Homeಕರ್ನಾಟಕತೂತುಬಿದ್ದ ಬೆಂಗಳೂರಿನ ಮತ್ತೊಂದು ರಸ್ತೆ; ಅವ್ಯವಸ್ಥೆಗೆ ಕೊನೆ ಎಂದು?

ತೂತುಬಿದ್ದ ಬೆಂಗಳೂರಿನ ಮತ್ತೊಂದು ರಸ್ತೆ; ಅವ್ಯವಸ್ಥೆಗೆ ಕೊನೆ ಎಂದು?

- Advertisement -
- Advertisement -

ಬೆಂಗಳೂರಿನ ಇಟ್ಟಮಡು ಮುಖ್ಯರಸ್ತೆಯ ಒಂದು ಭಾಗ ಇಂದು ಬೆಳಿಗ್ಗೆ ತೂತುಬಿದ್ದಿದೆ. ಆ ಮೂಲಕ ಸರಣಿ ರಸ್ತೆ ಅವಗಢಗಳ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ. ಸದ್ಯಕ್ಕೆ ಯಾವುದೇ ಜೀವಹಾನಿ ಸಂಭವಿಸದಂತೆ ರಸ್ತೆ ಕುಳಿ ಬಿದ್ದ ಭಾಗದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ ಎಂದು ವರದಿಯಾಗಿದೆ.

ಇಟ್ಟಮಡು ಮುಖ್ಯರಸ್ತೆಯ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಅಲ್ಲಿಯೇ ಈ ಅವಘಡ ಸಂಭವಿಸಿರುವುದಾಗಿ ಎಎನ್ಐ ವರದಿ ಮಾಡಿದೆ.

ಕಳೆದ ವಾರ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಇದೇ ರೀತಿಯ ರಸ್ತೆಯ ಕುಳಿಬಿದ್ದ ಪ್ರಕರಣ ವರದಿಯಾಗಿತ್ತು. ಮೆಟ್ರೋ ನಿಲ್ದಾಣದ 50 ಮೀಟರ್ ದೂರದಲ್ಲಿ 4-5 ಅಡಿಯಷ್ಟು ಆಳದ ಗುಂಡಿ ಕಂಡುಬಂದಿತ್ತು. ಬಿಬಿಎಂಪಿಯ ಕಾರ್ಯವೈಖರಿ ಬಗ್ಗೆ ಟೀಕೆ ವ್ಯಕ್ತವಾಗಿತ್ತು.

ಅದಕ್ಕೂ ಒಂದು ವಾರಗಳ ಹಿಂದೆ ಬ್ರಿಗೇಡ್ ರಸ್ತೆಯಲ್ಲಿ ದೊಡ್ಡ ತೂತು ಬಿದ್ದಿದ್ದು ಪರಿಣಾಮ ಬೈಕ್ ಸವಾರನೊಬ್ಬ ಅಪಘಾತಕ್ಕೀಡಾಗಿದ್ದಾನೆ. ಅಪಘಾತಕ್ಕೀಡಾದ ವ್ಯಕ್ತಿಯನ್ನು ಪುನೀತ್ ಎಂದು ಗುರುತಿಸಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇಡೀ ದೃಶ್ಯಾವಳಿ ಸಿಸಿಕ್ಯಾಮರದಲ್ಲಿ ದಾಖಲಾಗಿದೆ.

ಬೆಂಗಳೂರಿನ ವಾಣಿಜ್ಯ ಪ್ರದೇಶವಾದ ಜನನಿಬಿಡ ಬ್ರಿಗೇಡ್ ಟವರ್ಸ್ ಬಳಿಯ ಶೂಲೆ ಸರ್ಕಲ್ ರಸ್ತೆ ಮಧ್ಯೆದಲ್ಲಿ ದೊಡ್ಡ ಕುಳಿ ಬಿದ್ದಿತ್ತು. ಬಹುಭಾಗ ಕುಸಿದ ಬಿದ್ದ ಪರಿಣಾಮ ದೊಡ್ಡ ತೂತು ಉಂಟಾಗಿದೆ. ಬೈಕ್ ಸವಾರನೊಬ್ಬ ರಸ್ತೆಯಲ್ಲಿ ಚಲಿಸುತ್ತಿದ್ದಾಗ ರಸ್ತೆ ಮಧ್ಯೆದಲ್ಲಿ ಮಣ್ಣು ಕುಸಿದಿದೆ. ಪರಿಣಾಮ ಆಯತಪ್ಪಿ ಸವಾರ ನೆಲಕ್ಕುರುಳಿದ್ದನು.

ಅದಕ್ಕೂ ಎರಡು ದಿನಗಳ ಹಿಂದೆ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಒಂದರ ಕಬ್ಬಿಣದ ರಾಡ್‌ ಕುಸಿದು ತಾಯಿ ಹಾಗೂ ಮಗು ಮೃತಪಟ್ಟಿರುವ ದುರ್ಘಟನೆ ಜರುಗಿತ್ತು.

ಒಟ್ಟಾರೆಯಾಗಿ ಪ್ರತಿದಿನವೂ ಕಳಪೆ ಕಾಮಗಾರಿಗಳ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗುತ್ತಲೇ ಇವೆ. ಹಲವಾರು ಜೀವಹಾನಿಗಳು ಸಂಭವಿಸಿವೆ. ಆದರೆ ಆ ಅವ್ಯವಸ್ಥೆಗಳನ್ನು ನಿಲ್ಲಿಸಲು ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಗಮನ ಹರಿಸಿದಂತೆ ಕಾಣುತ್ತಿಲ್ಲ. ಈ ನಡುವೆ ಗುತ್ತಿಗೆದಾರರು ಸರ್ಕಾರದ ಮಂತ್ರಿಗಳು, ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂದು ಹಲವಾರು ಬಾರಿ ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಸರ್ಕಾರ ಹಲವು ರಂಗದಲ್ಲಿ ಜನರಿಂದ ವಿರೋಧ ಎದುರಿಸುತ್ತಿದೆ.

ಇದನ್ನೂ ಓದಿ: ಬೆಂಗಳೂರು ರಸ್ತೆಯಲ್ಲಿ ದೊಡ್ಡ ತೂತು: ಬೈಕ್ ಸವಾರನಿಗೆ ಅಪಘಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...