Homeಮುಖಪುಟಕೆ.ಕವಿತಾ ಬಂಧನದ ಬೆನ್ನಲ್ಲೇ ಕೆಸಿಆರ್‌ಗೆ ಮತ್ತೊಂದು ಆಘಾತ; ಕಾಂಗ್ರೆಸ್‌ ಸೇರಿದ ಬಿಆರ್‌ಎಸ್‌ ಸಂಸದ

ಕೆ.ಕವಿತಾ ಬಂಧನದ ಬೆನ್ನಲ್ಲೇ ಕೆಸಿಆರ್‌ಗೆ ಮತ್ತೊಂದು ಆಘಾತ; ಕಾಂಗ್ರೆಸ್‌ ಸೇರಿದ ಬಿಆರ್‌ಎಸ್‌ ಸಂಸದ

- Advertisement -
- Advertisement -

ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ ನಂತರ, ಭಾರತ್ ರಾಷ್ಟ್ರ ಸಮಿತಿಗೆ (ಬಿಆರ್‌ಎಸ್) ಮತ್ತೊಂದು ಹಿನ್ನಡೆಯಾಗಿದೆ. ಸಂಸದ ರಂಜಿತ್ ರೆಡ್ಡಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ರೆಡ್ಡಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಚೇವೆಲ್ಲಾ ಕ್ಷೇತ್ರಕ್ಕೆ ಸ್ಪರ್ಧಿಸುವ ಸಾಧ್ಯತೆ ಇದ್ದು, ಇದೇ ವೇಳೆ ಮತ್ತೊಬ್ಬ ಬಿಆರ್‌ಎಸ್ ಸಂಸದ ದಾನಂ ನಾಗೇಂದ್ರ ಕೂಡ ಭಾನುವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಎಐಸಿಸಿ ಉಸ್ತುವಾರಿ ದೀಪದಾಸ್ ಮುನ್ಷಿ ಅವರ ಉಪಸ್ಥಿತಿಯಲ್ಲಿ ಪಕ್ಷ ಸೇರ್ಪಡೆ ಸಮಾರಂಭ ನಡೆಯಿತು.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ನಿರ್ಧಾರವನ್ನು ಪ್ರಕಟಿಸಿದ ರೆಡ್ಡಿ, “ನಾನು ಬಿಆರ್‌ಎಸ್ ಪಕ್ಷಕ್ಕೆ ಔಪಚಾರಿಕ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ ಎಂದು ನನ್ನ ಎಲ್ಲಾ ಬೆಂಬಲಿಗರು ಮತ್ತು ಜನರಿಗೆ ತಿಳಿಸಲು ನಾನು ಬರೆಯುತ್ತಿದ್ದೇನೆ. ಬಿಆರ್‌ಎಸ್ ಪಕ್ಷಕ್ಕೆ ನನ್ನ ಕೃತಜ್ಞತೆಯನ್ನು ತಿಳಿಸಲು ಬಯಸುತ್ತೇನೆ. ಚೇವೆಲ್ಲಾ ಕ್ಷೇತ್ರದ ಜನರಿಗೆ ನನ್ನ ಸೇವೆಯಲ್ಲಿ ಅರ್ಥಪೂರ್ಣ ಅವಕಾಶ ಒದಗಿಸಿದೆ ಮತ್ತು ಸಹಕಾರವನ್ನು ನೀಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಬಿಬಿ ಪಾಟೀಲ್ ಮತ್ತು ಪೋತುಗಂಟಿ ರಾಮುಲು ನಂತರ ಬಿಆರ್‌ಎಸ್ ತೊರೆದ ಮತ್ತೊಬ್ಬ ಸಂಸದ ರಂಜಿತ್ ರೆಡ್ಡಿ. ಇದಕ್ಕೂ ಮುನ್ನ ಗುರುವಾರ ಮತ್ತು ಶುಕ್ರವಾರ ಕ್ರಮವಾಗಿ ಪಾಟೀಲ್ ಮತ್ತು ರಾಮುಲು ಬಿಜೆಪಿಗೆ ಸೇರ್ಪಡೆಗೊಂಡರು. ಶನಿವಾರ ವಾರಂಗಲ್ ಸಂಸದ ಪಸುನೂರಿ ದಯಾಕರ್ ಕೂಡ ಬಿಆರ್ ಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಅವರ ಬಂಧನದ ಮಧ್ಯೆ ಇತ್ತೀಚಿನ ವಾರಗಳಲ್ಲಿ ಅನೇಕ ಬಿಆರ್‌ಎಸ್ ಸಂಸದರು ಪಕ್ಷವನ್ನು ತೊರೆದಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಆರ್‌ಎಸ್ ಅನ್ನು ಸೋಲಿಸಿದ ನಂತರ, ಹಲವಾರು ಮಾಜಿ ಸಚಿವರು ಮತ್ತು ಶಾಸಕರು ಬಿಆರ್‌ಎಸ್ ತೊರೆದು ಆಡಳಿತ ಪಕ್ಷಕ್ಕೆ ಸೇರಿದರು.

