Homeಮುಖಪುಟಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

ಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

- Advertisement -
- Advertisement -

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಸಲಿಂಗಾಸಕ್ತ, ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಹೆಸರನ್ನು ಎರಡನೇ ಬಾರಿಗೆ ಪುನರುಚ್ಚರಿಸಲು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್, RAW “ಆಕ್ಷೇಪಣೆಗಳನ್ನು” ತಿರಸ್ಕರಿಸಿದೆ.

ಸ್ವಿಸ್ ಪ್ರಜೆ ನಿಕೋಲಸ್ ಜರ್ಮೈನ್ ಬ್ಯಾಚ್‌ಮನ್‌ನೊಂದಿಗಿನ ಕಿರ್ಪಾಲ್ ಅವರ ಜೊತೆ ಸಲಿಂಗಾಸಕ್ತಿ ಸಂಬಂಧ ಹೊಂದಿದ್ದಾರೆ. ಹಾಗಾಗಿ ಈ ಬಗ್ಗೆ RAW ಆತಂಕ ವ್ಯಕ್ತಪಡಿಸಿದೆ. ಮತ್ತೊಂದೆಡೆ ಕಾನೂನು ಸಚಿವಾಲಯವು ಕಿರ್ಪಾಲ್ ಅವರ ಸರ್ಕಾರದ ವಿರುದ್ಧದ ಹೋರಾಟ ಮತ್ತು ಸಲಿಂಗಾಸಕ್ತಿಯ ವಿಚಾರವನ್ನು ಇಟ್ಟುಕೊಂಡು ಆಕ್ಷೇಪಿಸಿದೆ. ಅಷ್ಟೇ ಅಲ್ಲದೇ ಸಲಿಂಗಿಯ ಜೊತೆಗಿರುವುದು ವಿವಾಹವಲ್ಲ ಎಂದು ಹೇಳಿದೆ. ಆದರೆ ಭಾರತದಲ್ಲಿ ಸಲಿಂಗಿಗಳು ಮದುವೆಯಾಗುವುದನ್ನು ಕಾನೂನು ಬದ್ಧಗೊಳಿಸಲಾಗಿದೆ.

“ಎರಡು ದೇಶದವರು ಮದುವೆಯಾದರೆ, ಅವರು ಭಾರತದ ವಿರುದ್ಧ ಕೆಲಸ ಮಾಡುತ್ತಾರೆ ಹಾಗಾಗಿ ಅದು ರಾಷ್ಟ್ರೀಯ ಭದ್ರತೆಯ ಧಕ್ಕೆಯಾಗುತ್ತದೆ ಎಂದು RAW ಊಹಿಸಿರುವುದು ಸರಿಯಲ್ಲ” ಎಂದು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಕೆಎಂ ಜೋಸೆಫ್ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವವರು ವಿದೇಶಿ ಪ್ರಜೆಗಳನ್ನು ಸಂಗಾತಿಗಳಾಗಿ ಹೊಂದಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಕೆಆರ್ ನಾರಾಯಣನ್ ಮತ್ತು ಪ್ರಸ್ತುತ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಹೆಸರನ್ನು ಉಲ್ಲೇಖಿಸಿದೆ. ತಾತ್ವಿಕವಾಗಿ, ಕಿರ್ಪಾಲ್ ಅವರ ಸಂಗಾತಿಯು ವಿದೇಶಿ ಪ್ರಜೆ ಎಂಬ ಕಾರಣದ ಉಮೇದುವಾರಿಕೆಗೆ ಯಾವುದೇ ಆಕ್ಷೇಪಣೆ ಇರುವಂತಿಲ್ಲ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರ ಸಲಿಂಗಾಸಕ್ತದ ಕಾರಣ ಹೇಳುತ್ತಿರುವ ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ನವತೇಜ್ ಜೋಹರ್ ಸಾಂವಿಧಾನಿಕ ಪೀಠದ ತೀರ್ಪಿನ ಬಗ್ಗೆ ನೆನಪಿಸಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಘನತೆ ಮತ್ತು ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳಲು ಅರ್ಹನಾಗಿದ್ದಾನೆ ಎಂದು ತೀರ್ಪು ನೀಡಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ನ್ಯಾಯಾಧೀಶರಾಗಲು ಅವರ ಉಮೇದುವಾರಿಕೆಯನ್ನು ತಿರಸ್ಕರಿಸುವುದು” ಸುಪ್ರೀಂ ಕೋರ್ಟ್ ಸ್ಥಾಪಿಸಿದ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಕೇಂದ್ರ ಸರ್ಕಾರಕ್ಕೆ ಬುದ್ದಿ ಹೇಳಿದೆ.

