Homeಮುಖಪುಟಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಈ ಹಿಂದೆ ಕೂಡಾ ಕೇರಳ ಹೈಕೋರ್ಟ್‌ ಪ್ರಫುಲ್ ಪಟೇಲ್‌ ನೀಡಿದ್ದ ಎರಡು ವಿವಾದಾತ್ಮಕ ಆದೇಶಗಳನ್ನು ತಡೆಹಿಡಿದಿತ್ತು.

- Advertisement -
- Advertisement -

ಸಮುದ್ರ ತೀರದಲ್ಲಿರುವ ಮನೆಗಳನ್ನು ನೆಲಸಮಗೊಳಿಸಬೇಕು ಎಂದು ಲಕ್ಷದ್ವೀಪ ಆಡಳಿತ ನೀಡಿದ್ದ ಆದೇಶವನ್ನು ಕೇರಳ ಹೈಕೋರ್ಟ್‌ ಮಂಗಳವಾರ ತಡೆಹಿಡಿದಿದೆ. ಮುಂದಿನ ಆದೇಶ ಬರುವವರೆಗೂ ದ್ವೀಪಗಳ ಕರಾವಳಿಯಲ್ಲಿರುವ ಮನೆಗಳನ್ನು ಧ್ವಂಸಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ತನ್ನ ಕಟ್ಟಡಗಳ ನೆಲಸಮಗೊಳಿಸುವಿಕೆಯ ಬಗ್ಗೆ ನೋಟಿಸ್ ಪಡೆದ ಮಾಲಿಕರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಲಯವು, ಎರಡು ವಾರಗಳಲ್ಲಿ ಈ ವಿಷಯದ ಬಗ್ಗೆ ತನ್ನ ಅಫಿಡವಿಟ್ ನೀಡುವಂತೆ ಆಡಳಿತಕ್ಕೆ ನಿರ್ದೇಶಿಸಿದೆ.

ಈ ಹಿಂದೆಯೆ ಹಲವರ ಮನೆಗಳನ್ನು ಧ್ವಂಸ ಮಾಡುವ ಬಗ್ಗೆ ಆಡಳಿತವು ನೋಟಿಸ್ ನೀಡಿತ್ತು. ಅದಕ್ಕಾಗಿ ಅವರು ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಆದರೆ ಆಡಳಿತವು ಅದು ಕೇವಲ ಕರಡು ಸಲಹೆಯಾಗಿದೆ ಎಂದು ತಿಳಿಸಿತ್ತು. ಇದರ ನಂತರ ಸಂತ್ರಸ್ತರು ಮತ್ತೆ ಧ್ವಂಸಗೊಳಿಸುವಿಕೆಯ ಆದೇಶವನ್ನು ಆಡಳಿತದಿಂದ ಪಡೆದಿದ್ದರು, ಹೀಗಾಗಿ ಅವರು ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಇತ್ತೀಚೆಗೆ ಹೊರಡಿಸಲಾಗಿರುವ ಹೊಸ ಆದೇಶಗಳಲ್ಲಿ, ಸಮುದ್ರ ತೀರದಿಂದ 20 ಮೀಟರ್ ಒಳಗೆ ಇರುವ ನೂರಕ್ಕಿಂತಲೂ ಹೆಚ್ಚಿನ ಮನೆಗಳನ್ನು ಧ್ವಂಸ ಮಾಡಲು ಹೇಳಲಾಗಿದೆ. ತೀರದಿಂದ 20 ಮೀಟರ್‌‌ ಒಳಗೆ ಇರುವ ಶೌಚಾಲಯಗಳು ಮತ್ತು ನಿರ್ಜನ ದ್ವೀಪಗಳಲ್ಲಿ ನಿರ್ಮಿಸಲಾದ ತಾತ್ಕಾಲಿಕ ಮೀನುಗಾರಿಕಾ ಶೆಡ್‌ಗಳನ್ನು ಸಹ ಧ್ವಂಸ ಮಾಡಲು ಅದು ಹೇಳಿದೆ.

