Homeಮುಖಪುಟಶೃಂಗೇರಿ ಮಠದಲ್ಲೊಂದು ಮುಚ್ಚಿಹೋದ ನಿರ್ಭಯ ಪ್ರಕರಣ! - ಬಿ.ಚಂದ್ರೇಗೌಡ

ಶೃಂಗೇರಿ ಮಠದಲ್ಲೊಂದು ಮುಚ್ಚಿಹೋದ ನಿರ್ಭಯ ಪ್ರಕರಣ! – ಬಿ.ಚಂದ್ರೇಗೌಡ

ಕಲ್ಕುಳಿ ವಿಠ್ಠಲ ಹೆಗಡೆ ಅಧ್ಯಕ್ಷನಾಗಬಾರದೆಂದು ಈ ರೂಪದ ಪ್ರತಿಭಟನೆಗೆ ಕಾರಣವೇನೆಂದು ಪರಶೀಲಿಸಿದಾಗ, ಅವರ ಮಂಗನ ಬ್ಯಾಟೆ ಕೃತಿಯಲ್ಲಿ ಉತ್ತರಗಳು ಸಿಕ್ಕಿದವು.

- Advertisement -
- Advertisement -

ಕಲ್ಬುರ್ಗಿಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ, ಭಾಗವಹಿಸುತ್ತಿರುವ ಸಾಹಿತಿಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದ ಘಟನೆ ಅವರ ಪ್ರಜ್ಞೆಯನ್ನು ಕೆಣಕಿದರೆ ಶುಭ ಸೂಚನೆ ಎಂದು ಭಾವಿಸಬಹುದು. ಇವತ್ತು ಶೃಂಗೇರಿ ಘಟನೆ ನಾಳೆ ಬೆಂಗಳೂರು ಸಾಹಿತ್ಯ ಪರಿಷತ್‌ಗೂ ಸಂಭವಿಸಬಹುದು. ಆಗ ಮನುಬಳಿಗಾರ್ ತರಹದವರು ಏನೂ ಮಾಡಲಾಗುವುದಿಲ್ಲ ಆದ್ದರಿಂದ, ಈ ಸಾಹಿತ್ಯ ಪರಿಷತ್ ಸ್ವಾಯತ್ತ ಸಂಸ್ಥೆಯಾಗಿ ಉಳಿಯುವುದರ ಬಗ್ಗೆ ಎಲ್ಲರೂ ಯೋಚಿಸಬೇಕಿದೆ.

ವಾಸ್ತವವಾಗಿ ಶೃಂಗೇರಿ ಘಟನೆ ನಮ್ಮ ಸಾಹಿತಿಗಳನ್ನು ಕೆರಳಿಸಿ ಪ್ರತಿಭಟನೆ ಇತ್ಯಾದಿ ಚಟುವಟಿಕೆ ನಿರೀಕ್ಷಿಸಿದ್ದವರಿಗೆ ನಿರಾಶೆಯಾಗಿದೆ. ಅವರೆಲ್ಲಾ ಕಲ್ಬುರ್ಗಿಯ ವಸತಿ, ಪ್ರಯಾಣಭತ್ಯೆ, ಊಟದ ಬಗ್ಗೆ ಮಾತ್ರ ತಲೆಕೆಡಿಸಿಕೊಂಡಿರಬಹುದು. ಕೆಲವೇ ಕೆಲವು ದಿಟ್ಟ ಸಾಹಿತಿಗಳು ಮಾತ್ರ ನಿಜವಾಗಿ ಪ್ರತಿಭಟನಾ ಹೇಳಿಕೆ ಕೊಟ್ಟರು.

