Homeಮುಖಪುಟಐಐಟಿ ಮದ್ರಾಸ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆ*ಹತ್ಯೆ; ವರ್ಷದಲ್ಲಿ ನಾಲ್ಕನೇ ಪ್ರಕರಣ

ಐಐಟಿ ಮದ್ರಾಸ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆ*ಹತ್ಯೆ; ವರ್ಷದಲ್ಲಿ ನಾಲ್ಕನೇ ಪ್ರಕರಣ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮದ್ರಾಸ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಯೊಬ್ಬ ಶುಕ್ರವಾರ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಫೆಬ್ರವರಿಯಿಂದ ಇಲ್ಲಿಯವರೆಗೆ ಸದರಿ ಸಂಸ್ಥೆಯಲ್ಲಿ ಘಟಿಸಿರುವ ನಾಲ್ಕನೇ ಪ್ರಕರಣ ಇದಾಗಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ ದಾಖಲಿಸಿಕೊಂಡಿದ್ದು, ಡೆತ್‌ನೋಟ್‌ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಹಿಂದಿನ ಮೂರು ಪ್ರಕರಣಗಳಲ್ಲಿಯೂ ಸಹ ವಿದ್ಯಾರ್ಥಿಗಳು ಡೆತ್‌ನೋಟ್‌ಗಳನ್ನು ಬಿಟ್ಟು ಹೋಗಿದ್ದಾರೆ” ಎಂದು ತನಿಖಾಧಿಕಾರಿಯೊಬ್ಬರು ‘ಹಿಂದೂಸ್ತಾನ್ ಟೈಮ್ಸ್‌’ಗೆ ತಿಳಿಸಿದ್ದಾರೆ.

ಈ ವರ್ಷ ಐಐಟಿ-ಮದ್ರಾಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ನಾಲ್ಕನೇ ವಿದ್ಯಾರ್ಥಿ ಪ್ರಕರಣ ಇದಾಗಿದೆ. 2018ರಿಂದ 11 ಪ್ರಕರಣಗಳು ಇಲ್ಲಿ ಘಟಿಸಿವೆ. ಮಾರ್ಚ್ 31ರಂದು ಸಂಶೋಧನಾ ವಿದ್ಯಾರ್ಥಿ ಸಚಿನ್ ಕುಮಾರ್ ಜೈನ್ ಅವರು ತಮ್ಮ ವಾಟ್ಸ್‌ಅಪ್‌ನಲ್ಲಿ “ನನ್ನನ್ನು ಕ್ಷಮಿಸಿ, ಸರಿಯಾಗಿಲ್ಲ. ಸಾಕು” ಎಂದು ಅಪ್‌ಡೇಟ್‌ ಮಾಡಿ ಸಾವಿಗೆ ಶರಣಾಗಿದ್ದರು.

ಮಾರ್ಚ್ 14 ರಂದು ಇನ್ಸ್‌ಟಿಟ್ಯೂಟ್‌ನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಫೆಬ್ರವರಿ 13ರಂದು, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ತನ್ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದನು.

ಐಐಟಿ-ಮದ್ರಾಸ್ ಶುಕ್ರವಾರ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ವಿದ್ಯಾರ್ಥಿಯು ತನ್ನ ಹಾಸ್ಟೆಲ್ ಕೋಣೆಯಲ್ಲಿ ಮಧ್ಯಾಹ್ನ ನಿಧನರಾಗಿದ್ದಾರೆಂದು ಹಂಚಿಕೊಳ್ಳಲು ದುಃಖವಾಗುತ್ತಿದೆ” ಎಂದಿದೆ.

“ಸಂಸ್ಥೆಯು ತನ್ನದೇ ಆದ ಒಬ್ಬರನ್ನು ಕಳೆದುಕೊಂಡಿದೆ ಮತ್ತು ವೃತ್ತಿಪರ ಸಮುದಾಯವು ಉತ್ತಮ ವಿದ್ಯಾರ್ಥಿಯನ್ನು ಕಳೆದುಕೊಂಡಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದೆ.

“ಪೋಷಕರಿಗೆ ಮಾಹಿತಿ ನೀಡಲಾಗಿದೆ. ಐಐಟಿ ಮದ್ರಾಸ್, ಒತ್ತಡದಲ್ಲಿರುವ ವಿದ್ಯಾರ್ಥಿಗಳನ್ನು ಪೂರ್ವಭಾವಿಯಾಗಿ ಗುರುತಿಸಲು ಮತ್ತು ಸಹಾಯ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಾವು ಈ ಕ್ರಮಗಳನ್ನು ಹೆಚ್ಚಿಸಲು ಮುಂದಾಗಿದ್ದೇವೆ” ಎಂದು ಹೇಳಿದೆ.

ಸಂಸ್ಥೆಯು ‘ಹ್ಯಾಪಿನೆಸ್‌ ವೆಬ್‌ಸೈಟ್’ ಅನ್ನು ಪ್ರಾರಂಭಿಸಿದೆ ಮತ್ತು ವಿದ್ಯಾರ್ಥಿಗಳ ಕ್ಷೇಮವನ್ನು ವಿಚಾರಿಸುತ್ತಿದೆ ಎಂದು ಐಐಟಿ-ಎಂ ನಿರ್ದೇಶಕ ವಿ ಕಾಮಕೋಟಿ ಹೇಳಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.

“ಕೋವಿಡ್ -19ರ ನಂತರ ಕ್ಯಾಂಪಸ್ ಅನ್ನು ಪುನಾರಂಭಿಸಿದಾಗ, ನಮಗೆ ನಾವು ಊಹಿಸಲಾಧ್ಯವಾದಂತಹ ಸಂಖ್ಯೆಯ ದುರದೃಷ್ಟಕರ ಘಟನೆಗಳು ಎದುರಾಗಿವೆ” ಎಂದು ಐಐಟಿ-ಮದ್ರಾಸ್‌ನ 64ನೇ ಇನ್‌ಸ್ಟಿಟ್ಯೂಟ್‌ ದಿನದಂದು ಕಾಮಕೋಟಿ ಹೇಳಿದ್ದರು.

“ವಿದ್ಯಾರ್ಥಿಗಳನ್ನು, ವಿಶೇಷವಾಗಿ ಖಿನ್ನತೆಗೆ ಒಳಗಾದ ಅಥವಾ ಒತ್ತಡಕ್ಕೊಳಗಾದವರನ್ನು ಮೇಲ್ವಿಚಾರಣೆ ಮಾಡಲು ವ್ಯವಸ್ಥೆಯನ್ನು ರೂಪಿಸಬೇಕು. ಈ ವಿಚಾರವಾಗಿ ಶಿಕ್ಷಣ ಸಚಿವಾಲಯ ಕ್ರಮ ವಹಿಸುವಲ್ಲಿ ವಿಫಲವಾಗಿದೆ” ಎಂದು ಹಲವಾರು ಐಐಟಿ ಹಳೆಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...