Homeಕರ್ನಾಟಕಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

ಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

- Advertisement -
- Advertisement -

ವಿಧಾನಸೌಧದಲ್ಲಿ ರಂಪಾಟ, ಕೊಳಕು ರಾಜಕಾರಣದ ಮೇಲಾಟ
ರಾಜಕಾರಣಿಗಳ ನಡೆನುಡಿಗಳು ಪ್ರಜಾಪ್ರಭುತ್ವದ ಒಳಚರಂಡಿಗಳಿದ್ದಂತೆ ಎಂದು ಖ್ಯಾತ ಪತ್ರಕರ್ತ ಪಿ. ಲಂಕೇಶ್ ರವರು ಹೇಳಿದ್ದರು. ಇವತ್ತು ಈ ಚರಂಡಿ ನೀರು ವಿಧಾನಸೌಧದ ಕಾರಿಡಾರಿನಲ್ಲೇ ಹರಿದಿದೆ. ಅದು ಇಷ್ಟು ದಿನ ಇರಲಿಲ್ಲ ಎಂದಲ್ಲ, ಕಳೆದ ಒಂದು ವರ್ಷದಿಂದ ಕೊಳಚೆ ಪ್ರಜಾಪ್ರಭುತ್ವವನ್ನು ಮಲೀನಗೊಳಿಸುತ್ತಲೇ ಇದೆ.

ಈಗ ಮತ್ತಿಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿವ ಎಂಟಿಬಿ ನಾಗರಾಜ್ ಮತ್ತು ಚಿಕ್ಕಬಳ್ಳಾಪುರ ಶಾಸಕ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ ಸುಧಾಕರ್ ಸ್ಪೀಕರ್ ರಮೇಶಕುಮಾರ್ ಅವರ ಕೈಗೇ ರಾಜೀನಾಮೆ ಸಲ್ಲಿಸಿದ್ದಾರೆ. ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳಕರ್ ಮತ್ತು ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ಸಲ್ಲಿಸುವ ಸಾಧ್ಯೆ ಇದೆ. ಮೈತ್ರಿಬಣದ ಸಂಖ್ಯೆ ಈಗ 100ರ ಕೆಳಕ್ಕೆ ಇಳಿದು ಎರಡಂಕಿ ತಲುಪುತ್ತಿದೆ.

ಅಧಿಕಾರದ ಹಪಾಹಪಿ ಈಗ ಅಧಃಪತನದ ರಾಜಕಾರಣದ ಆಯಾಮ ಪಡೆದುಕೊಂಡಿದೆ. ಅಲ್ಲಿ ಮುಂಬೈಯಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಸಚಿವರೊಬ್ಬರನ್ನು ಹೀನಾಯವಾಗಿ ನಡೆಸಿಕೊಂಡರೆ, ಇಲ್ಲಿ ವಿಧಾನೌಧದ ಕಾರಿಡಾರಿನಲ್ಲಿ ರಾಜೀನಾಮೆ ಕೊಟ್ಟು ಹೊರಬಂದ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ ಸುಧಾಕರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡುರಾವ್ ಮತ್ತು ಸಚಿವ ಪ್ರಿಯಾಂಕ ಗಾಂಧಿ ಅವರು ವಿಧಾನಸೌಧದ ಕಾರಿಡಾರಿನಲ್ಲೇ ಬಲವಂತದಿಂದ ಕರೆದುಕೊಂಡು ಹೋಗುತ್ತಿರುವ ದೃಶ್ಯವನ್ನು ರಾಜ್ಯದ ಜನತೆ ನೋಡಬೇಕಾಗಿತು. ಅಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಹಾಲಿ ಸಚಿವ ಹಾಲಿ ಸಚಿವ ಯು. ಟಿ. ಖಾದರ್ ಮುಖಾಮುಖಿಯಾದಾಗಲಂತೂ ಬೀದಿರಂಪವೇ ನಡೆಯಿತು.

