Homeಮುಖಪುಟ‘ಚರ್ಮ ಸ್ಪರ್ಶವಾದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂದು ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಮತ್ತೊಮ್ಮೆ ಹಿನ್ನಡೆ!

‘ಚರ್ಮ ಸ್ಪರ್ಶವಾದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂದು ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಮತ್ತೊಮ್ಮೆ ಹಿನ್ನಡೆ!

- Advertisement -
- Advertisement -

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ, “ಚರ್ಮದ ನೇರ ಸಂಪರ್ಕವಿಲ್ಲದೆ ಸ್ತನವನ್ನು ಹಿಡಿಯುವುದು ಲೈಂಗಿಕ ದೌರ್ಜನ್ಯ ಅಲ್ಲ” ಎಂದು ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆ ನ್ಯಾಯಮೂರ್ತಿ ಪುಷ್ಪಾ ವಿ ಗಣದೇವಾಲಾ ಅವರು ಮತ್ತೊಮ್ಮೆ ಹಿನ್ನಡೆ ಅನುಭವಿಸಿದ್ದಾರೆ. ಸುಪ್ರೀಂಕೋರ್ಟ್‌‌‌ ಕೊಲಿಜಿಯಂ ಅವರನ್ನು ಶಾಶ್ವತ ನ್ಯಾಯಾಧೀಶರನ್ನಾಗಿ ಮಾಡಲಾಗುವುದಿಲ್ಲ ಎಂದು ಹೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೈಕೋರ್ಟ್‌ನ ಹುದ್ದೆಯನ್ನು ಇದು ಎರಡನೇ ಬಾರಿಗೆ ತಿರಸ್ಕರಿಸಿದೆ.

ಸುಪ್ರೀಂಕೋರ್ಟ್‌ ಕೊಲೀಜಿಯಂ ಅವರನ್ನು ತಿರಸ್ಕರಿಸಿರುವುದರಿಂದ ಪ್ರಸ್ತುತ ಬಾಂಬೆ ಹೈಕೋರ್ಟ್‌ನ ತಾತ್ಕಾಲಿಕ ನ್ಯಾಯಾಧೀಶರಾಗಿರುವ ಗಣದೇವಾಲಾ ಅವರು ಫೆಬ್ರವರಿಯಲ್ಲಿ ತಮ್ಮ ಅವಧಿ ಮುಗಿದ ನಂತರ ತಮ್ಮ ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಮರಳಲಿದ್ದಾರೆ.

ಇದನ್ನೂ ಓದಿ:‘ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂಬ ಬಾಂಬೆ ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದ ಸುಪ್ರೀಂ

ಜನವರಿ 19 ರ ತೀರ್ಪಿನಲ್ಲಿ, ಜಸ್ಟಿಸ್ ಗಣದೇವಾಲಾ ಅವರು, “ಚರ್ಮದಿಂದ ಚರ್ಮಕ್ಕೆ ನೇರವಾಗಿ ಸಂಪರ್ಕ ಇಲ್ಲದೆ ಅಪ್ರಾಪ್ತ ವಯಸ್ಕರ ಸ್ತನವನ್ನು ಹಿಡಿಯುವುದು ಲೈಂಗಿಕ ದೌರ್ಜನ್ಯ ಎಂದು ಕರೆಯಲಾಗುವುದಿಲ್ಲ” ಎಂದು ತೀರ್ಪು ನೀಡಿದ್ದರು. ಈ ತೀರ್ಪಿನ ವಿರುದ್ದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಸೇರಿದಂತೆ ಹಲವು ಅರ್ಜಿಗಳು ಸಲ್ಲಿಕೆಯಾದ ನಂತರ ಸುಪ್ರೀಂ ಕೋರ್ಟ್ ನವೆಂಬರ್ 18 ರಂದು ತೀರ್ಪನ್ನು ರದ್ದುಗೊಳಿಸಿತ್ತು.

ನಂತರ, ಮತ್ತೊಂದು ಪ್ರಕರಣದಲ್ಲಿ ಕೂಡಾ ನ್ಯಾಯಮೂರ್ತಿ ಗಣದೇವಾಲಾ ಅವರು ವಿವಾದಾತ್ಮಕವಾಗಿ ತೀರ್ಪು ನೀಡಿದ್ದರು. “‘ಮಹಿಳಾ ಸಂತ್ರಸ್ತೆಯ ಕೈಗಳನ್ನು ಹಿಡಿದಿಟ್ಟುಕೊಳ್ಳುವುದು’ ಅಥವಾ ‘ಪ್ಯಾಂಟಿನ ಜಿಪ್ ಅನ್ನು ತೆರೆಯುವುದು’ ಲೈಂಗಿಕ ದೌರ್ಜನ್ಯದ ವ್ಯಾಖ್ಯಾನದ ಅಡಿಯಲ್ಲಿ ಬರುವುದಿಲ್ಲ” ಎಂದು POCSO(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಅಡಿಯಲ್ಲಿ ಶಿಕ್ಷೆಗೆ ಒಳಗಾಗಿದ್ದ ವ್ಯಕ್ತಿಯ ಶಿಕ್ಷೆಯನ್ನು ರದ್ದುಗೊಳಿಸಿದ್ದರು. ಆ ವ್ಯಕ್ತಿಯು ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು.

ಈ ತೀರ್ಪಿನ ನಂತರ, ನ್ಯಾಯಮೂರ್ತಿ ಗಣೆಡಿವಾಲಾ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ಶಿಫಾರಸು ಮಾಡುವ ನಿರ್ಧಾರವನ್ನು ಕೊಲಿಜಿಯಂ ರದ್ದುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...