Homeಮುಖಪುಟಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

ಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

- Advertisement -
- Advertisement -

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಸಲಿಂಗಾಸಕ್ತ, ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಹೆಸರನ್ನು ಎರಡನೇ ಬಾರಿಗೆ ಪುನರುಚ್ಚರಿಸಲು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್, RAW “ಆಕ್ಷೇಪಣೆಗಳನ್ನು” ತಿರಸ್ಕರಿಸಿದೆ.

ಸ್ವಿಸ್ ಪ್ರಜೆ ನಿಕೋಲಸ್ ಜರ್ಮೈನ್ ಬ್ಯಾಚ್‌ಮನ್‌ನೊಂದಿಗಿನ ಕಿರ್ಪಾಲ್ ಅವರ ಜೊತೆ ಸಲಿಂಗಾಸಕ್ತಿ ಸಂಬಂಧ ಹೊಂದಿದ್ದಾರೆ. ಹಾಗಾಗಿ ಈ ಬಗ್ಗೆ RAW ಆತಂಕ ವ್ಯಕ್ತಪಡಿಸಿದೆ. ಮತ್ತೊಂದೆಡೆ ಕಾನೂನು ಸಚಿವಾಲಯವು ಕಿರ್ಪಾಲ್ ಅವರ ಸರ್ಕಾರದ ವಿರುದ್ಧದ ಹೋರಾಟ ಮತ್ತು ಸಲಿಂಗಾಸಕ್ತಿಯ ವಿಚಾರವನ್ನು ಇಟ್ಟುಕೊಂಡು ಆಕ್ಷೇಪಿಸಿದೆ. ಅಷ್ಟೇ ಅಲ್ಲದೇ ಸಲಿಂಗಿಯ ಜೊತೆಗಿರುವುದು ವಿವಾಹವಲ್ಲ ಎಂದು ಹೇಳಿದೆ. ಆದರೆ ಭಾರತದಲ್ಲಿ ಸಲಿಂಗಿಗಳು ಮದುವೆಯಾಗುವುದನ್ನು ಕಾನೂನು ಬದ್ಧಗೊಳಿಸಲಾಗಿದೆ.

“ಎರಡು ದೇಶದವರು ಮದುವೆಯಾದರೆ, ಅವರು ಭಾರತದ ವಿರುದ್ಧ ಕೆಲಸ ಮಾಡುತ್ತಾರೆ ಹಾಗಾಗಿ ಅದು ರಾಷ್ಟ್ರೀಯ ಭದ್ರತೆಯ ಧಕ್ಕೆಯಾಗುತ್ತದೆ ಎಂದು RAW ಊಹಿಸಿರುವುದು ಸರಿಯಲ್ಲ” ಎಂದು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಕೆಎಂ ಜೋಸೆಫ್ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವವರು ವಿದೇಶಿ ಪ್ರಜೆಗಳನ್ನು ಸಂಗಾತಿಗಳಾಗಿ ಹೊಂದಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಕೆಆರ್ ನಾರಾಯಣನ್ ಮತ್ತು ಪ್ರಸ್ತುತ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಹೆಸರನ್ನು ಉಲ್ಲೇಖಿಸಿದೆ. ತಾತ್ವಿಕವಾಗಿ, ಕಿರ್ಪಾಲ್ ಅವರ ಸಂಗಾತಿಯು ವಿದೇಶಿ ಪ್ರಜೆ ಎಂಬ ಕಾರಣದ ಉಮೇದುವಾರಿಕೆಗೆ ಯಾವುದೇ ಆಕ್ಷೇಪಣೆ ಇರುವಂತಿಲ್ಲ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರ ಸಲಿಂಗಾಸಕ್ತದ ಕಾರಣ ಹೇಳುತ್ತಿರುವ ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ನವತೇಜ್ ಜೋಹರ್ ಸಾಂವಿಧಾನಿಕ ಪೀಠದ ತೀರ್ಪಿನ ಬಗ್ಗೆ ನೆನಪಿಸಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಘನತೆ ಮತ್ತು ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳಲು ಅರ್ಹನಾಗಿದ್ದಾನೆ ಎಂದು ತೀರ್ಪು ನೀಡಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ನ್ಯಾಯಾಧೀಶರಾಗಲು ಅವರ ಉಮೇದುವಾರಿಕೆಯನ್ನು ತಿರಸ್ಕರಿಸುವುದು” ಸುಪ್ರೀಂ ಕೋರ್ಟ್ ಸ್ಥಾಪಿಸಿದ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಕೇಂದ್ರ ಸರ್ಕಾರಕ್ಕೆ ಬುದ್ದಿ ಹೇಳಿದೆ.