ಕಲ್ಕುಳಿ ವಿಠ್ಠಲ ಹೆಗಡೆ ಅಧ್ಯಕ್ಷನಾಗಬಾರದೆಂದು ಈ ರೂಪದ ಪ್ರತಿಭಟನೆಗೆ ಕಾರಣವೇನೆಂದು ಪರಶೀಲಿಸಿದಾಗ, ಅವರ ಮಂಗನ ಬ್ಯಾಟೆ ಕೃತಿಯಲ್ಲಿ ಕಾರಣಗಳು ಸಿಕ್ಕಿದವು. ಅವರು ವಾಸವಾಗಿರುವ ಪ್ರದೇಶದ ಮಠ ಸ್ವಜಾತಿಯ ಹಿತ ಕಾಪಾಡುವುದಕ್ಕೆ ಮೀಸಲಾದ ಮಠ. ಅಂದರೆ ಸ್ವಜಾತಿಯ ಸಾಮಾನ್ಯ ಮನೆಕಟ್ಟಿಕೊಳ್ಳುತ್ತಿದ್ದರೆ, ಇಟ್ಟಿಗೆ ಸಿಮೆಂಟು ಮರಮುಟ್ಟುಗಳನ್ನು ಪೂರೈಸಿ ಸ್ವಜಾತಿಬಂಧುವಿಗೆ ಸಹಾಯ ಮಾಡುವ ಮಠ. ಜೊತೆಗೆ ಅವರ ಮಕ್ಕಳಿಗೆ ಶಾಲಾಕಾಲೇಜಿಗೆ ಫೀಜು ಕಟ್ಟುತ್ತ ವಿದೇಶಿ ಓದಿಗೂ ಸಹಾಯ ಮಾಡುವ ಮಾತೃಸಂಸ್ಥೆ.

ಈ ರೂಪದಲ್ಲಿರುವ ಬ್ರಾಹ್ಮಣ ಮಠಗಳಲ್ಲಿ ಇದು ಮೊದಲನೆಯದು ಆದರೆ ಲಿಂಗಾಯತ ಮತ್ತಿತರ ಜಾತಿ ಮಠಗಳು ಎಲ್ಲಾ ಜನಾಂಗದ ಹಿತ ಕಾಯುತ್ತವೆ. ಉದಾಹರಣೆಗೆ ಸಿದ್ದಗಂಗೆ ಆವರಣದಲ್ಲಿ ಆಡುವ ಮಕ್ಕಳನ್ನು ವಿಚಾರಿಸಿದರೆ ಅವರೆಲ್ಲಾ ಕೆಳಜಾತಿ ಬಡವರ ಮಕ್ಕಳು, ಹಾಗೆಯೇ ಚುಂಚನಗಿರಿ ಮಠದಲ್ಲಿ ಓದುತ್ತಿರುವ ಮಕ್ಕಳನ್ನ ಕೇಳಿದರೆ ಅವರೂ ಕೂಡ ಒಂದೇ ಜಾತಿಗೆ ಸೀಮಿತವಾಗದ ಬಡವರ್ಗದ ಮಕ್ಕಳು. ಆದರೆ ಬ್ರಾಹ್ಮಣ ಮಠಗಳು ತಮ್ಮವರ ಹಿತಕಾಯುವ ಮಠ. ದುರಂತವೆಂದರೆ ದಡ್ಡ ಶೂದ್ರರ ಕಾಣಿಕೆ ಹೇರಳವಾಗಿ ಹರಿದುಬರುವುದು ಈ ಪುರೋಹಿತರ ಮಠಗಳಿಗೆ. ರಾಜಕಾರಣಿಗಳ ನಿಧಿ ಹರಿದು ಬರುವುದು ಇಲ್ಲಿಗೆ.

ಇಂತಹದನ್ನು ಗುರುತಿಸುತ್ತ ಮುಖ್ಯವಾಗಿ ಬ್ರಾಹ್ಮಣರೆಂದರೆ ಯಾರು, ಶೂದ್ರರ ಆಚರಣೆಗಳೇನು ಎಂದು ವಿಂಗಡಿಸಿ ತೋರುವ ವಿಠಲ ಹೆಗಡೆ ಮಠಗಳ ಪರಮವೈರಿ; ಜೊತೆಗೆ ಆರೆಸೆಸ್ ಭಜರಂಗಿ ವಿಶ್ವಹಿಂದೂಗಳ ಹಿಕಮತ್ತನ್ನು ವಿರೋಧಿಸುವ ಹೆಗಡೆಯನ್ನು ಗೌಡರ ಹುಡುಗನಾಗಿ ಪರಿಗಣಿಸದೆ, ನಕ್ಸಲ್ ಹಣೆಪಟ್ಟಿ ಕಟ್ಟಿ ಜನರ ವಿರುದ್ಧ ಎತ್ತಿ ಕಟ್ಟಲು ಪುರೋಹಿತರು ಕಂಡುಕೊಂಡ ಕುಯುಕ್ತಿಯಿದು. ಏಕೆಂದರೆ ಮಠದ ಮರ್ಯಾದೆಯನ್ನು ತನ್ನ ಮಂಗನಬೇಟೆಯಲ್ಲಿ ಹರಾಜು ಹಾಕಿರುವ ಈತ, ಎಂದೂ ಕ್ಷಮಿಸದ ಸಾಹಿತಿಯಾಗಿದ್ದಾನೆ. ಸಾಹಿತಿಯಾದವನು ಸತ್ಯ ಹೇಳಬೇಕು, ಅದನ್ನ ಹೇಳಿದ್ದಕ್ಕೆ ಸಮಯ ಕಾಯತ್ತಿದ್ದ ಬ್ರಾಹ್ಮಣರು, ಮತ್ತೊಬ್ಬ ಒಕ್ಕಲಿಗ ಸಿ.ಟಿ.ರವಿ ಎಂಬುವನ ಹೆಗಲ ಮೇಲೆ ಗನ್ನಿಡಿದು ಉಡಾಯಿಸಿವೆ. ಆದರೆ ಗನ್ನಿನಲ್ಲಿದ್ದದ್ದು ಗುಂಡಲ್ಲ ಬರಿ ಪುಡಿ ಅಷ್ಟೇ.

