Homeಮುಖಪುಟಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

ಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

- Advertisement -
- Advertisement -

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಸಲಿಂಗಾಸಕ್ತ, ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಹೆಸರನ್ನು ಎರಡನೇ ಬಾರಿಗೆ ಪುನರುಚ್ಚರಿಸಲು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್, RAW “ಆಕ್ಷೇಪಣೆಗಳನ್ನು” ತಿರಸ್ಕರಿಸಿದೆ.

ಸ್ವಿಸ್ ಪ್ರಜೆ ನಿಕೋಲಸ್ ಜರ್ಮೈನ್ ಬ್ಯಾಚ್‌ಮನ್‌ನೊಂದಿಗಿನ ಕಿರ್ಪಾಲ್ ಅವರ ಜೊತೆ ಸಲಿಂಗಾಸಕ್ತಿ ಸಂಬಂಧ ಹೊಂದಿದ್ದಾರೆ. ಹಾಗಾಗಿ ಈ ಬಗ್ಗೆ RAW ಆತಂಕ ವ್ಯಕ್ತಪಡಿಸಿದೆ. ಮತ್ತೊಂದೆಡೆ ಕಾನೂನು ಸಚಿವಾಲಯವು ಕಿರ್ಪಾಲ್ ಅವರ ಸರ್ಕಾರದ ವಿರುದ್ಧದ ಹೋರಾಟ ಮತ್ತು ಸಲಿಂಗಾಸಕ್ತಿಯ ವಿಚಾರವನ್ನು ಇಟ್ಟುಕೊಂಡು ಆಕ್ಷೇಪಿಸಿದೆ. ಅಷ್ಟೇ ಅಲ್ಲದೇ ಸಲಿಂಗಿಯ ಜೊತೆಗಿರುವುದು ವಿವಾಹವಲ್ಲ ಎಂದು ಹೇಳಿದೆ. ಆದರೆ ಭಾರತದಲ್ಲಿ ಸಲಿಂಗಿಗಳು ಮದುವೆಯಾಗುವುದನ್ನು ಕಾನೂನು ಬದ್ಧಗೊಳಿಸಲಾಗಿದೆ.

“ಎರಡು ದೇಶದವರು ಮದುವೆಯಾದರೆ, ಅವರು ಭಾರತದ ವಿರುದ್ಧ ಕೆಲಸ ಮಾಡುತ್ತಾರೆ ಹಾಗಾಗಿ ಅದು ರಾಷ್ಟ್ರೀಯ ಭದ್ರತೆಯ ಧಕ್ಕೆಯಾಗುತ್ತದೆ ಎಂದು RAW ಊಹಿಸಿರುವುದು ಸರಿಯಲ್ಲ” ಎಂದು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಕೆಎಂ ಜೋಸೆಫ್ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವವರು ವಿದೇಶಿ ಪ್ರಜೆಗಳನ್ನು ಸಂಗಾತಿಗಳಾಗಿ ಹೊಂದಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಕೆಆರ್ ನಾರಾಯಣನ್ ಮತ್ತು ಪ್ರಸ್ತುತ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಹೆಸರನ್ನು ಉಲ್ಲೇಖಿಸಿದೆ. ತಾತ್ವಿಕವಾಗಿ, ಕಿರ್ಪಾಲ್ ಅವರ ಸಂಗಾತಿಯು ವಿದೇಶಿ ಪ್ರಜೆ ಎಂಬ ಕಾರಣದ ಉಮೇದುವಾರಿಕೆಗೆ ಯಾವುದೇ ಆಕ್ಷೇಪಣೆ ಇರುವಂತಿಲ್ಲ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರ ಸಲಿಂಗಾಸಕ್ತದ ಕಾರಣ ಹೇಳುತ್ತಿರುವ ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ನವತೇಜ್ ಜೋಹರ್ ಸಾಂವಿಧಾನಿಕ ಪೀಠದ ತೀರ್ಪಿನ ಬಗ್ಗೆ ನೆನಪಿಸಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಘನತೆ ಮತ್ತು ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳಲು ಅರ್ಹನಾಗಿದ್ದಾನೆ ಎಂದು ತೀರ್ಪು ನೀಡಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ನ್ಯಾಯಾಧೀಶರಾಗಲು ಅವರ ಉಮೇದುವಾರಿಕೆಯನ್ನು ತಿರಸ್ಕರಿಸುವುದು” ಸುಪ್ರೀಂ ಕೋರ್ಟ್ ಸ್ಥಾಪಿಸಿದ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಕೇಂದ್ರ ಸರ್ಕಾರಕ್ಕೆ ಬುದ್ದಿ ಹೇಳಿದೆ.

