Homeಮುಖಪುಟಹರಿಯಾಣ ಬಿಜೆಪಿಗೆ ಮತ್ತೊಂದು ಹಿನ್ನಡೆ; 'ಕಮಲ' ಬಿಟ್ಟು 'ಕೈ' ಹಿಡಿದ ಕುರುಕ್ಷೇತ್ರ ಮಾಜಿ ಸಂಸದೆ

ಹರಿಯಾಣ ಬಿಜೆಪಿಗೆ ಮತ್ತೊಂದು ಹಿನ್ನಡೆ; ‘ಕಮಲ’ ಬಿಟ್ಟು ‘ಕೈ’ ಹಿಡಿದ ಕುರುಕ್ಷೇತ್ರ ಮಾಜಿ ಸಂಸದೆ

- Advertisement -
- Advertisement -

ಹರಿಯಾಣದಲ್ಲಿ ಮೂವರು ಸ್ವತಂತ್ರ ಶಾಸಕರು ಆಡಳಿತಾರೂಢ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ಹಿಂಪಡೆದು ಕಾಂಗ್ರೆಸ್‌ಗೆ ಸೇರಿದ ಕೆಲವೇ ದಿನಗಳಲ್ಲಿ, ಕುರುಕ್ಷೇತ್ರದಿಂದ ಎರಡು ಅವಧಿಗೆ ಸಂಸದೆಯಾಗಿದ್ದ ಕೈಲಾಶೋ ಸೈನಿ ಅವರು ಕೇಸರಿ ಪಕ್ಷವನ್ನು ತೊರೆದು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಸಮ್ಮುಖದಲ್ಲಿ ಕೈ ಹಿಡಿದಿದ್ದಾರೆ.

ಕೈಲಾಶೋ ಅವರನ್ನು ಕುರುಕ್ಷೇತ್ರ ಜಿಲ್ಲೆಯ ಪ್ರಮುಖ ಒಬಿಸಿ ನಾಯಕಿ ಎಂದು ಪರಿಗಣಿಸಲಾಗಿದೆ. ಮೇ 25 ರ ಲೋಕಸಭೆ ಚುನಾವಣೆಯಲ್ಲಿ ಕುರುಕ್ಷೇತ್ರದಲ್ಲಿ ಇಂಡಿಯಾ ಬ್ಲಾಕ್ ಬೆಂಬಲಿತ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಶೀಲ್ ಗುಪ್ತಾ ಪರವಾಗಿ ಪ್ರಚಾರ ಮಾಡುವುದಾಗಿ ಅವರು ಘೋಷಿಸಿದರು.

ಅವರು 1998 ಮತ್ತು 1999 ರಲ್ಲಿ ಕುರುಕ್ಷೇತ್ರ ಲೋಕಸಭಾ ಸ್ಥಾನದಿಂದ ಕ್ರಮವಾಗಿ ಹರಿಯಾಣ ಲೋಕದಳ (ರಾಷ್ಟ್ರೀಯ) ಮತ್ತು ಭಾರತೀಯ ರಾಷ್ಟ್ರೀಯ ಲೋಕದಳದ ಟಿಕೆಟ್‌ಗಳಲ್ಲಿ ಆಯ್ಕೆಯಾದರು. ಐಎನ್‌ಡಿಎಲ್ ಅನ್ನು ಮೊದಲು ಹರಿಯಾಣ ಲೋಕದಳ (ರಾಷ್ಟ್ರೀಯ) ಎಂದು ಕರೆಯಲಾಗುತ್ತಿತ್ತು.

ಕಾಂಗ್ರೆಸ್‌ಗೆ ಸೇರ್ಪಡೆಯಾದ ನಂತರ ಕೈಲಾಶೋ ಮಾತನಾಡಿ, “ರಾಜ್ಯದಲ್ಲಿ 10 ವರ್ಷಗಳ ಆಡಳಿತದಲ್ಲಿ ಸಮಾಜದ ಪ್ರತಿಯೊಂದು ವರ್ಗವನ್ನು ಗೌರವಿಸಿದ ಭೂಪಿಂದರ್ ಸಿಂಗ್ ಹೂಡಾ ಅವರ ನೇತೃತ್ವದಲ್ಲಿ ನಾನು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ. ನಾನು ಬಹಳ ಸಮಯದಿಂದ ಯೋಚಿಸಿದ್ದೆ, ಕಾಂಗ್ರೆಸ್‌ನಂತಹ ಪ್ರಜಾಸತ್ತಾತ್ಮಕ ಪಕ್ಷ ಜಗತ್ತಿನಲ್ಲಿ ಬೇರೆಲ್ಲೂ ಇಲ್ಲ” ಎಂದರು.

