಾ (ದುರಂತ) ಎನ್ನಬಹುದು. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ವಿಶ್ವಸಂಸ್ಥೆಯ ತಜ್ಞರು ಹೇಳುತ್ತಾರೆ.

ಕದನ ವಿರಾಮ ಜಾರಿಯಾದ ಹಿನ್ನೆಲೆ, ಸದ್ಯಕ್ಕೆ ಇಸ್ರೇಲ್ ಬಾಂಬ್ ದಾಳಿಯನ್ನು ನಿಲ್ಲಿಸಿದೆ. ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈಗಾಗಲೇ ಉತ್ತರ ಗಾಝಾ ತಲುಪಿದವರ ಪೈಕಿ ಕೆಲವರು ರಕ್ಷಣಾ ತಂಡಗಳ ಜೊತೆಗೂಡಿ ತಮ್ಮವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಕುಸಿದ ಕಟ್ಟಡಗಳ ಅವಶೇಷಗಳನ್ನು ಬುಲ್ಡೋಝರ್ ಮೂಲಕ ತೆರವುಗೊಳಿಸಿ ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ತಮ್ಮ ಊರುಗಳತ್ತ ಮರಳುತ್ತಿರುವ ಜನರ ಮನೆಗಳು ಸಂಪೂರ್ಣ ನಾಶವಾಗಿರುವುದರಿಂದ ಅವರಿಗೆ ತಾತ್ಕಾಲಿಕವಾಗಿ ತಂಗಲು ಡೇರೆಗಳು ಮತ್ತು ಕಾರವಾನ್‌ಗಳ ಅಗತ್ಯವಿದೆ. ಅದು ತಕ್ಷಣವೇ ತಲುಪಿಸಲು ಅವಕಾಶ ನೀಡಬೇಕು. ಗಾಝಾದ ಗಡಿಗಳನ್ನು ತೆರೆಯಬೇಕು ಎಂದು ವಿಶ್ವಸಂಸ್ಥೆ ಆಗ್ರಹಿಸಿದೆ.

ಉತ್ತರ ಗಾಝಾದಿಂದ ಇಸ್ರೇಲ್ ತನ್ನ ಸೇನೆಯನ್ನು ಹಿಂತೆಗೆದುಕೊಂಡಿದೆ. ಅಲ್ಲಿಗೆ ಜನರು ಮರಳುತ್ತಿದ್ದಾರೆ. ಆದರೆ, ಕಣ್ಣು ಹಾಯಿಸಿದಷ್ಟು ಪ್ರದೇಶದಲ್ಲಿ ಕೇವಲ ಕಟ್ಟಡಗಳ ಅವಶೇಷಗಳು ಹೊರತು ಇನ್ನೇನು ಕಾಣುತ್ತಿಲ್ಲ ಎಂದು ಜನರ ವಸತಿ ಹಕ್ಕಿನ ಕುರಿತು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಬಾಲಕೃಷ್ಣನ್ ರಾಜಗೋಪಾಲ್ ಹೇಳಿದ್ದಾರೆ.

“ಮಾನಸಿಕ ಪರಿಣಾಮಗಳು ಮತ್ತು ಆಘಾತವು ಆಳವಾದವು. ಉತ್ತರ ಗಾಝಾಗೆ ಹಿಂದಿರುಗುತ್ತಿರುವ ಜನರಲ್ಲಿ ನಾವೀಗ ನೋಡುತ್ತಿರುವುದು ಅದನ್ನೇ ಎಂದು ಶನಿವಾರ ಅಲ್- ಜಝೀರಾಗೆ ನೀಡಿದ ಸಂದರ್ಶನದಲ್ಲಿ ರಾಜಗೋಪಾಲ್ ತಿಳಿಸಿದ್ದಾರೆ.