ಮಂಗನಬ್ಯಾಟಿಯಲ್ಲಿ ದಾಖಲಾಗಿರುವ ಪ್ರಕರಣ ಒಂದು ಹೀಗಿದೆ. ಮಠಕ್ಕೆ ಪ್ರವಾಸಿ ಹೆಂಗಸೊಬ್ಬಳು ಬಂದಿದ್ದಳು; ಅವಳು ಹೊಳೆಯಲ್ಲಿ ಸ್ನಾನ ಮಾಡುವುದು ಮಠದ ಉಗ್ರಾಣದ ಕಿಟಕಿಯಲ್ಲಿ ಕಾಣುತ್ತಿತ್ತು. ನೀರಲ್ಲಿ ಮುಳುಗಿದನಂತರ ಆಕೆಯ ತೆಳುವಾದ ಸೀರೆ ಮೈಗಂಟಿಕೊಂಡು, ಆಕೆಯ ದೇಹಾಕೃತಿಯನ್ನು ಉನ್ಮತ್ತಗೊಳಿಸಿದವು. ಮಠದ ಭಕ್ತಾದಿಗಳಿಗೆ ಸಾಕ್ಷಾತ್ ಶಾರದೆಯೇ ಬಂದು ಮೀಯುತ್ತಿರುವಂತೆ ಕಂಡರೆ, ಮಠದ ಕಾಮುಕರಿಗೆ ಅಂದರೆ ಮಠದ ಮುಖ್ಯಸ್ಥರಿಗೆ ಹಾಗೆ ಕಾಣಲಿಲ್ಲ. ಅವರು ಪುಣ್ಯಕ್ಷೇತ್ರದಲ್ಲಿದ್ದರೂ ನಿರ್ಭಯಾಳನ್ನು ಮುಗಿಸಿದ ಕಾಮುಕರಂತಾದರು, ಆಗ ಅವರು ಮಾಡಿದ ಉಪಾಯವೆಂದರೆ, ಸ್ನಾನ ಮುಗಿಸಿದ ಆ ಹೆಂಗಸು ಬಟ್ಟೆ ಬದಲಿಸಬೇಕಿತ್ತು. ಅದಕ್ಕೆ ಉಗ್ರಾಣದಲ್ಲಿಯೇ ಅವಕಾಶ ಮಾಡಿಕೊಟ್ಟರು ಪಾಪ ಆಕೆ ಪುಣ್ಯಕ್ಷೇತ್ರದಲ್ಲಿ ಕಾಮುಕರಿರುವುದಿಲ್ಲ ಎಂದು ಭಾವಿಸಿ ಒದ್ದೆ ಬಟ್ಟೆಯಲ್ಲೇ ಮುಗ್ಧವಾದಿ ಉಗ್ರಾಣ ಸೇರಿದಳು ಇದೀಗ ತಾನೆ ತನ್ನ ಕುಟುಂಬದಂತೆ ಕಂಡಿದ್ದ ದೈತ್ಯ ಜನಿವಾರಿಗಳು, ಹಠಾತ್ತನೆ ಅವಳ ಮೇಲೆರಗಿ ಬಾಯಿಗೆ ಬಟ್ಟೆ ತುರುಕಿ, ಆಕೆಯನ್ನ ಬಲಾತ್ಕಾರವಾಗಿ ಕೆಡಿಸಿ ಕೈಕಾಲು ಕಟ್ಟಿ ಉಗ್ರಾಣಕ್ಕೆ ಬೀಗ ಹಾಕಿ ಹೊರಟುಹೋದರು. ಆ ಮಠದ ಗುರುಗಳು ತಮ್ಮ ಸುತ್ತ ಏನು ನಡೆಯುತ್ತದೆ ಎಂಬುದನ್ನ ಅರಿಯದ ಮುಗ್ಧರು. ಕಾಮುಕರಿಗೆ ಇದೇ ವರದಾನವಾಯ್ತು.

