Homeಕರ್ನಾಟಕಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

ಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

- Advertisement -
- Advertisement -

ವಿಧಾನಸೌಧದಲ್ಲಿ ರಂಪಾಟ, ಕೊಳಕು ರಾಜಕಾರಣದ ಮೇಲಾಟ
ರಾಜಕಾರಣಿಗಳ ನಡೆನುಡಿಗಳು ಪ್ರಜಾಪ್ರಭುತ್ವದ ಒಳಚರಂಡಿಗಳಿದ್ದಂತೆ ಎಂದು ಖ್ಯಾತ ಪತ್ರಕರ್ತ ಪಿ. ಲಂಕೇಶ್ ರವರು ಹೇಳಿದ್ದರು. ಇವತ್ತು ಈ ಚರಂಡಿ ನೀರು ವಿಧಾನಸೌಧದ ಕಾರಿಡಾರಿನಲ್ಲೇ ಹರಿದಿದೆ. ಅದು ಇಷ್ಟು ದಿನ ಇರಲಿಲ್ಲ ಎಂದಲ್ಲ, ಕಳೆದ ಒಂದು ವರ್ಷದಿಂದ ಕೊಳಚೆ ಪ್ರಜಾಪ್ರಭುತ್ವವನ್ನು ಮಲೀನಗೊಳಿಸುತ್ತಲೇ ಇದೆ.

ಈಗ ಮತ್ತಿಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿವ ಎಂಟಿಬಿ ನಾಗರಾಜ್ ಮತ್ತು ಚಿಕ್ಕಬಳ್ಳಾಪುರ ಶಾಸಕ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ ಸುಧಾಕರ್ ಸ್ಪೀಕರ್ ರಮೇಶಕುಮಾರ್ ಅವರ ಕೈಗೇ ರಾಜೀನಾಮೆ ಸಲ್ಲಿಸಿದ್ದಾರೆ. ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳಕರ್ ಮತ್ತು ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ಸಲ್ಲಿಸುವ ಸಾಧ್ಯೆ ಇದೆ. ಮೈತ್ರಿಬಣದ ಸಂಖ್ಯೆ ಈಗ 100ರ ಕೆಳಕ್ಕೆ ಇಳಿದು ಎರಡಂಕಿ ತಲುಪುತ್ತಿದೆ.

ಅಧಿಕಾರದ ಹಪಾಹಪಿ ಈಗ ಅಧಃಪತನದ ರಾಜಕಾರಣದ ಆಯಾಮ ಪಡೆದುಕೊಂಡಿದೆ. ಅಲ್ಲಿ ಮುಂಬೈಯಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಸಚಿವರೊಬ್ಬರನ್ನು ಹೀನಾಯವಾಗಿ ನಡೆಸಿಕೊಂಡರೆ, ಇಲ್ಲಿ ವಿಧಾನೌಧದ ಕಾರಿಡಾರಿನಲ್ಲಿ ರಾಜೀನಾಮೆ ಕೊಟ್ಟು ಹೊರಬಂದ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ ಸುಧಾಕರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡುರಾವ್ ಮತ್ತು ಸಚಿವ ಪ್ರಿಯಾಂಕ ಗಾಂಧಿ ಅವರು ವಿಧಾನಸೌಧದ ಕಾರಿಡಾರಿನಲ್ಲೇ ಬಲವಂತದಿಂದ ಕರೆದುಕೊಂಡು ಹೋಗುತ್ತಿರುವ ದೃಶ್ಯವನ್ನು ರಾಜ್ಯದ ಜನತೆ ನೋಡಬೇಕಾಗಿತು. ಅಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಹಾಲಿ ಸಚಿವ ಹಾಲಿ ಸಚಿವ ಯು. ಟಿ. ಖಾದರ್ ಮುಖಾಮುಖಿಯಾದಾಗಲಂತೂ ಬೀದಿರಂಪವೇ ನಡೆಯಿತು.

