Homeಮುಖಪುಟಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ: 6 ಕಾರ್ಮಿಕರ ಸಾವು!

ಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ: 6 ಕಾರ್ಮಿಕರ ಸಾವು!

- Advertisement -
- Advertisement -

ಕಳೆದ ಶುಕ್ರವಾರ ಒಡಿಶಾದಲ್ಲಿ ನಡೆದಿದ್ದ ಭೀಕರ ತ್ರಿವಳಿ ರೈಲು ದುರಂತದ ಘಟನಾ ಸ್ಥಳದ ಸನಿಹವೇ ಮತ್ತೊಂದು ರೈಲು ದುರಂತ ಬುಧವಾರ ಸಂಭವಿಸಿದ್ದು ಆರು ಕಾರ್ಮಿಕರು ಸಾವಿಗೀಡಾಗಿದ್ದಾರೆ.

ಒಡಿಶಾದ ಜಾಜ್‌ಪು‌ ಜಿಲ್ಲೆಯ ಜಾಜ್‌ಪುರ್ ಕಿಯೋಂಜಾರ್‌ ರಸ್ತೆ ರೈಲು ನಿಲ್ದಾಣದ ಬಳಿ ಬುಧವಾರ ಮಧ್ಯಾಹ್ನ ಸರಕು ಸಾಗಣೆ ರೈಲೊಂದು ಹರಿದು 6 ಕಾರ್ಮಿಕರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ”ದಿಢೀರ್‌ನೇ ಗುಡುಗು-ಮಿಂಚು ಸಹಿತ ಮಳೆ ಪ್ರಾರಂಭವಾಗಿದ್ದರಿಂದ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರು ಆಶ್ರಯ ಪಡೆಯಲು ಸರಕು ಸಾಗಣೆ ರೈಲಿನ ಕೆಳಗೆ ನಿಂತಿದ್ದರು. ಈ ವೇಳೆ ರೈಲು ಚಲಿಸಿದ್ದರಿಂದ ಕೆಳಗೆ ಸಿಲುಕಿ 6 ಕಾರ್ಮಿಕರು ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಆ ಭಾಗದ ಹಿರಿಯ ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತ ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಒಡಿಶಾದ ಬಾಲೇಶ್ವರ ರೈಲು ದುರಂತದಲ್ಲಿ ಕನಿಷ್ಠ 288 ಜನ ಮೃತಪಟ್ಟು ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ದುರಂತ ನಡೆದು ಐದು ದಿನಗಳ ನಂತರ ಮತ್ತೊಂದು ಘಟನೆ ನಡೆದಿದೆ. ಸುಡುವ ಶಾಖದ ಹೊರತಾಗಿಯೂ, ರೈಲುಗಳ ಅಪಘಾತದಲ್ಲಿ ಸಿಲುಕಿದ ಕೊಳೆತ ಅವಶೇಷಗಳನ್ನು ನೋಡಲು ಜನರು ಸ್ಥಳಕ್ಕೆ ಆಗಮಿಸಿದ್ದಾರೆ.

ಇದನ್ನೂ ಓದಿ: ಒಡಿಶಾ ರೈಲು ಅಪಘಾತದಲ್ಲಿ ಸತ್ತವರ ಸಂಖ್ಯೆ 500 ರಷ್ಟಿದೆ, ಆದರೆ ಕೇಂದ್ರ ಕಡಿಮೆ ಲೆಕ್ಕ ತೋರಿಸುತ್ತಿದೆ: ಮಮತಾ ಬ್ಯಾನರ್ಜಿ ಆರೋಪ

ಒಡಿಶಾದ ಬಾಲೇಶ್ವರ ರೈಲು ದುರಂತ ಸಂಭವಿಸಿದ್ದು ಹೇಗೆ?

ಒಡಿಶಾದ ಬಾಲೇಶ್ವರ ಜಿಲ್ಲೆಯ ಬಹನಾಗಾ ನಿಲ್ದಾಣದ ಬಳಿ ನಡೆದ ಭೀಕರ ರೈಲು ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈವರೆಗೆ ಅಧಿಕೃತ ಮಾಹಿತಿಯ ಪ್ರಕಾರ ಕನಿಷ್ಠ 288 ಮಂದಿ ಸಾವನ್ನಪ್ಪಿದ್ದಾರೆ. 900ಕ್ಕೂ ಅಧಿಕ ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಲ್ಲಮೂಲಗಳ ಪ್ರಕಾರ ಗಾಯಾಳುಗಳ ಪೈಕಿ ಕನಿಷ್ಠ 100 ಜನರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಇತ್ತ ಸಾವಿನ ಸಂಖ್ಯೆ ಕೂಡ 300ರ ಗಡಿ ದಾಟುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈಗಲೂ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, 200 ಆಂಬುಲೆನ್ಸ್‌ಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿವೆ. 50 ಮೊಬೈಲ್ ಕ್ಲಿನಿಕ್ ಸೇರಿದಂತೆ ನೂರಾರು ಆರೋಗ್ಯ ಸಿಬ್ಬಂದಿ ಸ್ಥಳದಲ್ಲೇ ತುರ್ತು ಸೇವೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರಿನಿಂದ ಹೊರಟಿದ್ದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್‌ ರೈಲು, ಶಾಲಿಮಾರ್ ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ ಮತ್ತು ಗೂಡ್ಸ್ ರೈಲುಗಳ ಮಧ್ಯೆ ಈ ಅಫಘಾತ ಸಂಭವಿಸಿದೆ. ಒಡಿಶಾದ ಬಾಲಸೋರ್‌ ಜಿಲ್ಲೆಯ ಬಹನಾಗಾ ನಿಲ್ದಾಣದ ಬಳಿ ನಿನ್ನೆ ಸಂಜೆ ಏಳು ಗಂಟೆ ಸುಮಾರಿಗೆ ಈ ಭೀಕರ ದುರಂತ ಸಂಭವಿಸಿದೆ.

ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಹೇಳುವ ಪ್ರಕಾರ, ಒಡಿಶಾದ ಬಾಲೇಶ್ವರ ಬಳಿ ನಿಲ್ಲಿಸಿದ್ದ ಗೂಡ್ಸ್‌ ರೈಲಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿ 10-12 ಬೋಗಿಗಳು ಹಳಿತಪ್ಪಿ ಎದುರಿನ ಹಳಿಯಲ್ಲಿ ಬಿದ್ದಿತ್ತು. ಕೆಲವೇ ನಿಮಿಷಗಳ ನಂತರ ಅದೇ ಹಳಿಯಲ್ಲಿ ಯಶವಂತಪುರದಿಂದ ಹೌರಾಕ್ಕೆ ಮತ್ತೊಂದು ಸೂಪರ್‌ಫಾಸ್ಟ್‌ ರೈಲು ಬಂದಿದೆ. ಆದರೆ ಅಪಘಾತ ಸಂಭವಿಸಿದ ವಿಷಯ ತಿಳಿಯದ ಕಾರಣ, ಆಗಲೇ ಹಳಿತಪ್ಪಿದ ಬೋಗಿಗಳಿಗೆ ಯಶವಂತಪುರ-ಹೌರಾ ರೈಲು ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...