ಲಕ್ಷದ್ವೀಪದ ಆಡಳಿತ ಕೇಂದ್ರವಾಗಿರುವ ಕವರತ್ತಿಯ 102 ಮನೆಗಳಿಗೆ ನೋಟಿಸ್ ಪಡೆದಿವೆ. ಅಷ್ಟೇ ಅಲ್ಲದೆ ಇನ್ನೂ 52 ಮನೆಗಳಿಗೆ ಶೀಘ್ರದಲ್ಲೇ ನೋಟಿಸ್‌‌ ನೀಡಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೆರಿಯಮ್, ಸುಹೆಲಿ ಪಾರ್ ಮತ್ತು ಕಲ್ಪೇನಿ ದ್ವೀಪಗಳ ಅನೇಕರು ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳಿಂದ ಇದೀ ರೀತಿಯ ನೋಟಿಸ್ ಪಡೆದಿದ್ದಾರೆ ಎಂದು ‘ಮಾಧ್ಯಮಂ’ ವರದಿ ಮಾಡಿದೆ.

ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ | Naanu gauri

ಮನೆಗಳಿಗೆ ನೀಡಲಾದ ನೋಟಿಸ್‌ಗೆ ಉತ್ತರಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ಒಂದು ವೇಳೆ ನೋಟಿಸ್‌ ನೀಡಿದ ಕಟ್ಟಡಗಳನ್ನು ಧ್ವಂಸ ಮಾಡಲು ವಿಫಲವಾದರೆ ಅದನ್ನು ಅಧಿಕಾರಿಗಳೇ ಧ್ವಂಸ ಮಾಡಲಿದ್ದು, ಅದಕ್ಕೆ ತಗುಲುವ ವೆಚ್ಚವನ್ನು ಕಟ್ಟಡದ ಮಾಲಿಕರು ನೀಡಬೇಕಾಗುತ್ತದೆ ಎಂದು ನೋಟಿಸ್ ಹೇಳಿತ್ತು.

ಸಮುದ್ರ ತೀರದಿಂದ 50 ಮೀಟರ್ ದೂರವಿರುವ ಕಟ್ಟಡಗಳಿಗೂ ನೋಟಿಸ್‌ ಬಂದಿದೆ ಎಂದು ದ್ವೀಪವಾಸಿಗಳು ಹೇಳಿದ್ದಾರೆ. ನೋಟಿಸ್ ಪಡೆದ ಹಲವು ಕಟ್ಟಡಗಳು ತೀರದಿಂದ 50 ಮೀಟರ್ ದೂರದಲ್ಲೆ ನಿರ್ಮಿಸಲ್ಪಟ್ಟಿತ್ತಾದರೂ, ಸಮುದ್ರ ಕೊರೆತದಿಂದ ಅದರ ಅಂತರ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಆದರೆ ಅಧಿಕಾರಿಗಳು, “ಇಂಟಿಗ್ರೇಟೆಡ್ ಐಲ್ಯಾಂಡ್ ಮ್ಯಾನೇಜ್ಮೆಂಟ್ ಪ್ಲ್ಯಾನ್ ಅಡಿಯಲ್ಲಿ ಕಾನೂನುಬಾಹಿರವಾಗಿ ಕಟ್ಟಲ್ಪಟ್ಟ ಕಟ್ಟವೆಂದು ಕಂಡುಬಂದವರಿಗೆ ಮಾತ್ರ ನೋಟಿಸ್ ನೀಡಲಾಗುತ್ತದೆ. ಅಲ್ಲದೆ, ಶಿಥಿಲವಾದ ಮನೆಗಳು ಮತ್ತು ಶೌಚಾಲಯಗಳನ್ನು ಮಾತ್ರ ಉರುಳಿಸುತ್ತಿದ್ದು, ಯಾರೂ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಐದು ಸ್ಥಳಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಲು ಬೇಕಾಗಿ ಕಟ್ಟಡಗಳನ್ನು ತೆಗೆದುಹಾಕಲಾಗುತ್ತದೆ” ಎಂದು ಹೇಳುತ್ತಾರೆ.

ಈ ಮಧ್ಯೆ, ದ್ವೀಪವಾಸಿಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಕಳಪೆ ತ್ಯಾಜ್ಯ ನಿರ್ವಹಣೆಗೆ ದಂಡ ವಿಧಿಸಲಿರುವ ಹೊಸ ಆದೇಶಕ್ಕೆ ಆಕ್ರೋಶಗಳು ಹೆಚ್ಚಿವೆ. ತ್ಯಾಜ್ಯ ನಿರ್ವಹಣೆಗೆ ಯಾವುದೆ ಮೂಲಸೌಕರ್ಯಗಳೇ ಇಲ್ಲದೆ ಇರುವಾಗ ದಂಡ ವಿಧಿಸುವಂತಹ ಆದೇಶಗಳು ಹೇಗೆ ತಾರ್ಕಿಕವಾಗುತ್ತದೆ ಎಂದು ದ್ವೀಪವಾಸಿಗಳು ವಾದಿಸುತ್ತಿದ್ದಾರೆ.

