Homeಮುಖಪುಟಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

ಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

- Advertisement -
- Advertisement -

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಸಲಿಂಗಾಸಕ್ತ, ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಹೆಸರನ್ನು ಎರಡನೇ ಬಾರಿಗೆ ಪುನರುಚ್ಚರಿಸಲು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್, RAW “ಆಕ್ಷೇಪಣೆಗಳನ್ನು” ತಿರಸ್ಕರಿಸಿದೆ.

ಸ್ವಿಸ್ ಪ್ರಜೆ ನಿಕೋಲಸ್ ಜರ್ಮೈನ್ ಬ್ಯಾಚ್‌ಮನ್‌ನೊಂದಿಗಿನ ಕಿರ್ಪಾಲ್ ಅವರ ಜೊತೆ ಸಲಿಂಗಾಸಕ್ತಿ ಸಂಬಂಧ ಹೊಂದಿದ್ದಾರೆ. ಹಾಗಾಗಿ ಈ ಬಗ್ಗೆ RAW ಆತಂಕ ವ್ಯಕ್ತಪಡಿಸಿದೆ. ಮತ್ತೊಂದೆಡೆ ಕಾನೂನು ಸಚಿವಾಲಯವು ಕಿರ್ಪಾಲ್ ಅವರ ಸರ್ಕಾರದ ವಿರುದ್ಧದ ಹೋರಾಟ ಮತ್ತು ಸಲಿಂಗಾಸಕ್ತಿಯ ವಿಚಾರವನ್ನು ಇಟ್ಟುಕೊಂಡು ಆಕ್ಷೇಪಿಸಿದೆ. ಅಷ್ಟೇ ಅಲ್ಲದೇ ಸಲಿಂಗಿಯ ಜೊತೆಗಿರುವುದು ವಿವಾಹವಲ್ಲ ಎಂದು ಹೇಳಿದೆ. ಆದರೆ ಭಾರತದಲ್ಲಿ ಸಲಿಂಗಿಗಳು ಮದುವೆಯಾಗುವುದನ್ನು ಕಾನೂನು ಬದ್ಧಗೊಳಿಸಲಾಗಿದೆ.

“ಎರಡು ದೇಶದವರು ಮದುವೆಯಾದರೆ, ಅವರು ಭಾರತದ ವಿರುದ್ಧ ಕೆಲಸ ಮಾಡುತ್ತಾರೆ ಹಾಗಾಗಿ ಅದು ರಾಷ್ಟ್ರೀಯ ಭದ್ರತೆಯ ಧಕ್ಕೆಯಾಗುತ್ತದೆ ಎಂದು RAW ಊಹಿಸಿರುವುದು ಸರಿಯಲ್ಲ” ಎಂದು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಕೆಎಂ ಜೋಸೆಫ್ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವವರು ವಿದೇಶಿ ಪ್ರಜೆಗಳನ್ನು ಸಂಗಾತಿಗಳಾಗಿ ಹೊಂದಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಕೆಆರ್ ನಾರಾಯಣನ್ ಮತ್ತು ಪ್ರಸ್ತುತ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಹೆಸರನ್ನು ಉಲ್ಲೇಖಿಸಿದೆ. ತಾತ್ವಿಕವಾಗಿ, ಕಿರ್ಪಾಲ್ ಅವರ ಸಂಗಾತಿಯು ವಿದೇಶಿ ಪ್ರಜೆ ಎಂಬ ಕಾರಣದ ಉಮೇದುವಾರಿಕೆಗೆ ಯಾವುದೇ ಆಕ್ಷೇಪಣೆ ಇರುವಂತಿಲ್ಲ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರ ಸಲಿಂಗಾಸಕ್ತದ ಕಾರಣ ಹೇಳುತ್ತಿರುವ ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ನವತೇಜ್ ಜೋಹರ್ ಸಾಂವಿಧಾನಿಕ ಪೀಠದ ತೀರ್ಪಿನ ಬಗ್ಗೆ ನೆನಪಿಸಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಘನತೆ ಮತ್ತು ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳಲು ಅರ್ಹನಾಗಿದ್ದಾನೆ ಎಂದು ತೀರ್ಪು ನೀಡಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ನ್ಯಾಯಾಧೀಶರಾಗಲು ಅವರ ಉಮೇದುವಾರಿಕೆಯನ್ನು ತಿರಸ್ಕರಿಸುವುದು” ಸುಪ್ರೀಂ ಕೋರ್ಟ್ ಸ್ಥಾಪಿಸಿದ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಕೇಂದ್ರ ಸರ್ಕಾರಕ್ಕೆ ಬುದ್ದಿ ಹೇಳಿದೆ.