ಸಂಸದ ದಯಾಕರ್ ಕಾಂಗ್ರೆಸ್ ಸೇರ್ಪಡೆ:

ವಾರಂಗಲ್ ಸಂಸದ ದಯಾಕರ್ ಅವರು ಶನಿವಾರ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಹೇಶ್ ಕುಮಾರ್ ಗೌಡ, ರಾಜ್ಯ ಅರಣ್ಯ ಸಚಿವ ಕೊಂಡ ಸುರೇಖಾ ಮತ್ತು ಇತರ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಎಂದು ಪಕ್ಷವು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಪಕ್ಷದ ನೇತೃತ್ವದ ಯಾವುದೇ ಚಳುವಳಿಗಳಿಗೆ ಸಂಬಂಧವಿಲ್ಲದಿದ್ದರೂ ಸಹ ವಾರಂಗಲ್ ಕ್ಷೇತ್ರಕ್ಕೆ ಮಾಜಿ ಸಚಿವ ಕಡಿಯಂ ಶ್ರೀಹರಿ ಅವರ ಪುತ್ರಿ ಡಾ.ಕಡಿಯಂ ಕಾವ್ಯ ಅವರನ್ನು ಬಿಆರ್‌ಎಸ್ ನಾಮನಿರ್ದೇಶನ ಮಾಡಿದೆ ಎಂದು ದಯಾಕರ್ ಹೇಳಿದರು. ತೆಲಂಗಾಣ ಜನರಿಗಾಗಿ ಕೆಲಸ ಮಾಡಲು ಕಾಂಗ್ರೆಸ್ ಅನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ದಯಾಕರ್, ಕಳೆದ 23 ವರ್ಷಗಳಿಂದ ತೆಲಂಗಾಣ ಚಳವಳಿಯಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಎರಡು ಬಾರಿ ಸಂಸದನಾಗಿಯೂ ಗೆದ್ದಿದ್ದೇನೆ. ನಾನು ಕಾಂಗ್ರೆಸ್ ಸರ್ಕಾರದ ಬದಲಾವಣೆ ಮತ್ತು ಆರು ಗ್ಯಾರಂಟಿಗಳ ಅನುಷ್ಠಾನವನ್ನು ಗಮನಿಸಿದ್ದೇನೆ. ಹಾಗಾಗಿ, ತೆಲಂಗಾಣದ ಜನರಿಗಾಗಿ ಕೆಲಸ ಮಾಡಲು ನಾನು ಆಸಕ್ತಿ ಹೊಂದಿದ್ದೇನೆ. ಕಾಂಗ್ರೆಸ್ ಸರ್ಕಾರ ಸಾರ್ವಜನಿಕ ಆಡಳಿತ ನೀಡುತ್ತಿದೆ. ಜನರು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟಿದ್ದಾರೆ’ ಎಂದರು.

“ನಾನು ಕಳೆದ 13 ವರ್ಷಗಳಿಂದ ಬಿಆರ್‌ಎಸ್‌ನಲ್ಲಿದ್ದೇನೆ ಮತ್ತು ಯಾವುದೇ ಚಳವಳಿಗೆ ಸಂಬಂಧವಿಲ್ಲದ ಕಡಿಯಂ ಶ್ರೀಹರಿ ಅವರ ಮಗಳಿಗೆ ಸಂಸದ ಟಿಕೆಟ್ ನೀಡಲಾಗಿದೆ. ಸಂಸದನಾಗಿ ನನಗೆ ಪ್ರೋಟೋಕಾಲ್ ನೀಡಿಲ್ಲ ಮತ್ತು ಇದು ನನಗೆ ಮಾಡಿದ ಅವಮಾನ. ಎಲ್ಲಾ ಘಟನೆಗಳೊಂದಿಗೆ ನಾನು ಬಿಆರ್‌ಎಸ್ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದೇನೆ” ಎಂದರು.

ಇದನ್ನೂ ಓದಿ; ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಆಯೋಗದ ನಿಷ್ಠೆ ಗೋಚರಿಸುತ್ತದೆ: ಕಪಿಲ್ ಸಿಬಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...