Homeಕರ್ನಾಟಕಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

ಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

- Advertisement -
- Advertisement -

ವಿಧಾನಸೌಧದಲ್ಲಿ ರಂಪಾಟ, ಕೊಳಕು ರಾಜಕಾರಣದ ಮೇಲಾಟ
ರಾಜಕಾರಣಿಗಳ ನಡೆನುಡಿಗಳು ಪ್ರಜಾಪ್ರಭುತ್ವದ ಒಳಚರಂಡಿಗಳಿದ್ದಂತೆ ಎಂದು ಖ್ಯಾತ ಪತ್ರಕರ್ತ ಪಿ. ಲಂಕೇಶ್ ರವರು ಹೇಳಿದ್ದರು. ಇವತ್ತು ಈ ಚರಂಡಿ ನೀರು ವಿಧಾನಸೌಧದ ಕಾರಿಡಾರಿನಲ್ಲೇ ಹರಿದಿದೆ. ಅದು ಇಷ್ಟು ದಿನ ಇರಲಿಲ್ಲ ಎಂದಲ್ಲ, ಕಳೆದ ಒಂದು ವರ್ಷದಿಂದ ಕೊಳಚೆ ಪ್ರಜಾಪ್ರಭುತ್ವವನ್ನು ಮಲೀನಗೊಳಿಸುತ್ತಲೇ ಇದೆ.

ಈಗ ಮತ್ತಿಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿವ ಎಂಟಿಬಿ ನಾಗರಾಜ್ ಮತ್ತು ಚಿಕ್ಕಬಳ್ಳಾಪುರ ಶಾಸಕ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ ಸುಧಾಕರ್ ಸ್ಪೀಕರ್ ರಮೇಶಕುಮಾರ್ ಅವರ ಕೈಗೇ ರಾಜೀನಾಮೆ ಸಲ್ಲಿಸಿದ್ದಾರೆ. ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳಕರ್ ಮತ್ತು ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ಸಲ್ಲಿಸುವ ಸಾಧ್ಯೆ ಇದೆ. ಮೈತ್ರಿಬಣದ ಸಂಖ್ಯೆ ಈಗ 100ರ ಕೆಳಕ್ಕೆ ಇಳಿದು ಎರಡಂಕಿ ತಲುಪುತ್ತಿದೆ.

ಅಧಿಕಾರದ ಹಪಾಹಪಿ ಈಗ ಅಧಃಪತನದ ರಾಜಕಾರಣದ ಆಯಾಮ ಪಡೆದುಕೊಂಡಿದೆ. ಅಲ್ಲಿ ಮುಂಬೈಯಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಸಚಿವರೊಬ್ಬರನ್ನು ಹೀನಾಯವಾಗಿ ನಡೆಸಿಕೊಂಡರೆ, ಇಲ್ಲಿ ವಿಧಾನೌಧದ ಕಾರಿಡಾರಿನಲ್ಲಿ ರಾಜೀನಾಮೆ ಕೊಟ್ಟು ಹೊರಬಂದ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ ಸುಧಾಕರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡುರಾವ್ ಮತ್ತು ಸಚಿವ ಪ್ರಿಯಾಂಕ ಗಾಂಧಿ ಅವರು ವಿಧಾನಸೌಧದ ಕಾರಿಡಾರಿನಲ್ಲೇ ಬಲವಂತದಿಂದ ಕರೆದುಕೊಂಡು ಹೋಗುತ್ತಿರುವ ದೃಶ್ಯವನ್ನು ರಾಜ್ಯದ ಜನತೆ ನೋಡಬೇಕಾಗಿತು. ಅಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಹಾಲಿ ಸಚಿವ ಹಾಲಿ ಸಚಿವ ಯು. ಟಿ. ಖಾದರ್ ಮುಖಾಮುಖಿಯಾದಾಗಲಂತೂ ಬೀದಿರಂಪವೇ ನಡೆಯಿತು.