ಇದನ್ನೂ ಓದಿ: ಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

“ಕಿರ್ಪಾಲ್ ಸಾಮರ್ಥ್ಯ, ಸಮಗ್ರತೆ ಮತ್ತು ಬುದ್ಧಿಶಕ್ತಿಯನ್ನು ಹೊಂದಿದ್ದಾರೆ. ಅವರ ನೇಮಕಾತಿಯು ದೆಹಲಿ ಹೈಕೋರ್ಟ್‌ನ ಪೀಠಕ್ಕೆ ಮೌಲ್ಯವನ್ನು ಸೇರಿಸುತ್ತದೆ ಮತ್ತು ವೈವಿಧ್ಯತೆಯನ್ನು ಒದಗಿಸುತ್ತದೆ. ಅವರ ನಡತೆ ಮತ್ತು ನಡವಳಿಕೆಯು ಮೇಲ್ಮಟ್ಟದಲ್ಲಿದೆ.” ಎಂದು ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರು ತಮ್ಮ ಲೈಂಗಿಕ ದೃಷ್ಟಿಕೋನದ ಕಾರಣಕ್ಕಾಗಿ ಸರ್ಕಾರ ತನ್ನ ನೇಮಕಾತಿಯನ್ನು ಸ್ಥಗಿತಗೊಳಿಸಿದೆ ಎಂದು ಆರೋಪಿಸಿ ಮಾಧ್ಯಮಗಳೊಂದಿಗೆ ಇನ್ನುಮುಂದೆ ಮಾತನಾಡದಿದ್ದರೆ ಉತ್ತಮ ಎಂದು ಅದು ಹೇಳಿದೆ. ಆದಾಗ್ಯೂ, ಐದು ವರ್ಷಗಳ ಕಾಲ ತನ್ನ ಹೆಸರನ್ನು ಸ್ಥಗಿತಗೊಳಿಸುವುದರಿಂದ ಕಿರ್ಪಾಲ್‌ ಅವರಿಗೆ ಸಾಕಷ್ಟು ನೋವು ಮತ್ತು ವೇದನೆ ಅನುಭವಿಸಿದ್ದಾರೆ ಎನ್ನುವುದನ್ನು ಕೊಲಿಜಿಯಂ ಅರ್ಥಮಾಡಿಕೊಂಡಿದೆ.

ಅಕ್ಟೋಬರ್ 13, 2017 ರಂದು ದೆಹಲಿ ಹೈಕೋರ್ಟ್ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ನ್ಯಾಯಾಧೀಶರಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ಗೆ ಕಳುಹಿಸಿದೆ. ಅದರಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ನಾಲ್ಕು ಸಂದರ್ಭಗಳಲ್ಲಿ ಪರಿಗಣಿಸಿದೆ – ಸೆಪ್ಟೆಂಬರ್ 4, 2018, ಜನವರಿ 16, 2019, ಏಪ್ರಿಲ್ 1, 2019 ಮತ್ತು ಮಾರ್ಚ್ 2 ರಂದು , 2021. ಪ್ರತಿ ಬಾರಿಯೂ, ಕಿರ್ಪಾಲ್ ಅವರ ವಿದೇಶಿ ಸಂಗಾತಿಯೊಂದಿಗಿನ ಸಂಬಂಧದಿಂದ ರಾಷ್ಟೀಯ ಭದ್ರತೆಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಊಹೆಯ ವರದಿಯನ್ನು ಕೇಂದ್ರ ಸರ್ಕಾರ ದಾಖಲಿಸಿ ವಿರೋಧಿಸಿತ್ತು ಹಾಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕೂಡ ನಿರ್ಧಾರ ತೆಗೆದುಕೊಳ್ಳುವುದನ್ನು ಮುಂದೂಡಿತು.

ನವೆಂಬರ್ 11, 2021 ರಂದು, ಆಗಿನ ಸಿಜೆಐ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಿತು. ಅದನ್ನು ಸರ್ಕಾರವು ನವೆಂಬರ್ 25, 2022 ರಂದು ಹಿಂದಿರುಗಿಸಿತು. ಜನವರಿ 18, 2023 ರಂದು, ಸುಪ್ರೀಂ ಕೋರ್ಟ್ ಅವರ ಹೆಸರನ್ನು ಪುನರುಚ್ಚರಿಸಿತು.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಏಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಅವರ ಲೈಂಗಿಕ ದೃಷ್ಟಿಕೋನದ ಕಾರಣಕ್ಕೂ ಆಗಿದೆ. ಕಿರ್ಪಾಲ್ ಅವರು ನೇಮಕವಾದಲ್ಲಿ ಭಾರತದ ಮೊದಲ ಬಹಿರಂಗ ಸಲಿಂಗಾಸಕ್ತ ನ್ಯಾಯಾಧೀಶರಾಗುತ್ತಾರೆ. ಆದರೆ ಸರ್ಕಾರ ಮಾತ್ರ ಇವರ ನೇಮಕಕ್ಕೆ ಪ್ರತಿಬಾರಿಯೂ ಆಕ್ಷೇಪಗಳನ್ನು ಸಲ್ಲಿಸುತ್ತಲೇ ಇದೆ. ಆಕ್ಷೇಪಗಳನ್ನು ತಿರಸ್ಕರಿಸುವುದರ ಜೊತೆಗೆ ಸರ್ಕಾರಕ್ಕೆ ಸುಪ್ರೀ ಕೋರ್ಟ್ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...