Homeಕರ್ನಾಟಕಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

ಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

- Advertisement -
- Advertisement -

ವಿಧಾನಸೌಧದಲ್ಲಿ ರಂಪಾಟ, ಕೊಳಕು ರಾಜಕಾರಣದ ಮೇಲಾಟ
ರಾಜಕಾರಣಿಗಳ ನಡೆನುಡಿಗಳು ಪ್ರಜಾಪ್ರಭುತ್ವದ ಒಳಚರಂಡಿಗಳಿದ್ದಂತೆ ಎಂದು ಖ್ಯಾತ ಪತ್ರಕರ್ತ ಪಿ. ಲಂಕೇಶ್ ರವರು ಹೇಳಿದ್ದರು. ಇವತ್ತು ಈ ಚರಂಡಿ ನೀರು ವಿಧಾನಸೌಧದ ಕಾರಿಡಾರಿನಲ್ಲೇ ಹರಿದಿದೆ. ಅದು ಇಷ್ಟು ದಿನ ಇರಲಿಲ್ಲ ಎಂದಲ್ಲ, ಕಳೆದ ಒಂದು ವರ್ಷದಿಂದ ಕೊಳಚೆ ಪ್ರಜಾಪ್ರಭುತ್ವವನ್ನು ಮಲೀನಗೊಳಿಸುತ್ತಲೇ ಇದೆ.

ಈಗ ಮತ್ತಿಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿವ ಎಂಟಿಬಿ ನಾಗರಾಜ್ ಮತ್ತು ಚಿಕ್ಕಬಳ್ಳಾಪುರ ಶಾಸಕ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ ಸುಧಾಕರ್ ಸ್ಪೀಕರ್ ರಮೇಶಕುಮಾರ್ ಅವರ ಕೈಗೇ ರಾಜೀನಾಮೆ ಸಲ್ಲಿಸಿದ್ದಾರೆ. ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳಕರ್ ಮತ್ತು ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ಸಲ್ಲಿಸುವ ಸಾಧ್ಯೆ ಇದೆ. ಮೈತ್ರಿಬಣದ ಸಂಖ್ಯೆ ಈಗ 100ರ ಕೆಳಕ್ಕೆ ಇಳಿದು ಎರಡಂಕಿ ತಲುಪುತ್ತಿದೆ.

ಅಧಿಕಾರದ ಹಪಾಹಪಿ ಈಗ ಅಧಃಪತನದ ರಾಜಕಾರಣದ ಆಯಾಮ ಪಡೆದುಕೊಂಡಿದೆ. ಅಲ್ಲಿ ಮುಂಬೈಯಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಸಚಿವರೊಬ್ಬರನ್ನು ಹೀನಾಯವಾಗಿ ನಡೆಸಿಕೊಂಡರೆ, ಇಲ್ಲಿ ವಿಧಾನೌಧದ ಕಾರಿಡಾರಿನಲ್ಲಿ ರಾಜೀನಾಮೆ ಕೊಟ್ಟು ಹೊರಬಂದ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ ಸುಧಾಕರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡುರಾವ್ ಮತ್ತು ಸಚಿವ ಪ್ರಿಯಾಂಕ ಗಾಂಧಿ ಅವರು ವಿಧಾನಸೌಧದ ಕಾರಿಡಾರಿನಲ್ಲೇ ಬಲವಂತದಿಂದ ಕರೆದುಕೊಂಡು ಹೋಗುತ್ತಿರುವ ದೃಶ್ಯವನ್ನು ರಾಜ್ಯದ ಜನತೆ ನೋಡಬೇಕಾಗಿತು. ಅಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಹಾಲಿ ಸಚಿವ ಹಾಲಿ ಸಚಿವ ಯು. ಟಿ. ಖಾದರ್ ಮುಖಾಮುಖಿಯಾದಾಗಲಂತೂ ಬೀದಿರಂಪವೇ ನಡೆಯಿತು.