ಇದನ್ನೂ ಓದಿ: ಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

“ಕಿರ್ಪಾಲ್ ಸಾಮರ್ಥ್ಯ, ಸಮಗ್ರತೆ ಮತ್ತು ಬುದ್ಧಿಶಕ್ತಿಯನ್ನು ಹೊಂದಿದ್ದಾರೆ. ಅವರ ನೇಮಕಾತಿಯು ದೆಹಲಿ ಹೈಕೋರ್ಟ್‌ನ ಪೀಠಕ್ಕೆ ಮೌಲ್ಯವನ್ನು ಸೇರಿಸುತ್ತದೆ ಮತ್ತು ವೈವಿಧ್ಯತೆಯನ್ನು ಒದಗಿಸುತ್ತದೆ. ಅವರ ನಡತೆ ಮತ್ತು ನಡವಳಿಕೆಯು ಮೇಲ್ಮಟ್ಟದಲ್ಲಿದೆ.” ಎಂದು ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರು ತಮ್ಮ ಲೈಂಗಿಕ ದೃಷ್ಟಿಕೋನದ ಕಾರಣಕ್ಕಾಗಿ ಸರ್ಕಾರ ತನ್ನ ನೇಮಕಾತಿಯನ್ನು ಸ್ಥಗಿತಗೊಳಿಸಿದೆ ಎಂದು ಆರೋಪಿಸಿ ಮಾಧ್ಯಮಗಳೊಂದಿಗೆ ಇನ್ನುಮುಂದೆ ಮಾತನಾಡದಿದ್ದರೆ ಉತ್ತಮ ಎಂದು ಅದು ಹೇಳಿದೆ. ಆದಾಗ್ಯೂ, ಐದು ವರ್ಷಗಳ ಕಾಲ ತನ್ನ ಹೆಸರನ್ನು ಸ್ಥಗಿತಗೊಳಿಸುವುದರಿಂದ ಕಿರ್ಪಾಲ್‌ ಅವರಿಗೆ ಸಾಕಷ್ಟು ನೋವು ಮತ್ತು ವೇದನೆ ಅನುಭವಿಸಿದ್ದಾರೆ ಎನ್ನುವುದನ್ನು ಕೊಲಿಜಿಯಂ ಅರ್ಥಮಾಡಿಕೊಂಡಿದೆ.

ಅಕ್ಟೋಬರ್ 13, 2017 ರಂದು ದೆಹಲಿ ಹೈಕೋರ್ಟ್ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ನ್ಯಾಯಾಧೀಶರಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ಗೆ ಕಳುಹಿಸಿದೆ. ಅದರಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ನಾಲ್ಕು ಸಂದರ್ಭಗಳಲ್ಲಿ ಪರಿಗಣಿಸಿದೆ – ಸೆಪ್ಟೆಂಬರ್ 4, 2018, ಜನವರಿ 16, 2019, ಏಪ್ರಿಲ್ 1, 2019 ಮತ್ತು ಮಾರ್ಚ್ 2 ರಂದು , 2021. ಪ್ರತಿ ಬಾರಿಯೂ, ಕಿರ್ಪಾಲ್ ಅವರ ವಿದೇಶಿ ಸಂಗಾತಿಯೊಂದಿಗಿನ ಸಂಬಂಧದಿಂದ ರಾಷ್ಟೀಯ ಭದ್ರತೆಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಊಹೆಯ ವರದಿಯನ್ನು ಕೇಂದ್ರ ಸರ್ಕಾರ ದಾಖಲಿಸಿ ವಿರೋಧಿಸಿತ್ತು ಹಾಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕೂಡ ನಿರ್ಧಾರ ತೆಗೆದುಕೊಳ್ಳುವುದನ್ನು ಮುಂದೂಡಿತು.

ನವೆಂಬರ್ 11, 2021 ರಂದು, ಆಗಿನ ಸಿಜೆಐ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಿತು. ಅದನ್ನು ಸರ್ಕಾರವು ನವೆಂಬರ್ 25, 2022 ರಂದು ಹಿಂದಿರುಗಿಸಿತು. ಜನವರಿ 18, 2023 ರಂದು, ಸುಪ್ರೀಂ ಕೋರ್ಟ್ ಅವರ ಹೆಸರನ್ನು ಪುನರುಚ್ಚರಿಸಿತು.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಏಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಅವರ ಲೈಂಗಿಕ ದೃಷ್ಟಿಕೋನದ ಕಾರಣಕ್ಕೂ ಆಗಿದೆ. ಕಿರ್ಪಾಲ್ ಅವರು ನೇಮಕವಾದಲ್ಲಿ ಭಾರತದ ಮೊದಲ ಬಹಿರಂಗ ಸಲಿಂಗಾಸಕ್ತ ನ್ಯಾಯಾಧೀಶರಾಗುತ್ತಾರೆ. ಆದರೆ ಸರ್ಕಾರ ಮಾತ್ರ ಇವರ ನೇಮಕಕ್ಕೆ ಪ್ರತಿಬಾರಿಯೂ ಆಕ್ಷೇಪಗಳನ್ನು ಸಲ್ಲಿಸುತ್ತಲೇ ಇದೆ. ಆಕ್ಷೇಪಗಳನ್ನು ತಿರಸ್ಕರಿಸುವುದರ ಜೊತೆಗೆ ಸರ್ಕಾರಕ್ಕೆ ಸುಪ್ರೀ ಕೋರ್ಟ್ ಚಾಟಿ ಬೀಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...