ಇಸ್ರೇಲ್ ಆಕ್ರಮಣದಿಂದ ಗಾಝಾ ಶೇಕಡ 92ರಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ಧ್ವಂಸಗೊಂಡಿವೆ. ಹಾಗಾಗಿ, ಲಕ್ಷಾಂತರು ಜನರು ಡೇರೆಗಳು ಮತ್ತು ಇತರ ತಾತ್ಕಾಲಿಕ ಆಶ್ರಯಗಳಲ್ಲಿ ವಾಸಿಸಬೇಕಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಈ ವರ್ಷದ ಆರಂಭದಲ್ಲಿ ತಾತ್ಕಾಲಿಕ ಕದನ ವಿರಾಮ ಜಾರಿಯಾದಾಗ ಗಾಝಾಗೆ ಡೇರೆಗಳು ಮತ್ತು ಕಾರವಾನ್‌ಗಳನ್ನು ತಲುಪಿಸಬೇಕಾಗಿತ್ತು. ಆದರೆ, ಇಸ್ರೇಲ್‌ನ ಕಟ್ಟುನಿಟ್ಟಿನ ದಿಗ್ಬಂಧನದಿಂದಾಗಿ ಅದು ಸಾಧ್ಯವಾಗಿಲ್ಲ ಎಂದು ರಾಜಗೋಪಾಲ್ ಹೇಳಿದ್ದಾರೆ.

ಈಗ ತಕ್ಷಣ ಗಾಝಾದ ಗಡಿಗಳನ್ನು ತೆರೆದು ನೆರವು ಸಾಮಾಗ್ರಿಗಳನ್ನು ಜನರಿಗೆ ತಲುಪಿಸಲು ಅನುಮತಿಸಬೇಕು. ಯುದ್ಧ ಭೂಮಿಯಲ್ಲಿ ಕಟ್ಟಡಗಳ ಅವಶೇಷಗಳು ಹೊರತು ಜೀವಿಸಲು ಬೇಕಾದ ಏನೂ ಇಲ್ಲ. ಗಡಿ ತೆರೆಯದ ಹೊರತು ಗಾಝಾಗೆ ಹಿಂದಿರುಗಿದ ಜನರಿಗೆ ಯಾವುದೇ ಪ್ರಯೋಜನ ಆಗದು ಎಂದು ರಾಜಗೋಪಾಲ್ ತಿಳಿಸಿದ್ದಾರೆ.

ಗಾಝಾ ಪಟ್ಟಿಯಾದ್ಯಂತ ಮನೆಗಳ ನಾಶವನ್ನು ವಿವರಿಸಲು ‘ದೇಶ ಹತ್ಯೆ’ ಎಂಬ ಪದವನ್ನು ಬಳಸಿದ ರಾಜಗೋಪಾಲ್, ಗಾಝಾದಲ್ಲಿನ ವಸತಿ ನಾಶವು ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನಡೆಸಿದ ನರಮೇಧದ ಪ್ರಮುಖ ಅಂಶ ಎಂದಿದ್ದಾರೆ.

ಮನೆಗಳನ್ನು ನಾಶಪಡಿಸುವುದು, ಒಂದು ಪ್ರದೇಶದಿಂದ ಜನರನ್ನು ತೆರವುಗೊಳಿಸುವುದು ಮತ್ತು ಆ ಪ್ರದೇಶವನ್ನು ವಾಸಯೋಗ್ಯವಲ್ಲದವನ್ನಾಗಿ ಮಾಡುವುದು ನರಮೇಧದಕ್ಕೆ ಪ್ರಮುಖ ಉದಾಹರಣೆಗಳಾಗಿವೆ. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ರಾಜಗೋಪಾಲ್ ಹೇಳಿದ್ದಾರೆ.

1948ರಲ್ಲಿ ಇಸ್ರೇಲ್ ರಚನೆಯಾದಾಗ ಪ್ಯಾಲೆಸ್ತೀನ್‌ನಲ್ಲಿ ನಡೆದ ಜನಾಂಗೀಯ ಉಲ್ಲೇಖಿಸಿದ ಅವರು, “ಇದು ಮತ್ತೊಂದು ನಕ್ಬಾದಂತಿದೆ. ಏಕೆಂದರೆ, 1948ರಲ್ಲಿ ಏನು ನಡೆದಿತ್ತೋ ಅದೇ ಕಳೆದ ಎರಡು ವರ್ಷಗಳಲ್ಲಿ ನಡೆದಿದೆ ಎಂದಿದ್ದಾರೆ.

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...