Homeಮುಖಪುಟಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

ಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

- Advertisement -
- Advertisement -

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಸಲಿಂಗಾಸಕ್ತ, ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಹೆಸರನ್ನು ಎರಡನೇ ಬಾರಿಗೆ ಪುನರುಚ್ಚರಿಸಲು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್, RAW “ಆಕ್ಷೇಪಣೆಗಳನ್ನು” ತಿರಸ್ಕರಿಸಿದೆ.

ಸ್ವಿಸ್ ಪ್ರಜೆ ನಿಕೋಲಸ್ ಜರ್ಮೈನ್ ಬ್ಯಾಚ್‌ಮನ್‌ನೊಂದಿಗಿನ ಕಿರ್ಪಾಲ್ ಅವರ ಜೊತೆ ಸಲಿಂಗಾಸಕ್ತಿ ಸಂಬಂಧ ಹೊಂದಿದ್ದಾರೆ. ಹಾಗಾಗಿ ಈ ಬಗ್ಗೆ RAW ಆತಂಕ ವ್ಯಕ್ತಪಡಿಸಿದೆ. ಮತ್ತೊಂದೆಡೆ ಕಾನೂನು ಸಚಿವಾಲಯವು ಕಿರ್ಪಾಲ್ ಅವರ ಸರ್ಕಾರದ ವಿರುದ್ಧದ ಹೋರಾಟ ಮತ್ತು ಸಲಿಂಗಾಸಕ್ತಿಯ ವಿಚಾರವನ್ನು ಇಟ್ಟುಕೊಂಡು ಆಕ್ಷೇಪಿಸಿದೆ. ಅಷ್ಟೇ ಅಲ್ಲದೇ ಸಲಿಂಗಿಯ ಜೊತೆಗಿರುವುದು ವಿವಾಹವಲ್ಲ ಎಂದು ಹೇಳಿದೆ. ಆದರೆ ಭಾರತದಲ್ಲಿ ಸಲಿಂಗಿಗಳು ಮದುವೆಯಾಗುವುದನ್ನು ಕಾನೂನು ಬದ್ಧಗೊಳಿಸಲಾಗಿದೆ.

“ಎರಡು ದೇಶದವರು ಮದುವೆಯಾದರೆ, ಅವರು ಭಾರತದ ವಿರುದ್ಧ ಕೆಲಸ ಮಾಡುತ್ತಾರೆ ಹಾಗಾಗಿ ಅದು ರಾಷ್ಟ್ರೀಯ ಭದ್ರತೆಯ ಧಕ್ಕೆಯಾಗುತ್ತದೆ ಎಂದು RAW ಊಹಿಸಿರುವುದು ಸರಿಯಲ್ಲ” ಎಂದು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಕೆಎಂ ಜೋಸೆಫ್ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವವರು ವಿದೇಶಿ ಪ್ರಜೆಗಳನ್ನು ಸಂಗಾತಿಗಳಾಗಿ ಹೊಂದಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಕೆಆರ್ ನಾರಾಯಣನ್ ಮತ್ತು ಪ್ರಸ್ತುತ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಹೆಸರನ್ನು ಉಲ್ಲೇಖಿಸಿದೆ. ತಾತ್ವಿಕವಾಗಿ, ಕಿರ್ಪಾಲ್ ಅವರ ಸಂಗಾತಿಯು ವಿದೇಶಿ ಪ್ರಜೆ ಎಂಬ ಕಾರಣದ ಉಮೇದುವಾರಿಕೆಗೆ ಯಾವುದೇ ಆಕ್ಷೇಪಣೆ ಇರುವಂತಿಲ್ಲ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರ ಸಲಿಂಗಾಸಕ್ತದ ಕಾರಣ ಹೇಳುತ್ತಿರುವ ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ನವತೇಜ್ ಜೋಹರ್ ಸಾಂವಿಧಾನಿಕ ಪೀಠದ ತೀರ್ಪಿನ ಬಗ್ಗೆ ನೆನಪಿಸಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಘನತೆ ಮತ್ತು ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳಲು ಅರ್ಹನಾಗಿದ್ದಾನೆ ಎಂದು ತೀರ್ಪು ನೀಡಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ನ್ಯಾಯಾಧೀಶರಾಗಲು ಅವರ ಉಮೇದುವಾರಿಕೆಯನ್ನು ತಿರಸ್ಕರಿಸುವುದು” ಸುಪ್ರೀಂ ಕೋರ್ಟ್ ಸ್ಥಾಪಿಸಿದ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಕೇಂದ್ರ ಸರ್ಕಾರಕ್ಕೆ ಬುದ್ದಿ ಹೇಳಿದೆ.

