Homeಮುಖಪುಟಬಂಧನಕ್ಕೊಳಗಾಗಿದ್ದ ಯುವಕನಿಂದ ಸಾಥನ್‌ಕುಳಂ ಪೋಲೀಸರ ಮೇಲೆ ಮತ್ತೊಂದು ಚಿತ್ರಹಿಂಸೆಯ ಆರೋಪ!

ಬಂಧನಕ್ಕೊಳಗಾಗಿದ್ದ ಯುವಕನಿಂದ ಸಾಥನ್‌ಕುಳಂ ಪೋಲೀಸರ ಮೇಲೆ ಮತ್ತೊಂದು ಚಿತ್ರಹಿಂಸೆಯ ಆರೋಪ!

ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುವ ಮೊದಲು ಆಗಸ್ಟ್ 24 ರಿಂದ 28 ರವರೆಗೆ ತನ್ನನ್ನು ಬಂಧನದಲ್ಲಿಡಲಾಗಿತ್ತು ನಂತರ ನಮ್ಮ ವಕೀಲರ ಕೋರಿಕೆಯ ಮೇರೆಗೆ ಜಾಮೀನು ನೀಡಿದ್ದರು ಎಂದು ಮಾರ್ಟಿನ್ ಹೇಳಿದ್ದಾರೆ.

- Advertisement -
- Advertisement -

ತನ್ನನ್ನು ಕೆಲವು ದಿನಗಳ ಕಾಲ ಕಸ್ಟಡಿಯಲ್ಲಿಟ್ಟುಕೊಂಡು ಚಿತ್ರಹಿಂಸೆ ನೀಡಿದ್ದಾರೆ ಎಂದು ಯುವಕನೊಬ್ಬ ಆರೋಪಿಸಿದ್ದು, ಟುಟಿಕೋರಿನ್‌ನ ಸಾಥನ್‌ಕುಳಂ ಪೊಲೀಸರ ಮೇಲೆ ಮತ್ತೊಂದು ಲಾಕಪ್ ದೌರ್ಜನ್ಯದ ಆರೋಪ ಕೇಳಿಬಂದಿದೆ.

ಆಗಸ್ಟ್ 23 ರಂದು ಇನ್ಸ್‌ಪೆಕ್ಟರ್ ಕ್ಸೇವಿಯರ್ ಮತ್ತು ಸಹಾಯಕ ಇನ್ಸ್‌ಪೆಕ್ಟರ್ ರಾಜಾ ಅವರು ತನ್ನನ್ನು ಥಳಿಸಿ ನಂತರ ಪೊಲೀಸ್ ಠಾಣೆಗೆ ಕರೆದುಕೊಂಡು ಹೊದರು ಎಂದು ಸಾಥನ್‌ಕುಳಂನ ತೈಕ್ಕಾ ಬೀದಿಯ ನಿವಾಸಿ ಮಾರ್ಟಿನ್ ಆರೋಪಿಸಿದ್ದಾರೆ.

ಥಳಿತದಿಂದ ಗಾಯಗೊಂಡ ತನ್ನನ್ನು, ಮರುದಿನ ತೂತುಕುಡಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು.

ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುವ ಮೊದಲು ಆಗಸ್ಟ್ 24 ರಿಂದ 28 ರವರೆಗೆ ತನ್ನನ್ನು ಬಂಧನದಲ್ಲಿಡಲಾಗಿತ್ತು. ನಂತರ ನಮ್ಮ ವಕೀಲರ ಕೋರಿಕೆಯ ಮೇರೆಗೆ ಜಾಮೀನು ನೀಡಿದ್ದರು ಎಂಬುದಾಗಿ ಮಾರ್ಟಿನ್ ಹೇಳಿದ್ದಾರೆ ಎಂದು ದಿ ಫೆಡರಲ್ ವರದಿ ಮಾಡಿದೆ.

ಆತನಿಗೆ ಚಿತ್ರಹಿಂಸೆ ನೀಡಿದ್ದಕ್ಕಾಗಿ, ಅದರಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಮಾರ್ಟಿನ್ ಅವರ ಕುಟುಂಬವು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌: ಎರಡು ಪ್ರಕರಣಗಳನ್ನು ದಾಖಲಿಸಿದ ಸಿಬಿಐ

ತೂತುಕುಡಿಯ ಸಾಥನ್‌ಕುಳಂ ಠಾಣೆಯ ಪೊಲೀಸರು ಜಯರಾಜ್ ಹಾಗೂ ಅವರ ಮಗ ಫೆನಿಕ್ಸ್ ಎಂಬುವವರನ್ನು ‘ಮೊಬೈಲ್ ಅಂಗಡಿಯನ್ನು ಸಮಯಮೀರಿ ತೆರೆದಿದ್ದರು’ ಎಂಬ ಆರೋಪದಲ್ಲಿ ಬಂಧಿಸಲಾಗಿತ್ತು. ಅವರಿಬ್ಬರು ಮೂರು ದಿನಗಳ ನಂತರ ಪೊಲೀಸ್ ಠಾಣೆಯಿಂದ 100 ಕಿ.ಮೀ. ದೂರದ ಕೋವಿಲ್ಪಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು.

ಆದರೆ ಜಯರಾಜ್ ಪತ್ನಿ ಸೆಲ್ವಮಣಿ ಪೊಲೀಸರ ದೌರ್ಜನ್ಯದಿಂದ ತನ್ನ ಪತಿ ಹಾಗೂ ಮಗ ಸಾವಿಗೀಡಾಗಿದ್ದಾರೆ ಎಂದು ದೂರು ನೀಡಿದ್ದು, ಈ ಸಾವಿನ ಬಗ್ಗೆ ತಮಿಳುನಾಡಿನಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮದ್ರಾಸ್ ಹೈಕೋರ್ಟಿನ ಮಧುರೈ ನ್ಯಾಯಪೀಠ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು.

ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರ ದೌರ್ಜನ್ಯಕ್ಕೆ ಸಾಕ್ಷಿಯಾಗಿದ್ದವು. ಹಾಗಾಗಿ ಕೆಲ ಪೊಲೀಸರನ್ನು ಅಮಾನತ್ತು ಮಾಡಲಾಗಿತ್ತು. ಅದರಲ್ಲಿ ಒಪ್ಪ ಪೊಲೀಸ್ ಕೊರೊನಾ ಸೋಂಕಿಗೆ ಬಲಿಯಾಗಿದ್ದರು.

ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ತಂದೆ ಮಗನ ಲಾಕಪ್ ಡೆತ್ ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹಾಗಾಗಿ ಈ ಪ್ರಕರಣವನ್ನು ಶೀಘ್ರದಲ್ಲೇ ಸಿಬಿಐಗೆ ತನಿಖೆಗಾಗಿ ಹಸ್ತಾಂತರಿಸಲಾಗಿತ್ತು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...