ಇದು ರಾಜ್ಯ ರಾಜಕೀಯ ಮುಟ್ಟಿರುವ ಅಧಃಪತನ, ಅಸಹ್ಯದ ಸಂಕೇತ ಮಾತ್ರ. ಎಲ್ಲಾ ಮೂರೂ ಪಕ್ಷಗಳು ಅಧಿಕಾರದ ಹಪಾಹಪಿಗೆ ಬಿದ್ದಿದ್ದರ ಪರಿಣಾಮವಿದು. ಸುಧಾಕರ್ ಅವರನ್ನು ಬಲವಂತದಿಂದ ಕರೆದುಕೊಂಡು ಹೋಗುವ ಅತಿರೇಕದ ಘಟನೆ ಇಟ್ಟುಕೊಂಡು ಮಾಧ್ಯಮಗಳು ‘ಛೇ, ಛೇ, ಇದೆಂತಹ ನಾಚಿಕೆಗೇಡು ಎಂದೆಲ್ಲ ಅರಚುತ್ತಿವೆ. ಹೌದು ಇದು ನಾಚಿಕೆಗೇಡೇ.

ಆದರೆ 2018ರಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ಕೂಡಲೇ ಈ ಮಾನಗೇಡಿ ರಾಜಕಾರಣದ ಉದ್ಘಾಟನೆಯಾಗಿತ್ತು. ಆಗ ಬಿಜೆಪಿ ಕೇಂದ್ರ ಸರ್ಕಾರದ ಪರೋಕ್ಷ ನೆರವಿನಿಂದ ರಾಜ್ಯಪಾಲರನ್ನು ಬಳಸಿಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಲು ನಡೆಸಿದ ಅಪ್ರಜಾತಾಂತ್ರಿಕ ನಡೆ ಈ ಮಾಧ್ಯಮಗಳಿಗೆ ಅಸಹ್ಯವಾಗಿ ಕಂಡಿರಲೇ ಇಲ್ಲ. ಅದರ ಬದಲು ಅವು ಜನಾದೇಶದ ಪ್ರಕಾರ ಬಿಜೆಪಿಯೇ ಸರ್ಕಾರ ಮಾಡಬೇಕೆ ಎಂಬ ವಾದವನ್ನು ಸಮರ್ಥಿಸಿಕೊಳ್ಳುವ, ಕೇವಲ 104 ಸದಸ್ಯರ ಬಲವಿದ್ದ ಬಿಜೆಪಿ ಕುದುರೆ ವ್ಯಾಪಾರ ಮಾಡಿ ಬಹುಮತ ಸಾಬೀತು ಮಾಡುವುದೇ ನ್ಯಾಯಯುತ ಎಂಬಂತೆ ವರ್ತಿಸಿದ್ದವು.

ಕಳೆದ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಖುದ್ದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಬಹಿರಂಗವಾಗಿ, ‘ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ನಡೆಯಲು ನಾವು ಬಿಡುವುದಿಲ್ಲ’ ಎಂದು ಯಾವುದೇ ಲಜ್ಜೆ ಇಲ್ಲದೇ ಪ್ರಜಾಪ್ರಭುತ್ವವನ್ನು ಅವಮಾನಿಸಿದಾಗ ಇದೇ ಮಾಧ್ಯಮಗಳು ಅದರ ಬಗ್ಗೆ ಚಕಾರ ಎತ್ತಿರಲಿಲ್ಲ. ರೆಸಾರ್ಟ್ ರಾಜಕಾರಣವನ್ನು ಈ ಮಾಧ್ಯಮಗಳು ವೈಭವೀಕರಿಸಿದವೇ ಹೊರತು ಅವು ಜನತೆಗೆ ಬಗೆದ ದ್ರೋಹ ಎಂದು ಜನರ ಮುಂದೆ ಇಡಲೇ ಇಲ್ಲ.

ಹೀಗಾಗಿ ಇವತ್ತು ಕರ್ನಾಟಕ ರಾಜ್ಯ ರಾಜಕಾರಣ ಗಟಾರ ತಲುಪಿರುವುದಕ್ಕೆ ಮೂರೂ ಪಕ್ಷಗಳಷ್ಟೇ ಕಾರಣವಲ್ಲ, ಈ ಮಾಧ್ಯಮಗಳಿಗೂ ಅದರಲ್ಲಿ ಸಮಪಾಲು ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...