Homeಮುಖಪುಟಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ: 6 ಕಾರ್ಮಿಕರ ಸಾವು!

ಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ: 6 ಕಾರ್ಮಿಕರ ಸಾವು!

- Advertisement -
- Advertisement -

ಕಳೆದ ಶುಕ್ರವಾರ ಒಡಿಶಾದಲ್ಲಿ ನಡೆದಿದ್ದ ಭೀಕರ ತ್ರಿವಳಿ ರೈಲು ದುರಂತದ ಘಟನಾ ಸ್ಥಳದ ಸನಿಹವೇ ಮತ್ತೊಂದು ರೈಲು ದುರಂತ ಬುಧವಾರ ಸಂಭವಿಸಿದ್ದು ಆರು ಕಾರ್ಮಿಕರು ಸಾವಿಗೀಡಾಗಿದ್ದಾರೆ.

ಒಡಿಶಾದ ಜಾಜ್‌ಪು‌ ಜಿಲ್ಲೆಯ ಜಾಜ್‌ಪುರ್ ಕಿಯೋಂಜಾರ್‌ ರಸ್ತೆ ರೈಲು ನಿಲ್ದಾಣದ ಬಳಿ ಬುಧವಾರ ಮಧ್ಯಾಹ್ನ ಸರಕು ಸಾಗಣೆ ರೈಲೊಂದು ಹರಿದು 6 ಕಾರ್ಮಿಕರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ”ದಿಢೀರ್‌ನೇ ಗುಡುಗು-ಮಿಂಚು ಸಹಿತ ಮಳೆ ಪ್ರಾರಂಭವಾಗಿದ್ದರಿಂದ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರು ಆಶ್ರಯ ಪಡೆಯಲು ಸರಕು ಸಾಗಣೆ ರೈಲಿನ ಕೆಳಗೆ ನಿಂತಿದ್ದರು. ಈ ವೇಳೆ ರೈಲು ಚಲಿಸಿದ್ದರಿಂದ ಕೆಳಗೆ ಸಿಲುಕಿ 6 ಕಾರ್ಮಿಕರು ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಆ ಭಾಗದ ಹಿರಿಯ ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತ ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಒಡಿಶಾದ ಬಾಲೇಶ್ವರ ರೈಲು ದುರಂತದಲ್ಲಿ ಕನಿಷ್ಠ 288 ಜನ ಮೃತಪಟ್ಟು ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ದುರಂತ ನಡೆದು ಐದು ದಿನಗಳ ನಂತರ ಮತ್ತೊಂದು ಘಟನೆ ನಡೆದಿದೆ. ಸುಡುವ ಶಾಖದ ಹೊರತಾಗಿಯೂ, ರೈಲುಗಳ ಅಪಘಾತದಲ್ಲಿ ಸಿಲುಕಿದ ಕೊಳೆತ ಅವಶೇಷಗಳನ್ನು ನೋಡಲು ಜನರು ಸ್ಥಳಕ್ಕೆ ಆಗಮಿಸಿದ್ದಾರೆ.

ಇದನ್ನೂ ಓದಿ: ಒಡಿಶಾ ರೈಲು ಅಪಘಾತದಲ್ಲಿ ಸತ್ತವರ ಸಂಖ್ಯೆ 500 ರಷ್ಟಿದೆ, ಆದರೆ ಕೇಂದ್ರ ಕಡಿಮೆ ಲೆಕ್ಕ ತೋರಿಸುತ್ತಿದೆ: ಮಮತಾ ಬ್ಯಾನರ್ಜಿ ಆರೋಪ

ಒಡಿಶಾದ ಬಾಲೇಶ್ವರ ರೈಲು ದುರಂತ ಸಂಭವಿಸಿದ್ದು ಹೇಗೆ?

ಒಡಿಶಾದ ಬಾಲೇಶ್ವರ ಜಿಲ್ಲೆಯ ಬಹನಾಗಾ ನಿಲ್ದಾಣದ ಬಳಿ ನಡೆದ ಭೀಕರ ರೈಲು ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈವರೆಗೆ ಅಧಿಕೃತ ಮಾಹಿತಿಯ ಪ್ರಕಾರ ಕನಿಷ್ಠ 288 ಮಂದಿ ಸಾವನ್ನಪ್ಪಿದ್ದಾರೆ. 900ಕ್ಕೂ ಅಧಿಕ ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಲ್ಲಮೂಲಗಳ ಪ್ರಕಾರ ಗಾಯಾಳುಗಳ ಪೈಕಿ ಕನಿಷ್ಠ 100 ಜನರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಇತ್ತ ಸಾವಿನ ಸಂಖ್ಯೆ ಕೂಡ 300ರ ಗಡಿ ದಾಟುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈಗಲೂ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, 200 ಆಂಬುಲೆನ್ಸ್‌ಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿವೆ. 50 ಮೊಬೈಲ್ ಕ್ಲಿನಿಕ್ ಸೇರಿದಂತೆ ನೂರಾರು ಆರೋಗ್ಯ ಸಿಬ್ಬಂದಿ ಸ್ಥಳದಲ್ಲೇ ತುರ್ತು ಸೇವೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರಿನಿಂದ ಹೊರಟಿದ್ದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್‌ ರೈಲು, ಶಾಲಿಮಾರ್ ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ ಮತ್ತು ಗೂಡ್ಸ್ ರೈಲುಗಳ ಮಧ್ಯೆ ಈ ಅಫಘಾತ ಸಂಭವಿಸಿದೆ. ಒಡಿಶಾದ ಬಾಲಸೋರ್‌ ಜಿಲ್ಲೆಯ ಬಹನಾಗಾ ನಿಲ್ದಾಣದ ಬಳಿ ನಿನ್ನೆ ಸಂಜೆ ಏಳು ಗಂಟೆ ಸುಮಾರಿಗೆ ಈ ಭೀಕರ ದುರಂತ ಸಂಭವಿಸಿದೆ.

ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಹೇಳುವ ಪ್ರಕಾರ, ಒಡಿಶಾದ ಬಾಲೇಶ್ವರ ಬಳಿ ನಿಲ್ಲಿಸಿದ್ದ ಗೂಡ್ಸ್‌ ರೈಲಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿ 10-12 ಬೋಗಿಗಳು ಹಳಿತಪ್ಪಿ ಎದುರಿನ ಹಳಿಯಲ್ಲಿ ಬಿದ್ದಿತ್ತು. ಕೆಲವೇ ನಿಮಿಷಗಳ ನಂತರ ಅದೇ ಹಳಿಯಲ್ಲಿ ಯಶವಂತಪುರದಿಂದ ಹೌರಾಕ್ಕೆ ಮತ್ತೊಂದು ಸೂಪರ್‌ಫಾಸ್ಟ್‌ ರೈಲು ಬಂದಿದೆ. ಆದರೆ ಅಪಘಾತ ಸಂಭವಿಸಿದ ವಿಷಯ ತಿಳಿಯದ ಕಾರಣ, ಆಗಲೇ ಹಳಿತಪ್ಪಿದ ಬೋಗಿಗಳಿಗೆ ಯಶವಂತಪುರ-ಹೌರಾ ರೈಲು ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...