Homeಮುಖಪುಟಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

ಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

- Advertisement -
- Advertisement -

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಸಲಿಂಗಾಸಕ್ತ, ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಹೆಸರನ್ನು ಎರಡನೇ ಬಾರಿಗೆ ಪುನರುಚ್ಚರಿಸಲು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್, RAW “ಆಕ್ಷೇಪಣೆಗಳನ್ನು” ತಿರಸ್ಕರಿಸಿದೆ.

ಸ್ವಿಸ್ ಪ್ರಜೆ ನಿಕೋಲಸ್ ಜರ್ಮೈನ್ ಬ್ಯಾಚ್‌ಮನ್‌ನೊಂದಿಗಿನ ಕಿರ್ಪಾಲ್ ಅವರ ಜೊತೆ ಸಲಿಂಗಾಸಕ್ತಿ ಸಂಬಂಧ ಹೊಂದಿದ್ದಾರೆ. ಹಾಗಾಗಿ ಈ ಬಗ್ಗೆ RAW ಆತಂಕ ವ್ಯಕ್ತಪಡಿಸಿದೆ. ಮತ್ತೊಂದೆಡೆ ಕಾನೂನು ಸಚಿವಾಲಯವು ಕಿರ್ಪಾಲ್ ಅವರ ಸರ್ಕಾರದ ವಿರುದ್ಧದ ಹೋರಾಟ ಮತ್ತು ಸಲಿಂಗಾಸಕ್ತಿಯ ವಿಚಾರವನ್ನು ಇಟ್ಟುಕೊಂಡು ಆಕ್ಷೇಪಿಸಿದೆ. ಅಷ್ಟೇ ಅಲ್ಲದೇ ಸಲಿಂಗಿಯ ಜೊತೆಗಿರುವುದು ವಿವಾಹವಲ್ಲ ಎಂದು ಹೇಳಿದೆ. ಆದರೆ ಭಾರತದಲ್ಲಿ ಸಲಿಂಗಿಗಳು ಮದುವೆಯಾಗುವುದನ್ನು ಕಾನೂನು ಬದ್ಧಗೊಳಿಸಲಾಗಿದೆ.

“ಎರಡು ದೇಶದವರು ಮದುವೆಯಾದರೆ, ಅವರು ಭಾರತದ ವಿರುದ್ಧ ಕೆಲಸ ಮಾಡುತ್ತಾರೆ ಹಾಗಾಗಿ ಅದು ರಾಷ್ಟ್ರೀಯ ಭದ್ರತೆಯ ಧಕ್ಕೆಯಾಗುತ್ತದೆ ಎಂದು RAW ಊಹಿಸಿರುವುದು ಸರಿಯಲ್ಲ” ಎಂದು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಕೆಎಂ ಜೋಸೆಫ್ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವವರು ವಿದೇಶಿ ಪ್ರಜೆಗಳನ್ನು ಸಂಗಾತಿಗಳಾಗಿ ಹೊಂದಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಕೆಆರ್ ನಾರಾಯಣನ್ ಮತ್ತು ಪ್ರಸ್ತುತ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಹೆಸರನ್ನು ಉಲ್ಲೇಖಿಸಿದೆ. ತಾತ್ವಿಕವಾಗಿ, ಕಿರ್ಪಾಲ್ ಅವರ ಸಂಗಾತಿಯು ವಿದೇಶಿ ಪ್ರಜೆ ಎಂಬ ಕಾರಣದ ಉಮೇದುವಾರಿಕೆಗೆ ಯಾವುದೇ ಆಕ್ಷೇಪಣೆ ಇರುವಂತಿಲ್ಲ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರ ಸಲಿಂಗಾಸಕ್ತದ ಕಾರಣ ಹೇಳುತ್ತಿರುವ ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ನವತೇಜ್ ಜೋಹರ್ ಸಾಂವಿಧಾನಿಕ ಪೀಠದ ತೀರ್ಪಿನ ಬಗ್ಗೆ ನೆನಪಿಸಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಘನತೆ ಮತ್ತು ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳಲು ಅರ್ಹನಾಗಿದ್ದಾನೆ ಎಂದು ತೀರ್ಪು ನೀಡಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ನ್ಯಾಯಾಧೀಶರಾಗಲು ಅವರ ಉಮೇದುವಾರಿಕೆಯನ್ನು ತಿರಸ್ಕರಿಸುವುದು” ಸುಪ್ರೀಂ ಕೋರ್ಟ್ ಸ್ಥಾಪಿಸಿದ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಕೇಂದ್ರ ಸರ್ಕಾರಕ್ಕೆ ಬುದ್ದಿ ಹೇಳಿದೆ.