ಈ ಮೊದಲು ಚೆರಿಯಮ್ ದ್ವೀಪದಲ್ಲಿ, ಕಡಲತೀರದ ಉದ್ದಕ್ಕೂ ಇರುವ ಮೀನುಗಾರರ ನಿರ್ಮಾಣಗಳನ್ನು ಏಳು ದಿನಗಳಲ್ಲಿ ತೆರವುಗೊಳಿಸಲು ಆಡಳಿತವು ಆದೇಶಿಸಿತ್ತು. ಮೀನುಗಾರರು ಅದನ್ನು ಸ್ವಇಚ್ಛೆಯಿಂದ ಮಾಡದಿದ್ದರೆ, ಕಂದಾಯ ಇಲಾಖೆಯು ಇದನ್ನು ಮಾಡುತ್ತದೆ ಎಂದು ಆದೇಶವು ಉಲ್ಲೇಖಿಸಿತ್ತು.

ಲಕ್ಷದ್ವೀಪ ಆಡಳಿತವು ಈ ಮೊದಲು ಕೂಡಾ ಮೀನುಗಾರರ ನಿರ್ಮಾಣಗಳನ್ನು ಇದೇ ಮಾದರಿಯಲ್ಲಿ ಕಿತ್ತುಹಾಕಿತ್ತು. ಇದು ದ್ವೀಪವಾಸಿಗಳು ಸೇರಿದಂತೆ ಭಾರತದಾದ್ಯಂತ ಭಾರಿ ಆಕ್ರೋಶವನ್ನು ಹುಟ್ಟಹಾಕಿತ್ತು. ಪ್ರಫುಲ್ ಪಟೇಲ್ ನೇತೃತ್ವದ ಹೊಸ ಲಕ್ಷದ್ವೀಪ ಆಡಳಿತವು ಪರಿಚಯಿಸಿದ ಅನೇಕ ಕಠಿಣ ಯೋಜನೆಗಳಲ್ಲಿ ಇದು ಒಂದಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ಇದಕ್ಕೂ ಮುನ್ನ, ಕಳೆದ ಶನಿವಾರದಂದು, ಪರಿಸರ ಕಾಳಜಿಗಳ ಬಗ್ಗೆ ತಜ್ಞರ ಎಚ್ಚರಿಕೆಗಳ ಹೊರತಾಗಿಯೂ, ಒಕ್ಕೂಟ ಸರ್ಕಾರವು ಲಕ್ಷದ್ವೀಪದಲ್ಲಿ ಪ್ರಮುಖ ಪ್ರವಾಸೋದ್ಯಮ ಯೋಜನೆಗೆ ಅನುಮೋದನೆ ನೀಡಿತ್ತು. ಲಕ್ಷದ್ವೀಪದ ಮಿನಿಕಾಯ್ ದ್ವೀಪದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲು ಖಾಸಗಿ ಕಂಪನಿಗೆ 75 ವರ್ಷಗಳ ಅವಧಿಗೆ 15 ಹೆಕ್ಟೇರ್ ಭೂಮಿಯನ್ನು ಸರ್ಕಾರ ಗುತ್ತಿಗೆಗೆ ನೀಡಲಿದೆ.

#SaveLakshadweep-ಬಿಜೆಪಿಯ ಧ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?
PC: A.B. Deayou

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಶಾಲೆಯ ಮಧ್ಯಾಹ್ನದ ಊಟದಲ್ಲಿ ಮಾಂಸವನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಪ್ರಫುಲ್ ಪಟೇಲ್‌ ನೀಡಿದ್ದ ಎರಡು ವಿವಾದಾತ್ಮಕ ಆದೇಶಗಳನ್ನು ಕೇರಳ ಹೈಕೋರ್ಟ್ ತಡೆಹಿಡಿದಿತ್ತು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...