ಇದು ರಾಜ್ಯ ರಾಜಕೀಯ ಮುಟ್ಟಿರುವ ಅಧಃಪತನ, ಅಸಹ್ಯದ ಸಂಕೇತ ಮಾತ್ರ. ಎಲ್ಲಾ ಮೂರೂ ಪಕ್ಷಗಳು ಅಧಿಕಾರದ ಹಪಾಹಪಿಗೆ ಬಿದ್ದಿದ್ದರ ಪರಿಣಾಮವಿದು. ಸುಧಾಕರ್ ಅವರನ್ನು ಬಲವಂತದಿಂದ ಕರೆದುಕೊಂಡು ಹೋಗುವ ಅತಿರೇಕದ ಘಟನೆ ಇಟ್ಟುಕೊಂಡು ಮಾಧ್ಯಮಗಳು ‘ಛೇ, ಛೇ, ಇದೆಂತಹ ನಾಚಿಕೆಗೇಡು ಎಂದೆಲ್ಲ ಅರಚುತ್ತಿವೆ. ಹೌದು ಇದು ನಾಚಿಕೆಗೇಡೇ.

ಆದರೆ 2018ರಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ಕೂಡಲೇ ಈ ಮಾನಗೇಡಿ ರಾಜಕಾರಣದ ಉದ್ಘಾಟನೆಯಾಗಿತ್ತು. ಆಗ ಬಿಜೆಪಿ ಕೇಂದ್ರ ಸರ್ಕಾರದ ಪರೋಕ್ಷ ನೆರವಿನಿಂದ ರಾಜ್ಯಪಾಲರನ್ನು ಬಳಸಿಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಲು ನಡೆಸಿದ ಅಪ್ರಜಾತಾಂತ್ರಿಕ ನಡೆ ಈ ಮಾಧ್ಯಮಗಳಿಗೆ ಅಸಹ್ಯವಾಗಿ ಕಂಡಿರಲೇ ಇಲ್ಲ. ಅದರ ಬದಲು ಅವು ಜನಾದೇಶದ ಪ್ರಕಾರ ಬಿಜೆಪಿಯೇ ಸರ್ಕಾರ ಮಾಡಬೇಕೆ ಎಂಬ ವಾದವನ್ನು ಸಮರ್ಥಿಸಿಕೊಳ್ಳುವ, ಕೇವಲ 104 ಸದಸ್ಯರ ಬಲವಿದ್ದ ಬಿಜೆಪಿ ಕುದುರೆ ವ್ಯಾಪಾರ ಮಾಡಿ ಬಹುಮತ ಸಾಬೀತು ಮಾಡುವುದೇ ನ್ಯಾಯಯುತ ಎಂಬಂತೆ ವರ್ತಿಸಿದ್ದವು.

ಕಳೆದ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಖುದ್ದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಬಹಿರಂಗವಾಗಿ, ‘ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ನಡೆಯಲು ನಾವು ಬಿಡುವುದಿಲ್ಲ’ ಎಂದು ಯಾವುದೇ ಲಜ್ಜೆ ಇಲ್ಲದೇ ಪ್ರಜಾಪ್ರಭುತ್ವವನ್ನು ಅವಮಾನಿಸಿದಾಗ ಇದೇ ಮಾಧ್ಯಮಗಳು ಅದರ ಬಗ್ಗೆ ಚಕಾರ ಎತ್ತಿರಲಿಲ್ಲ. ರೆಸಾರ್ಟ್ ರಾಜಕಾರಣವನ್ನು ಈ ಮಾಧ್ಯಮಗಳು ವೈಭವೀಕರಿಸಿದವೇ ಹೊರತು ಅವು ಜನತೆಗೆ ಬಗೆದ ದ್ರೋಹ ಎಂದು ಜನರ ಮುಂದೆ ಇಡಲೇ ಇಲ್ಲ.

ಹೀಗಾಗಿ ಇವತ್ತು ಕರ್ನಾಟಕ ರಾಜ್ಯ ರಾಜಕಾರಣ ಗಟಾರ ತಲುಪಿರುವುದಕ್ಕೆ ಮೂರೂ ಪಕ್ಷಗಳಷ್ಟೇ ಕಾರಣವಲ್ಲ, ಈ ಮಾಧ್ಯಮಗಳಿಗೂ ಅದರಲ್ಲಿ ಸಮಪಾಲು ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...