Homeಮುಖಪುಟಸಬ್ಯಸಾಚಿ ದಾಸ್ ಗೆ ಬೆಂಬಲಿಸಿ ಅಶೋಕ ವಿವಿಯ ಮತ್ತೋರ್ವ ಪ್ರಾಧ್ಯಾಪಕ ರಾಜೀನಾಮೆ

ಸಬ್ಯಸಾಚಿ ದಾಸ್ ಗೆ ಬೆಂಬಲಿಸಿ ಅಶೋಕ ವಿವಿಯ ಮತ್ತೋರ್ವ ಪ್ರಾಧ್ಯಾಪಕ ರಾಜೀನಾಮೆ

- Advertisement -
- Advertisement -

ಸಂಶೋಧನಾ ಪ್ರಬಂಧದ ವಿವಾದದ ನಂತರ ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ  ಪ್ರಾಧ್ಯಾಪಕ ಸಬ್ಯಸಾಚಿ ದಾಸ್ ಅವರು  ರಾಜೀನಾಮೆ ನೀಡಿದ್ದರು.  ಇದೀಗ ಅರ್ಥಶಾಸ್ತ್ರ ವಿಭಾಗದ ಮತ್ತೊಬ್ಬ ಪ್ರಾಧ್ಯಾಪಕ ಪುಲಪ್ರೆ ಬಾಲಕೃಷ್ಣನ್ ಅವರು ಸಬ್ಯಸಾಚಿ ದಾಸ್ ಅವರನ್ನು ಬೆಂಬಲಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದಾಸ್‌ ಅವರನ್ನು ಮರುನೇಮಕ ಮಾಡಿಕೊಳ್ಳದಿದ್ದಲ್ಲಿ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಆಡಳಿತ ಮಂಡಳಿಗೆ ಸಬ್ಯಸಾಚಿ ದಾಸ್  ಸಹೋದ್ಯೋಗಿಗಳು ಪತ್ರ ಬರೆದಿದ್ದಾರೆ. ಇಂಗ್ಲಿಷ್‌ ಮತ್ತು ಕ್ರಿಯೇಟಿವ್ ರೈಟಿಂಗ್ ವಿಭಾಗದ ಅಧ್ಯಾಪಕರು ಕೂಡ  ಇದಕ್ಕೆ ಬೆಂಬಲವನ್ನು ನೀಡಿದ್ದಾರೆ. ಆಗಸ್ಟ್‌ 23ರ ಒಳಗಾಗಿ ದಾಸ್ ಅವರನ್ನು ಮರುನೇಮಕ ಮಾಡಿಕೊಳ್ಳಬೇಕು ಎಂದು ವಿವಿ ಆಡಳಿತ ಮಂಡಳಿಗೆ ಗಡುವು ನೀಡಲಾಗಿದೆ.

ನಮ್ಮ ಸಹೋದ್ಯೋಗಿ ಪ್ರೊ.ಸಬ್ಯಸಾಚಿ ದಾಸ್ ಅವರ ರಾಜೀನಾಮೆಯ ಪ್ರಸ್ತಾಪ ಮತ್ತು ವಿವಿಯ ತರಾತುರಿ ಅಂಗೀಕಾರವು , ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕರು, ನಮ್ಮ ಸಹೋದ್ಯೋಗಿಗಳು, ನಮ್ಮ ವಿದ್ಯಾರ್ಥಿಗಳು ಮತ್ತು ಅಶೋಕ ವಿಶ್ವವಿದ್ಯಾಲಯದ ಹಿತೈಷಿಗಳು ಆಡಳಿತದ ಜೊತೆಗೆ ಹೊಂದಿದ್ದ ನಂಬಿಕೆಯನ್ನು ಆಳವಾಗಿ ಛಿದ್ರಗೊಳಿಸಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಪ್ರೊ. ದಾಸ್ ಅವರು ಶೈಕ್ಷಣಿಕ ವಿಚಾರದಲ್ಲಿ ಯಾವುದೇ ಅಂಗೀಕೃತ ಮಾನದಂಡವನ್ನು ಉಲ್ಲಂಘಿಸಲಿಲ್ಲ. ಇವರ ಅಧ್ಯಯನದ ಕುರಿತ ಹಸ್ತಕ್ಷೇಪವು ಸಾಂಸ್ಥಿಕ ಕಿರುಕುಳವನ್ನು ರೂಪಿಸುತ್ತದೆ. ಶೈಕ್ಷಣಿಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತದೆ ಮತ್ತು ಭಯದ ವಾತಾವರಣದಲ್ಲಿ ಕಾರ್ಯನಿರ್ವಹಿಸಲು ವಿದ್ವಾಂಸರನ್ನು ಒತ್ತಾಯಿಸುತ್ತದೆ. ನಾವು ಇದನ್ನು ಪ್ರಬಲ ಪದಗಳಲ್ಲಿ ಖಂಡಿಸುತ್ತೇವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕರಾದ ಪ್ರೊಫೆಸರ್ ಸಬ್ಯಸಾಚಿ ದಾಸ್ ಅವರು “ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದಲ್ಲಿ ಪ್ರಜಾಪ್ರಭುತ್ವದ ಹಿನ್ನಡೆ” ಎಂಬ ಶೀರ್ಷಿಕೆಯ ತನ್ನ ಪ್ರಬಂಧದ ಬಳಿಕ ವಿವಾದಕ್ಕೀಡಾಗಿ ರಾಜೀನಾಮೆ ನೀಡಿದ್ದರು.ಸಂಶೋಧನಾ ಪ್ರಬಂಧವು ಆನ್‌ಲೈನ್‌ನಲ್ಲಿ ವೈರಲ್ ಆಗಿ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಪ್ರೊಫೆಸರ್ ಸಬ್ಯಸಾಚಿ ದಾಸ್ ಅವರನ್ನು ಬೆಂಬಲಿಸಿ  ಬಾಲಕೃಷ್ಣನ್ ಅವರು ರಾಜೀನಾಮೆ ನೀಡಿದ್ದು, ರಾಜೀನಾಮೆ ಕುರಿತು ವಿಶ್ವವಿದ್ಯಾಲಯ ಸಿಬ್ಬಂದಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನು ಓದಿ: ಅಸ್ಸಾಂ: ಬಿಜೆಪಿ ಕಚೇರಿಯಲ್ಲಿ ತಲೆಕೆಳಗಾಗಿ ತ್ರಿವರ್ಣ ಧ್ವಜ ಹಾರಾಟ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...