ಇಡೀ ಮಠದ ಆಡಳಿತವನ್ನ ಕೈಗೆತ್ತಿಕೊಂಡು ಅದನ್ನ ಉನ್ನತ ಸ್ಥಿತಿಗೆ ತಂದಿದ್ದ ಘನಪಾಟಿ ಎಂಬಾತ, ತನ್ನ ಕೃತ್ಯದ ನಂತರ ಜನಿವಾರ ಬದಲಾಯಿಸಿ ಸ್ನಾನಮಾಡಿ ಕ್ರೌರ್ಯದ ನಂತರ ಮೂಡುವ ಸಂತೃಪ್ತತೆಯನ್ನು ಅನುಭವಿಸುತ್ತ, ತಾನು ಮಾಡಿದ ಸಾಹಸಕ್ಕೆ ಅಮಲ್ದಾರ ಶಂಕರಶಾಸ್ತ್ರಿಗಳನ್ನ ಕರೆಸಿಕೊಂಡು ವಿಷಯ ತಿಳಿಸಿದರು. ಹಸಿದ ದಾಸಾಚಾರಿಯಾಗಿದ್ದ ಶಂಕರಶಾಸ್ತ್ರಿ ಉಗ್ರಾಣಕ್ಕೆ ಗೂಳಿಯಂತೆ ನುಗ್ಗಿ, ಪ್ರಜ್ಞೆ ಕಳೆದುಕೊಂಡಿದ್ದ ಆ ಮಹಿಳೆಯನ್ನ ಮನಸೋಇಚ್ಛೆ ಭೊಗಿಸಿ ಬಂದನು, ಮಠದ ಗಣ್ಯಾತಿಗಣ್ಯರೇ ಮೀಸಲು ಉಂಡಮೇಲೆ ಇನ್ನುಳಿದ ನಗಣ್ಯರು ಸುಮ್ಮನಿದ್ದಾರೆಯೇ, ಅವರೂ ಮೃಗಗಳಾದರು. ಆಣತಿ ದೂರದಲ್ಲೇ ಸುಂದರವಾದ ಶಾರದಾದೇವಿಯ ಪೂಜಾಮೂರ್ತಿಯಿದ್ದು ಆಕೆಯ ಪ್ರತಿರೂಪದಂತಿದ್ದ ಆ ಮಹಿಳೆಗೆ ಆದ ಆಘಾತವೆಂದರೆ, ಆಕೆ ಯಾವಾಗ ಪ್ರಜ್ಞೆ ಕಳೆದುಕೊಂಡಳೊ ಏನೊ ಅದು ಅತ್ಯಾಚಾರಿಗಳಿಗೆ ವರದಾನವಾಯ್ತು.

