Homeಮುಖಪುಟತಮಿಳುನಾಡು: ’ನಿವಾರ್’ ನಿವಾರಣೆಯಾಗುವ ಮೊದಲೇ ಬುರೆವಿ ಚಂಡಮಾರುತ ಸಿದ್ದ!

ತಮಿಳುನಾಡು: ’ನಿವಾರ್’ ನಿವಾರಣೆಯಾಗುವ ಮೊದಲೇ ಬುರೆವಿ ಚಂಡಮಾರುತ ಸಿದ್ದ!

’ಡಿಸೆಂಬರ್ 2 ರಂದು ಬುರೆವಿ ಚಂಡಮಾರುತ ತಮಿಳುನಾಡು-ಪುದುಚೇರಿ ತೀರವನ್ನು ತಲುಪುವ ಸಾಧ್ಯತೆಯಿದೆ’

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಅಪ್ಪಳಿಸಿದ್ದ ನಿವಾರ್ ಚಂಡಮಾರುತ, ತಮಿಳುನಾಡು, ಪುದುಚೇರಿಗಳಲ್ಲಿ ಭಾರಿ ಅನಾಹುತಕ್ಕೆ ಕಾರಣವಾಗಿದೆ. ಹಲವು ಸಾವು ನೋವುಗಳಿಗೆ ಕಾರಣವಾಗಿ ಸರ್ಕಾರದ ಬೊಕ್ಕಸಕ್ಕೆ ಮತ್ತಷ್ಟು ಹೊರೆಯಾಗಿದೆ. ಈ ಹೊಡೆತದಿಂದ ನಿಟ್ಟುಸುರು ಬಿಡುವ ಮೊದಲೇ ಮತ್ತೊಂದು ಚಂಡಮಾರುತ ಅಪ್ಪಳಿಸಲು ಸಿದ್ದವಾಗಿದೆ.

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗಿದ್ದು, ಅದು ದೊಡ್ಡ ಮಟ್ಟಕ್ಕೆ ಬೆಳೆದರೆ, ಡಿಸೆಂಬರ್ 2 ರಂದು ಮತ್ತೆ ತಮಿಳುನಾಡು ಮತ್ತು ಪುದುಚೇರಿ ಕರಾವಳಿ ಭಾಗಗಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಚಂಡಮಾರುತಕ್ಕೆ ‘ಬುರೆವಿ’ ಎಂದು ಹೆಸರಿಡಲಾಗಿದೆ.

ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಒತ್ತಡವುಂಟಾಗಿ ಚಂಡಮಾರುತ ಸೃಷ್ಟಿಯಾಗಲಿದ್ದು, ಅದು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ತಮಿಳುನಾಡು ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಇದನ್ನೂ ಓದಿ: ತಮಿಳುನಾಡು: ನಿವಾರ್‌ ಸಂತ್ರಸ್ತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ 

“ಬಂಗಾಳದ ಆಗ್ನೇಯ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಪ್ರದೇಶಗಳಲ್ಲಿ ವಾಯುಭಾರ ಕುಸಿತದಿಂದ ಒತ್ತಡವುಂಟಾಗುವ ಸಾಧ್ಯತೆಯಿದೆ. ಇದು ಮುಂದಿನ 48 ಗಂಟೆಗಳಲ್ಲಿ ಕೇಂದ್ರೀಕರಿಸುತ್ತದೆ ಜೊತೆಗೆ ಮತ್ತಷ್ಟು ತೀವ್ರಗೊಂಡು, ಪಶ್ಚಿಮ ದಿಕ್ಕಿಗೆ ತೆರಳಿ ಡಿಸೆಂಬರ್ 2 ರಂದು ತಮಿಳುನಾಡು-ಪುದುಚೇರಿ ತೀರವನ್ನು ತಲುಪುವ ಸಾಧ್ಯತೆಯಿದೆ ”ಎಂದು ಪ್ರಾಧಿಕಾರ ತಿಳಿಸಿದೆ.

ಆದರೆ ಬುರೆವಿ ಚಂಡಮಾರುತದ ಪ್ರಭಾವ ಎಷ್ಟರಮಟ್ಟಿಗೆ ತ್ರೀವ್ರವಾಗಿರಲಿದೆ ಎಂದು ತಿಳಿದುಬಂದಿಲ್ಲ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ಚಂಡಮಾರುತದ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಬುರೆವಿ ಚಂಡಮಾರುತ ದುರ್ಬಲವಾಗಿದ್ದರೂ ಕೂಡ ಡಿ. 1 (ನಾಳೆ) ಮತ್ತು 2ರಂದು ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಚೆನ್ನೈ, ಕಡಲೂರು, ಚೆಂಗಲ್ಪಟ್ಟು, ವೆಲ್ಲೂರು ಮತ್ತು ನಾಗಪಟ್ಟಣಂ ಸೇರಿದಂತೆ 18 ನಿವಾರ್ ಚಂಡಮಾರುತ ಪೀಡಿತ ಜಿಲ್ಲೆಗಳಲ್ಲಿ, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಜೊತೆಗೆ ನೂರಾರು ಜಾನುವಾರುಗಳನ್ನು ಚಂಡಮಾರುತ ಬಲಿ ಪಡೆದಿದೆ. 2,064 ಮರಗಳು ಧರೆಗುರುಳಿದ್ದು, ಇದರಿಂದ ಇದು ಸುಮಾರು 108 ವಿದ್ಯುತ್ ಪರಿವರ್ತಕಗಳಿಗೆ ಮತ್ತು 2,927 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ಸಿಎಂ ಪಳನಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದರು.

ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದ್ದರೇ, ರಾಜ್ಯ ಸರ್ಕಾರ ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.


ಇದನ್ನೂ ಓದಿ:ದೆಹಲಿ ಚಲೋ: ‌ಅನ್ನದಾತರಿಗೆ ಆತಿಥ್ಯ ನೀಡಿದ ರಾಷ್ಟ್ರ ರಾಜಧಾನಿಯ 25 ಮಸೀದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...