ಇದನ್ನೂ ಓದಿ: ಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

“ಕಿರ್ಪಾಲ್ ಸಾಮರ್ಥ್ಯ, ಸಮಗ್ರತೆ ಮತ್ತು ಬುದ್ಧಿಶಕ್ತಿಯನ್ನು ಹೊಂದಿದ್ದಾರೆ. ಅವರ ನೇಮಕಾತಿಯು ದೆಹಲಿ ಹೈಕೋರ್ಟ್‌ನ ಪೀಠಕ್ಕೆ ಮೌಲ್ಯವನ್ನು ಸೇರಿಸುತ್ತದೆ ಮತ್ತು ವೈವಿಧ್ಯತೆಯನ್ನು ಒದಗಿಸುತ್ತದೆ. ಅವರ ನಡತೆ ಮತ್ತು ನಡವಳಿಕೆಯು ಮೇಲ್ಮಟ್ಟದಲ್ಲಿದೆ.” ಎಂದು ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರು ತಮ್ಮ ಲೈಂಗಿಕ ದೃಷ್ಟಿಕೋನದ ಕಾರಣಕ್ಕಾಗಿ ಸರ್ಕಾರ ತನ್ನ ನೇಮಕಾತಿಯನ್ನು ಸ್ಥಗಿತಗೊಳಿಸಿದೆ ಎಂದು ಆರೋಪಿಸಿ ಮಾಧ್ಯಮಗಳೊಂದಿಗೆ ಇನ್ನುಮುಂದೆ ಮಾತನಾಡದಿದ್ದರೆ ಉತ್ತಮ ಎಂದು ಅದು ಹೇಳಿದೆ. ಆದಾಗ್ಯೂ, ಐದು ವರ್ಷಗಳ ಕಾಲ ತನ್ನ ಹೆಸರನ್ನು ಸ್ಥಗಿತಗೊಳಿಸುವುದರಿಂದ ಕಿರ್ಪಾಲ್‌ ಅವರಿಗೆ ಸಾಕಷ್ಟು ನೋವು ಮತ್ತು ವೇದನೆ ಅನುಭವಿಸಿದ್ದಾರೆ ಎನ್ನುವುದನ್ನು ಕೊಲಿಜಿಯಂ ಅರ್ಥಮಾಡಿಕೊಂಡಿದೆ.

ಅಕ್ಟೋಬರ್ 13, 2017 ರಂದು ದೆಹಲಿ ಹೈಕೋರ್ಟ್ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ನ್ಯಾಯಾಧೀಶರಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ಗೆ ಕಳುಹಿಸಿದೆ. ಅದರಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ನಾಲ್ಕು ಸಂದರ್ಭಗಳಲ್ಲಿ ಪರಿಗಣಿಸಿದೆ – ಸೆಪ್ಟೆಂಬರ್ 4, 2018, ಜನವರಿ 16, 2019, ಏಪ್ರಿಲ್ 1, 2019 ಮತ್ತು ಮಾರ್ಚ್ 2 ರಂದು , 2021. ಪ್ರತಿ ಬಾರಿಯೂ, ಕಿರ್ಪಾಲ್ ಅವರ ವಿದೇಶಿ ಸಂಗಾತಿಯೊಂದಿಗಿನ ಸಂಬಂಧದಿಂದ ರಾಷ್ಟೀಯ ಭದ್ರತೆಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಊಹೆಯ ವರದಿಯನ್ನು ಕೇಂದ್ರ ಸರ್ಕಾರ ದಾಖಲಿಸಿ ವಿರೋಧಿಸಿತ್ತು ಹಾಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕೂಡ ನಿರ್ಧಾರ ತೆಗೆದುಕೊಳ್ಳುವುದನ್ನು ಮುಂದೂಡಿತು.

ನವೆಂಬರ್ 11, 2021 ರಂದು, ಆಗಿನ ಸಿಜೆಐ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಿತು. ಅದನ್ನು ಸರ್ಕಾರವು ನವೆಂಬರ್ 25, 2022 ರಂದು ಹಿಂದಿರುಗಿಸಿತು. ಜನವರಿ 18, 2023 ರಂದು, ಸುಪ್ರೀಂ ಕೋರ್ಟ್ ಅವರ ಹೆಸರನ್ನು ಪುನರುಚ್ಚರಿಸಿತು.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಏಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಅವರ ಲೈಂಗಿಕ ದೃಷ್ಟಿಕೋನದ ಕಾರಣಕ್ಕೂ ಆಗಿದೆ. ಕಿರ್ಪಾಲ್ ಅವರು ನೇಮಕವಾದಲ್ಲಿ ಭಾರತದ ಮೊದಲ ಬಹಿರಂಗ ಸಲಿಂಗಾಸಕ್ತ ನ್ಯಾಯಾಧೀಶರಾಗುತ್ತಾರೆ. ಆದರೆ ಸರ್ಕಾರ ಮಾತ್ರ ಇವರ ನೇಮಕಕ್ಕೆ ಪ್ರತಿಬಾರಿಯೂ ಆಕ್ಷೇಪಗಳನ್ನು ಸಲ್ಲಿಸುತ್ತಲೇ ಇದೆ. ಆಕ್ಷೇಪಗಳನ್ನು ತಿರಸ್ಕರಿಸುವುದರ ಜೊತೆಗೆ ಸರ್ಕಾರಕ್ಕೆ ಸುಪ್ರೀ ಕೋರ್ಟ್ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...