ಪಕ್ಷ ತೊರೆಯಲು ಕಾರಣ ಹೇಳಿದ ಮಾಜಿ ಸಂಸದೆ, “ಬಿಜೆಪಿಯಲ್ಲಿ ಸಾರ್ವಜನಿಕರ ಬಗ್ಗೆ ಕಾಳಜಿ ಇಲ್ಲ; ಸಂವಿಧಾನ ಬದಲಿಸುವ ಷಡ್ಯಂತ್ರ ನಡೆಯುತ್ತಿದೆ. ರೈತರನ್ನು ದೊಣ್ಣೆಗಳಿಂದ ಥಳಿಸಲಾಗಿದೆ” ಎಂದರು.

ಕೈಲಾಶೋ ಅವರನ್ನು ಸ್ವಾಗತಿಸಿದ ಹೂಡಾ, “ಹರ್ಯಾಣದಲ್ಲಿ ಸುಮಾರು 40 ಮಾಜಿ ಶಾಸಕರು ಮತ್ತು ಸಂಸದರು ಈಗಾಗಲೇ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ, ಇತ್ತೀಚೆಗೆ ಪಕ್ಷಕ್ಕೆ ನೀಡಿದ ಮೂವರು ಸ್ವತಂತ್ರ ಶಾಸಕರ ಬೆಂಬಲವನ್ನು ಹೊರತುಪಡಿಸಿ. ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಬಹು,ತ ಕಳೆದುಕೊಂಡಿದೆ; ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಪತ್ರ ನೀಡಿದ್ದೇವೆ” ಎಂದರು.

ಕೈಲಾಶೋ ಅವರು ಸುಮಾರು ಮೂರು ದಶಕಗಳಿಂದ ಕುರುಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅವರು 1996 ರ ಲೋಕಸಭಾ ಚುನಾವಣೆಯಲ್ಲಿ ಸೋಶಿಯಲ್ ಆಕ್ಷನ್ ಪಾರ್ಟಿಯ ಟಿಕೆಟ್‌ನಲ್ಲಿ ಕುರುಕ್ಷೇತ್ರದಲ್ಲಿ ಸ್ಪರ್ಧಿಸಿದರು. ಆದರೆ, ಹರಿಯಾಣ ವಿಕಾಸ್ ಪಕ್ಷದ ಅಭ್ಯರ್ಥಿ ಓ ಪಿ ಜಿಂದಾಲ್ ಅವರು ಚುನಾವಣಾ ಯುದ್ಧದಲ್ಲಿ ಗೆದ್ದರು. 1998 ರಲ್ಲಿ, ಅವರು ಹರಿಯಾಣ ಲೋಕದಳ (ರಾಷ್ಟ್ರೀಯ) ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದರು ಮತ್ತು ಕಾಂಗ್ರೆಸ್‌ನ ಕುಲದೀಪ್ ಶರ್ಮಾ ಅವರನ್ನು ಸೋಲಿಸಿದರು. ಐಎನ್‌ಎಲ್‌ಡಿ ಅಭ್ಯರ್ಥಿಯಾಗಿ ಕೈಲಾಶೋ ಕ್ಷೇತ್ರದಿಂದ 1999 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಓ ಪಿ ಜಿಂದಾಲ್ ಅವರನ್ನು ಸೋಲಿಸಿದರು. ಜಿಂದಾಲ್ ಪುತ್ರ ನವೀನ್ ಜಿಂದಾಲ್ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

2009ರಲ್ಲಿ ಹೂಡಾ ಮುಖ್ಯಮಂತ್ರಿಯಾಗಿದ್ದಾಗ ಕೈಲಾಶೋ ಕಾಂಗ್ರೆಸ್ ಸೇರಿದ್ದರು. ಆದಾಗ್ಯೂ, ಅವರು ಎರಡು ವಿಧಾನಸಭಾ ಚುನಾವಣೆಗಳಲ್ಲಿ (2009 ಮತ್ತು 2014) ಲಾಡ್ವಾ ಕ್ಷೇತ್ರದಿಂದ ಸೋತರು. 2019 ರ ವಿಧಾನಸಭಾ ಚುನಾವಣೆಗೆ ಮುನ್ನ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.

ಇದನ್ನೂ ಓದಿ; ಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ: ನವೀನ್ ಪಟ್ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...