ಉಗಾಣದ ಪಾಸಾಲೆಯನ್ನು ಕಾಯುತ್ತಿದ್ದ ಶೂದ್ರ ಭೈರ ಗಮನಿಸಿದಂತೆ, ಉಗ್ರಾಣದೊಳಕ್ಕೆ ಹೋಗುತ್ತಿದ್ದ ವಿಪ್ರೋತ್ತಮರು ಬರುವಾಗ ಕೆಲಸ ಮುಗಿಸಿದ ನಾಯಿಯಂತೆ ಓಡಿ ಬರುತ್ತಿದ್ದುದು ಕುತೂಹಲ ಮೂಡಿಸಿತು ಆದ್ದರಿಂದ ಅಲ್ಲಿ ಇಣುಕಿದವನಿಗೆ ಸತ್ಯ ಸಂಗತಿ ತಿಳಿಯಿತು. ಆದರೆ ಆಕೆ ಯಾರು ಎಂಬುದು ತಿಳಿಯಲಿಲ್ಲ. ಸಂಜೆಯಾಗುತ್ತಿದ್ದಂತೆ, ಹೊಳೆಗೆ ಸ್ನಾನಕ್ಕೆ ಬಂದಿದ್ದ ಮಹಿಳೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ಸುದ್ದಿ ಹಬ್ಬಿತು. ಆಗ ಭೈರನಿಗೆ ಅತ್ಯಾಚಾರಕ್ಕೆ ಒಳಗಾದ ಮಹಿಳೆ ಅವರೇ ಎಂಬುದು ತಿಳಿಯಿತು. ಭೈರನಿಗೆ ಗೊತ್ತಾಯಿತು ಎಂದು ಘನಪಾಟಿಗಳಿಗೆ ಗೊತ್ತಾದ ಕೂಡಲೆ ಅವರು ಅವನನ್ನು ಕರೆಸಿಕೊಂಡು ಪ್ರೀತಿಯಿಂದ ಮಾತನಾಡಿಸಿದರು ಮತ್ತು ಒಳಕೋಣೆಗೆ ಕರೆದುಕೊಂಡು ಹೋದರು. ಭೈರನಿಗಿದು ಆಶ್ಚರ್ಯಕರ ಘಟನೆ ಕೂಡಲೇ ಘನಪಾಟಿ ತಗೊ ಭೈರಪ್ಪ ಎಂದು ಒಂದು ಪವನಿನ ಉಂಗುರ ಕೊಟ್ಟು, ಯಾರೋ ಗಂಡಬಿಟ್ಟ ಹೆಂಗಸು ಬಂದು ಹೊಳೆಯಲ್ಲಿ ಸ್ನಾನಮಾಡಿ ಕಾಣೆಯಾಗಿದ್ದಾಳೆ. ಆದರೆ ನಮ್ಮ ಉಗ್ರಾಣದಲ್ಲಿದ್ದಾಳಂತೆ ಕಿಲ್ಲೆದಾರ ನರಸಿಂಹ ಅವಧಾನಿ ನಿನ್ನ ಜೊತೆ ಇರ್ತಾರೆ ರಾತ್ರಿ ಹತ್ತು ಗಂಟೆಗೆ ನೀನು ಅವರೂ ಸೇರಿ ಮಠದ ಮರ್ಯಾದೆ ಉಳಿಸಬೇಕು ಎಂದು ಆಜ್ಞಾಪಿಸಿ ಭೈರನನ್ನು ಕಳಿಸಿಕೊಟ್ಟರು.

ಹತ್ತು ಗಂಟೆಗೆ ಸರಿಯಾಗಿ ಬಂದ ಕಿಲ್ಲೆದಾರ ನರಸಿಂಹ ಅವಧಾನಿ ಉಗ್ರಾಣದ ಬಾಗಿಲು ತೆಗೆದು ಅಲ್ಲಿ ಬಿದ್ದಿದ್ದ ಹೆಂಗಸನ್ನ ಎತ್ತಿಕೊಳ್ಳಲು ಭೈರನಿಗೆ ಹೇಳಿದ. ಭೈರ ಹಾಗೇ ಮಾಡಿದ ಅಲ್ಲಿಂದ ಅರ್ಚಕ ಕೃಷ್ಣಶರ್ಮರ ಬಾವಿ ಹತ್ತಿರ ತಂದು ಕಟ್ಟೆ ಮೇಲೆ ಕೂರಿಸಿ ಹಗ್ಗ ಬಿಗಿದು ಶವವನ್ನು ಬಾವಿಗೆ ಇಳೆಬಿಟ್ಟು ಆಕೆಯೇ ಆತ್ಮಹತ್ಯೆ ಮಾಡಿಕೊಂಡಂತೆ ಮಾಡಿದರು. ಆದರೆ ಭೈರನಿಗೆ ಆಕೆಯಲ್ಲಿನ್ನು ಜೀವವಿದ್ದ ಬಗ್ಗೆ ಅನುಮಾನ ಏಳೆಯಿತು! ಮರುದಿನ ಶವ ತೆಗೆದು ಪ್ರಕರಣವನ್ನ ಮುಚ್ಚಿಹಾಕಿದರು. ಏಕೆಂದರೆ ಇದು ಮಠದ ಮರ‍್ಯಾದೆ ಪ್ರಶ್ನೆಯಾಗಿತ್ತು. ಮುಂದೆ ಆಕೆಯ ಗಂಡನಿಗೆ ಮತಿಭ್ರಮಣೆಯಾಯ್ತು.