ಇದನ್ನೂ ಓದಿ: ಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

“ಕಿರ್ಪಾಲ್ ಸಾಮರ್ಥ್ಯ, ಸಮಗ್ರತೆ ಮತ್ತು ಬುದ್ಧಿಶಕ್ತಿಯನ್ನು ಹೊಂದಿದ್ದಾರೆ. ಅವರ ನೇಮಕಾತಿಯು ದೆಹಲಿ ಹೈಕೋರ್ಟ್‌ನ ಪೀಠಕ್ಕೆ ಮೌಲ್ಯವನ್ನು ಸೇರಿಸುತ್ತದೆ ಮತ್ತು ವೈವಿಧ್ಯತೆಯನ್ನು ಒದಗಿಸುತ್ತದೆ. ಅವರ ನಡತೆ ಮತ್ತು ನಡವಳಿಕೆಯು ಮೇಲ್ಮಟ್ಟದಲ್ಲಿದೆ.” ಎಂದು ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರು ತಮ್ಮ ಲೈಂಗಿಕ ದೃಷ್ಟಿಕೋನದ ಕಾರಣಕ್ಕಾಗಿ ಸರ್ಕಾರ ತನ್ನ ನೇಮಕಾತಿಯನ್ನು ಸ್ಥಗಿತಗೊಳಿಸಿದೆ ಎಂದು ಆರೋಪಿಸಿ ಮಾಧ್ಯಮಗಳೊಂದಿಗೆ ಇನ್ನುಮುಂದೆ ಮಾತನಾಡದಿದ್ದರೆ ಉತ್ತಮ ಎಂದು ಅದು ಹೇಳಿದೆ. ಆದಾಗ್ಯೂ, ಐದು ವರ್ಷಗಳ ಕಾಲ ತನ್ನ ಹೆಸರನ್ನು ಸ್ಥಗಿತಗೊಳಿಸುವುದರಿಂದ ಕಿರ್ಪಾಲ್‌ ಅವರಿಗೆ ಸಾಕಷ್ಟು ನೋವು ಮತ್ತು ವೇದನೆ ಅನುಭವಿಸಿದ್ದಾರೆ ಎನ್ನುವುದನ್ನು ಕೊಲಿಜಿಯಂ ಅರ್ಥಮಾಡಿಕೊಂಡಿದೆ.

ಅಕ್ಟೋಬರ್ 13, 2017 ರಂದು ದೆಹಲಿ ಹೈಕೋರ್ಟ್ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ನ್ಯಾಯಾಧೀಶರಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ಗೆ ಕಳುಹಿಸಿದೆ. ಅದರಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ನಾಲ್ಕು ಸಂದರ್ಭಗಳಲ್ಲಿ ಪರಿಗಣಿಸಿದೆ – ಸೆಪ್ಟೆಂಬರ್ 4, 2018, ಜನವರಿ 16, 2019, ಏಪ್ರಿಲ್ 1, 2019 ಮತ್ತು ಮಾರ್ಚ್ 2 ರಂದು , 2021. ಪ್ರತಿ ಬಾರಿಯೂ, ಕಿರ್ಪಾಲ್ ಅವರ ವಿದೇಶಿ ಸಂಗಾತಿಯೊಂದಿಗಿನ ಸಂಬಂಧದಿಂದ ರಾಷ್ಟೀಯ ಭದ್ರತೆಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಊಹೆಯ ವರದಿಯನ್ನು ಕೇಂದ್ರ ಸರ್ಕಾರ ದಾಖಲಿಸಿ ವಿರೋಧಿಸಿತ್ತು ಹಾಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕೂಡ ನಿರ್ಧಾರ ತೆಗೆದುಕೊಳ್ಳುವುದನ್ನು ಮುಂದೂಡಿತು.

ನವೆಂಬರ್ 11, 2021 ರಂದು, ಆಗಿನ ಸಿಜೆಐ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಿತು. ಅದನ್ನು ಸರ್ಕಾರವು ನವೆಂಬರ್ 25, 2022 ರಂದು ಹಿಂದಿರುಗಿಸಿತು. ಜನವರಿ 18, 2023 ರಂದು, ಸುಪ್ರೀಂ ಕೋರ್ಟ್ ಅವರ ಹೆಸರನ್ನು ಪುನರುಚ್ಚರಿಸಿತು.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಏಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಅವರ ಲೈಂಗಿಕ ದೃಷ್ಟಿಕೋನದ ಕಾರಣಕ್ಕೂ ಆಗಿದೆ. ಕಿರ್ಪಾಲ್ ಅವರು ನೇಮಕವಾದಲ್ಲಿ ಭಾರತದ ಮೊದಲ ಬಹಿರಂಗ ಸಲಿಂಗಾಸಕ್ತ ನ್ಯಾಯಾಧೀಶರಾಗುತ್ತಾರೆ. ಆದರೆ ಸರ್ಕಾರ ಮಾತ್ರ ಇವರ ನೇಮಕಕ್ಕೆ ಪ್ರತಿಬಾರಿಯೂ ಆಕ್ಷೇಪಗಳನ್ನು ಸಲ್ಲಿಸುತ್ತಲೇ ಇದೆ. ಆಕ್ಷೇಪಗಳನ್ನು ತಿರಸ್ಕರಿಸುವುದರ ಜೊತೆಗೆ ಸರ್ಕಾರಕ್ಕೆ ಸುಪ್ರೀ ಕೋರ್ಟ್ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...