ಇದನ್ನೂ ಓದಿ: ಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

“ಕಿರ್ಪಾಲ್ ಸಾಮರ್ಥ್ಯ, ಸಮಗ್ರತೆ ಮತ್ತು ಬುದ್ಧಿಶಕ್ತಿಯನ್ನು ಹೊಂದಿದ್ದಾರೆ. ಅವರ ನೇಮಕಾತಿಯು ದೆಹಲಿ ಹೈಕೋರ್ಟ್‌ನ ಪೀಠಕ್ಕೆ ಮೌಲ್ಯವನ್ನು ಸೇರಿಸುತ್ತದೆ ಮತ್ತು ವೈವಿಧ್ಯತೆಯನ್ನು ಒದಗಿಸುತ್ತದೆ. ಅವರ ನಡತೆ ಮತ್ತು ನಡವಳಿಕೆಯು ಮೇಲ್ಮಟ್ಟದಲ್ಲಿದೆ.” ಎಂದು ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರು ತಮ್ಮ ಲೈಂಗಿಕ ದೃಷ್ಟಿಕೋನದ ಕಾರಣಕ್ಕಾಗಿ ಸರ್ಕಾರ ತನ್ನ ನೇಮಕಾತಿಯನ್ನು ಸ್ಥಗಿತಗೊಳಿಸಿದೆ ಎಂದು ಆರೋಪಿಸಿ ಮಾಧ್ಯಮಗಳೊಂದಿಗೆ ಇನ್ನುಮುಂದೆ ಮಾತನಾಡದಿದ್ದರೆ ಉತ್ತಮ ಎಂದು ಅದು ಹೇಳಿದೆ. ಆದಾಗ್ಯೂ, ಐದು ವರ್ಷಗಳ ಕಾಲ ತನ್ನ ಹೆಸರನ್ನು ಸ್ಥಗಿತಗೊಳಿಸುವುದರಿಂದ ಕಿರ್ಪಾಲ್‌ ಅವರಿಗೆ ಸಾಕಷ್ಟು ನೋವು ಮತ್ತು ವೇದನೆ ಅನುಭವಿಸಿದ್ದಾರೆ ಎನ್ನುವುದನ್ನು ಕೊಲಿಜಿಯಂ ಅರ್ಥಮಾಡಿಕೊಂಡಿದೆ.

ಅಕ್ಟೋಬರ್ 13, 2017 ರಂದು ದೆಹಲಿ ಹೈಕೋರ್ಟ್ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ನ್ಯಾಯಾಧೀಶರಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ಗೆ ಕಳುಹಿಸಿದೆ. ಅದರಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ನಾಲ್ಕು ಸಂದರ್ಭಗಳಲ್ಲಿ ಪರಿಗಣಿಸಿದೆ – ಸೆಪ್ಟೆಂಬರ್ 4, 2018, ಜನವರಿ 16, 2019, ಏಪ್ರಿಲ್ 1, 2019 ಮತ್ತು ಮಾರ್ಚ್ 2 ರಂದು , 2021. ಪ್ರತಿ ಬಾರಿಯೂ, ಕಿರ್ಪಾಲ್ ಅವರ ವಿದೇಶಿ ಸಂಗಾತಿಯೊಂದಿಗಿನ ಸಂಬಂಧದಿಂದ ರಾಷ್ಟೀಯ ಭದ್ರತೆಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಊಹೆಯ ವರದಿಯನ್ನು ಕೇಂದ್ರ ಸರ್ಕಾರ ದಾಖಲಿಸಿ ವಿರೋಧಿಸಿತ್ತು ಹಾಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕೂಡ ನಿರ್ಧಾರ ತೆಗೆದುಕೊಳ್ಳುವುದನ್ನು ಮುಂದೂಡಿತು.

ನವೆಂಬರ್ 11, 2021 ರಂದು, ಆಗಿನ ಸಿಜೆಐ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಿತು. ಅದನ್ನು ಸರ್ಕಾರವು ನವೆಂಬರ್ 25, 2022 ರಂದು ಹಿಂದಿರುಗಿಸಿತು. ಜನವರಿ 18, 2023 ರಂದು, ಸುಪ್ರೀಂ ಕೋರ್ಟ್ ಅವರ ಹೆಸರನ್ನು ಪುನರುಚ್ಚರಿಸಿತು.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಏಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಅವರ ಲೈಂಗಿಕ ದೃಷ್ಟಿಕೋನದ ಕಾರಣಕ್ಕೂ ಆಗಿದೆ. ಕಿರ್ಪಾಲ್ ಅವರು ನೇಮಕವಾದಲ್ಲಿ ಭಾರತದ ಮೊದಲ ಬಹಿರಂಗ ಸಲಿಂಗಾಸಕ್ತ ನ್ಯಾಯಾಧೀಶರಾಗುತ್ತಾರೆ. ಆದರೆ ಸರ್ಕಾರ ಮಾತ್ರ ಇವರ ನೇಮಕಕ್ಕೆ ಪ್ರತಿಬಾರಿಯೂ ಆಕ್ಷೇಪಗಳನ್ನು ಸಲ್ಲಿಸುತ್ತಲೇ ಇದೆ. ಆಕ್ಷೇಪಗಳನ್ನು ತಿರಸ್ಕರಿಸುವುದರ ಜೊತೆಗೆ ಸರ್ಕಾರಕ್ಕೆ ಸುಪ್ರೀ ಕೋರ್ಟ್ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...