ಇದು ಕಲ್ಕುಳಿ ವಿಠ್ಠಲ ಹೆಗಡೆ ತಮ್ಮ ಮಂಗನ ಬ್ಯಾಟೆಯಲ್ಲಿ ದಾಖಲಿಸಿರುವ ಘಟನೆ. ಹಲವಾರು ಕಾರಣಗಳಿಗಾಗಿ ಮಂಗನಬ್ಯಾಟೆ ಮಲೆನಾಡನ್ನ ಕುರಿತು ಬರೆದ ಕುವೆಂಪು ತೇಜಸ್ವಿಯವರ ಕೃತಿಗಳ ನಂತರ ಮಹತ್ವ ಪಡೆದುಕೊಂಡಿದೆ. ಪ್ರಶಸ್ತಿಯನ್ನು ಪಡೆದಿದೆ. ಶೃಂಗೇರಿಯ ಊರ ಮಧ್ಯದಲ್ಲೇ ಇರುವ ವಿಠ್ಠಲಹೆಗಡೆಯನ್ನು ಏನೂ ಮಾಡಲಾಗದ ಪುರೋಹಿತಶಾಹಿಗಳು, ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದರು. ಅವರಿಗೆ ಸಿಕ್ಕ ಅವಕಾಶವೆಂದರೆ ಆತ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗದಂತೆ ತಡೆಯುವುದಾಗಿತ್ತು. ಆದರೆ ಸಮ್ಮೇಳನ ನಡೆದೇ ತೀರುತ್ತದೆಂದಾಗ, ಇಡೀ ಶೃಂಗೇರಿಯನ್ನ ಬಂದ್ ಮಾಡಿಸಿದವು. ಬಲವಂತವಾಗಿ ಅಂಗಡಿ ಮುಂಗಟ್ಟಿನ ಬಾಗಿಲು ಹಾಕಿಸಿದವು. ಆಟೊ ಓಡಾಡದಂತೆ ನೋಡಿಕೊಂಡವು. ಪೊಲೀಸರು ಸಾಹಿತಿಗಳು ಮತ್ತು ಪುಂಡರ ನಡುವೆ ನಿಂತು, ಒಂದು ದಿನ ಮಾತ್ರ ಸಮ್ಮೇಳನ ನಡೆಯುವಂತೆ ನೋಡಿಕೊಂಡರು. ಈಗ ಗುಲ್ಬರ್ಗದಲ್ಲಿ ಸಮ್ಮೇಳನ ನಡೆಯುತ್ತಿರುವುದರ ಅಧ್ಯಕ್ಷರು ತುಂಬಾ ಬೇಜವಾಬ್ದಾರಿಯಿಂದ ನನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ಮಾತನಾಡಿದ್ದಾರೆ. ಮನುಬಳಿಗಾರ್ ಸರ್ಕಾರಿ ಗುಮಾಸ್ತನಂತೆ ವರ್ತಿಸುತ್ತಿದ್ದಾರೆ. ಆದರೆ ಸತ್ಯಸಂಗತಿ ದಾಖಲಿಸುವ ಸಾಹಿತಿಗಳ ಅಭಿವ್ಯಕ್ತಿಗೆ ಗಂಡಾಂತರ ಬಂದಿರುವುದು ಯಾರ ಅರಿವಿಗೂ ಬಂದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಹುತೇಕ ಕನ್ನಡ ಸಾಹಿತಿಗಳು ಸ್ವಾಭಿಮಾನವನ್ನು ಮರೆತು, ಮನುವಾದಿಗಳ ಬಾಲಬಡುಕರಾಗಿದ್ದಾರೆ.

  2. ಸಾಹಿತಿಗಳು ಸತ್ಯವನ್ನ ಮರೆಮಾಚಿ, ಮನುವಾದಿಗಳ ಹೊಲಸು ತಿನ್ನುತ್ತ ಸುಳ್ಳನ್ನು ಸಮಾಜಕ್ಕೆ ನಾಚಿಕೆಗೇಡಿಗಳಾಗಿ ಪರಿಚಯಿಸಲು ಹೋಗಬಾರದು. ಏಕೆಂದರೆ; ಸಾಹಿತಿ ಸಮಾಜದ ಕಣ್ಣು ಅನ್ನುತ್ತಾತೆ ಅದನ್ನುವುಳಿಸಿಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...