ಇದು ರಾಜ್ಯ ರಾಜಕೀಯ ಮುಟ್ಟಿರುವ ಅಧಃಪತನ, ಅಸಹ್ಯದ ಸಂಕೇತ ಮಾತ್ರ. ಎಲ್ಲಾ ಮೂರೂ ಪಕ್ಷಗಳು ಅಧಿಕಾರದ ಹಪಾಹಪಿಗೆ ಬಿದ್ದಿದ್ದರ ಪರಿಣಾಮವಿದು. ಸುಧಾಕರ್ ಅವರನ್ನು ಬಲವಂತದಿಂದ ಕರೆದುಕೊಂಡು ಹೋಗುವ ಅತಿರೇಕದ ಘಟನೆ ಇಟ್ಟುಕೊಂಡು ಮಾಧ್ಯಮಗಳು ‘ಛೇ, ಛೇ, ಇದೆಂತಹ ನಾಚಿಕೆಗೇಡು ಎಂದೆಲ್ಲ ಅರಚುತ್ತಿವೆ. ಹೌದು ಇದು ನಾಚಿಕೆಗೇಡೇ.

ಆದರೆ 2018ರಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ಕೂಡಲೇ ಈ ಮಾನಗೇಡಿ ರಾಜಕಾರಣದ ಉದ್ಘಾಟನೆಯಾಗಿತ್ತು. ಆಗ ಬಿಜೆಪಿ ಕೇಂದ್ರ ಸರ್ಕಾರದ ಪರೋಕ್ಷ ನೆರವಿನಿಂದ ರಾಜ್ಯಪಾಲರನ್ನು ಬಳಸಿಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಲು ನಡೆಸಿದ ಅಪ್ರಜಾತಾಂತ್ರಿಕ ನಡೆ ಈ ಮಾಧ್ಯಮಗಳಿಗೆ ಅಸಹ್ಯವಾಗಿ ಕಂಡಿರಲೇ ಇಲ್ಲ. ಅದರ ಬದಲು ಅವು ಜನಾದೇಶದ ಪ್ರಕಾರ ಬಿಜೆಪಿಯೇ ಸರ್ಕಾರ ಮಾಡಬೇಕೆ ಎಂಬ ವಾದವನ್ನು ಸಮರ್ಥಿಸಿಕೊಳ್ಳುವ, ಕೇವಲ 104 ಸದಸ್ಯರ ಬಲವಿದ್ದ ಬಿಜೆಪಿ ಕುದುರೆ ವ್ಯಾಪಾರ ಮಾಡಿ ಬಹುಮತ ಸಾಬೀತು ಮಾಡುವುದೇ ನ್ಯಾಯಯುತ ಎಂಬಂತೆ ವರ್ತಿಸಿದ್ದವು.

ಕಳೆದ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಖುದ್ದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಬಹಿರಂಗವಾಗಿ, ‘ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ನಡೆಯಲು ನಾವು ಬಿಡುವುದಿಲ್ಲ’ ಎಂದು ಯಾವುದೇ ಲಜ್ಜೆ ಇಲ್ಲದೇ ಪ್ರಜಾಪ್ರಭುತ್ವವನ್ನು ಅವಮಾನಿಸಿದಾಗ ಇದೇ ಮಾಧ್ಯಮಗಳು ಅದರ ಬಗ್ಗೆ ಚಕಾರ ಎತ್ತಿರಲಿಲ್ಲ. ರೆಸಾರ್ಟ್ ರಾಜಕಾರಣವನ್ನು ಈ ಮಾಧ್ಯಮಗಳು ವೈಭವೀಕರಿಸಿದವೇ ಹೊರತು ಅವು ಜನತೆಗೆ ಬಗೆದ ದ್ರೋಹ ಎಂದು ಜನರ ಮುಂದೆ ಇಡಲೇ ಇಲ್ಲ.

ಹೀಗಾಗಿ ಇವತ್ತು ಕರ್ನಾಟಕ ರಾಜ್ಯ ರಾಜಕಾರಣ ಗಟಾರ ತಲುಪಿರುವುದಕ್ಕೆ ಮೂರೂ ಪಕ್ಷಗಳಷ್ಟೇ ಕಾರಣವಲ್ಲ, ಈ ಮಾಧ್ಯಮಗಳಿಗೂ ಅದರಲ್ಲಿ ಸಮಪಾಲು ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...