ಇದು ರಾಜ್ಯ ರಾಜಕೀಯ ಮುಟ್ಟಿರುವ ಅಧಃಪತನ, ಅಸಹ್ಯದ ಸಂಕೇತ ಮಾತ್ರ. ಎಲ್ಲಾ ಮೂರೂ ಪಕ್ಷಗಳು ಅಧಿಕಾರದ ಹಪಾಹಪಿಗೆ ಬಿದ್ದಿದ್ದರ ಪರಿಣಾಮವಿದು. ಸುಧಾಕರ್ ಅವರನ್ನು ಬಲವಂತದಿಂದ ಕರೆದುಕೊಂಡು ಹೋಗುವ ಅತಿರೇಕದ ಘಟನೆ ಇಟ್ಟುಕೊಂಡು ಮಾಧ್ಯಮಗಳು ‘ಛೇ, ಛೇ, ಇದೆಂತಹ ನಾಚಿಕೆಗೇಡು ಎಂದೆಲ್ಲ ಅರಚುತ್ತಿವೆ. ಹೌದು ಇದು ನಾಚಿಕೆಗೇಡೇ.

ಆದರೆ 2018ರಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ಕೂಡಲೇ ಈ ಮಾನಗೇಡಿ ರಾಜಕಾರಣದ ಉದ್ಘಾಟನೆಯಾಗಿತ್ತು. ಆಗ ಬಿಜೆಪಿ ಕೇಂದ್ರ ಸರ್ಕಾರದ ಪರೋಕ್ಷ ನೆರವಿನಿಂದ ರಾಜ್ಯಪಾಲರನ್ನು ಬಳಸಿಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಲು ನಡೆಸಿದ ಅಪ್ರಜಾತಾಂತ್ರಿಕ ನಡೆ ಈ ಮಾಧ್ಯಮಗಳಿಗೆ ಅಸಹ್ಯವಾಗಿ ಕಂಡಿರಲೇ ಇಲ್ಲ. ಅದರ ಬದಲು ಅವು ಜನಾದೇಶದ ಪ್ರಕಾರ ಬಿಜೆಪಿಯೇ ಸರ್ಕಾರ ಮಾಡಬೇಕೆ ಎಂಬ ವಾದವನ್ನು ಸಮರ್ಥಿಸಿಕೊಳ್ಳುವ, ಕೇವಲ 104 ಸದಸ್ಯರ ಬಲವಿದ್ದ ಬಿಜೆಪಿ ಕುದುರೆ ವ್ಯಾಪಾರ ಮಾಡಿ ಬಹುಮತ ಸಾಬೀತು ಮಾಡುವುದೇ ನ್ಯಾಯಯುತ ಎಂಬಂತೆ ವರ್ತಿಸಿದ್ದವು.

ಕಳೆದ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಖುದ್ದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಬಹಿರಂಗವಾಗಿ, ‘ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ನಡೆಯಲು ನಾವು ಬಿಡುವುದಿಲ್ಲ’ ಎಂದು ಯಾವುದೇ ಲಜ್ಜೆ ಇಲ್ಲದೇ ಪ್ರಜಾಪ್ರಭುತ್ವವನ್ನು ಅವಮಾನಿಸಿದಾಗ ಇದೇ ಮಾಧ್ಯಮಗಳು ಅದರ ಬಗ್ಗೆ ಚಕಾರ ಎತ್ತಿರಲಿಲ್ಲ. ರೆಸಾರ್ಟ್ ರಾಜಕಾರಣವನ್ನು ಈ ಮಾಧ್ಯಮಗಳು ವೈಭವೀಕರಿಸಿದವೇ ಹೊರತು ಅವು ಜನತೆಗೆ ಬಗೆದ ದ್ರೋಹ ಎಂದು ಜನರ ಮುಂದೆ ಇಡಲೇ ಇಲ್ಲ.

ಹೀಗಾಗಿ ಇವತ್ತು ಕರ್ನಾಟಕ ರಾಜ್ಯ ರಾಜಕಾರಣ ಗಟಾರ ತಲುಪಿರುವುದಕ್ಕೆ ಮೂರೂ ಪಕ್ಷಗಳಷ್ಟೇ ಕಾರಣವಲ್ಲ, ಈ ಮಾಧ್ಯಮಗಳಿಗೂ ಅದರಲ್ಲಿ ಸಮಪಾಲು ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...