ಇದನ್ನೂ ಓದಿ: ಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

“ಕಿರ್ಪಾಲ್ ಸಾಮರ್ಥ್ಯ, ಸಮಗ್ರತೆ ಮತ್ತು ಬುದ್ಧಿಶಕ್ತಿಯನ್ನು ಹೊಂದಿದ್ದಾರೆ. ಅವರ ನೇಮಕಾತಿಯು ದೆಹಲಿ ಹೈಕೋರ್ಟ್‌ನ ಪೀಠಕ್ಕೆ ಮೌಲ್ಯವನ್ನು ಸೇರಿಸುತ್ತದೆ ಮತ್ತು ವೈವಿಧ್ಯತೆಯನ್ನು ಒದಗಿಸುತ್ತದೆ. ಅವರ ನಡತೆ ಮತ್ತು ನಡವಳಿಕೆಯು ಮೇಲ್ಮಟ್ಟದಲ್ಲಿದೆ.” ಎಂದು ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರು ತಮ್ಮ ಲೈಂಗಿಕ ದೃಷ್ಟಿಕೋನದ ಕಾರಣಕ್ಕಾಗಿ ಸರ್ಕಾರ ತನ್ನ ನೇಮಕಾತಿಯನ್ನು ಸ್ಥಗಿತಗೊಳಿಸಿದೆ ಎಂದು ಆರೋಪಿಸಿ ಮಾಧ್ಯಮಗಳೊಂದಿಗೆ ಇನ್ನುಮುಂದೆ ಮಾತನಾಡದಿದ್ದರೆ ಉತ್ತಮ ಎಂದು ಅದು ಹೇಳಿದೆ. ಆದಾಗ್ಯೂ, ಐದು ವರ್ಷಗಳ ಕಾಲ ತನ್ನ ಹೆಸರನ್ನು ಸ್ಥಗಿತಗೊಳಿಸುವುದರಿಂದ ಕಿರ್ಪಾಲ್‌ ಅವರಿಗೆ ಸಾಕಷ್ಟು ನೋವು ಮತ್ತು ವೇದನೆ ಅನುಭವಿಸಿದ್ದಾರೆ ಎನ್ನುವುದನ್ನು ಕೊಲಿಜಿಯಂ ಅರ್ಥಮಾಡಿಕೊಂಡಿದೆ.

ಅಕ್ಟೋಬರ್ 13, 2017 ರಂದು ದೆಹಲಿ ಹೈಕೋರ್ಟ್ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ನ್ಯಾಯಾಧೀಶರಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ಗೆ ಕಳುಹಿಸಿದೆ. ಅದರಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ನಾಲ್ಕು ಸಂದರ್ಭಗಳಲ್ಲಿ ಪರಿಗಣಿಸಿದೆ – ಸೆಪ್ಟೆಂಬರ್ 4, 2018, ಜನವರಿ 16, 2019, ಏಪ್ರಿಲ್ 1, 2019 ಮತ್ತು ಮಾರ್ಚ್ 2 ರಂದು , 2021. ಪ್ರತಿ ಬಾರಿಯೂ, ಕಿರ್ಪಾಲ್ ಅವರ ವಿದೇಶಿ ಸಂಗಾತಿಯೊಂದಿಗಿನ ಸಂಬಂಧದಿಂದ ರಾಷ್ಟೀಯ ಭದ್ರತೆಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಊಹೆಯ ವರದಿಯನ್ನು ಕೇಂದ್ರ ಸರ್ಕಾರ ದಾಖಲಿಸಿ ವಿರೋಧಿಸಿತ್ತು ಹಾಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕೂಡ ನಿರ್ಧಾರ ತೆಗೆದುಕೊಳ್ಳುವುದನ್ನು ಮುಂದೂಡಿತು.

ನವೆಂಬರ್ 11, 2021 ರಂದು, ಆಗಿನ ಸಿಜೆಐ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಿತು. ಅದನ್ನು ಸರ್ಕಾರವು ನವೆಂಬರ್ 25, 2022 ರಂದು ಹಿಂದಿರುಗಿಸಿತು. ಜನವರಿ 18, 2023 ರಂದು, ಸುಪ್ರೀಂ ಕೋರ್ಟ್ ಅವರ ಹೆಸರನ್ನು ಪುನರುಚ್ಚರಿಸಿತು.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಏಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಅವರ ಲೈಂಗಿಕ ದೃಷ್ಟಿಕೋನದ ಕಾರಣಕ್ಕೂ ಆಗಿದೆ. ಕಿರ್ಪಾಲ್ ಅವರು ನೇಮಕವಾದಲ್ಲಿ ಭಾರತದ ಮೊದಲ ಬಹಿರಂಗ ಸಲಿಂಗಾಸಕ್ತ ನ್ಯಾಯಾಧೀಶರಾಗುತ್ತಾರೆ. ಆದರೆ ಸರ್ಕಾರ ಮಾತ್ರ ಇವರ ನೇಮಕಕ್ಕೆ ಪ್ರತಿಬಾರಿಯೂ ಆಕ್ಷೇಪಗಳನ್ನು ಸಲ್ಲಿಸುತ್ತಲೇ ಇದೆ. ಆಕ್ಷೇಪಗಳನ್ನು ತಿರಸ್ಕರಿಸುವುದರ ಜೊತೆಗೆ ಸರ್ಕಾರಕ್ಕೆ ಸುಪ್ರೀ ಕೋರ್ಟ್ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....