Homeಕರ್ನಾಟಕಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

ಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

- Advertisement -
- Advertisement -

ವಿಧಾನಸೌಧದಲ್ಲಿ ರಂಪಾಟ, ಕೊಳಕು ರಾಜಕಾರಣದ ಮೇಲಾಟ
ರಾಜಕಾರಣಿಗಳ ನಡೆನುಡಿಗಳು ಪ್ರಜಾಪ್ರಭುತ್ವದ ಒಳಚರಂಡಿಗಳಿದ್ದಂತೆ ಎಂದು ಖ್ಯಾತ ಪತ್ರಕರ್ತ ಪಿ. ಲಂಕೇಶ್ ರವರು ಹೇಳಿದ್ದರು. ಇವತ್ತು ಈ ಚರಂಡಿ ನೀರು ವಿಧಾನಸೌಧದ ಕಾರಿಡಾರಿನಲ್ಲೇ ಹರಿದಿದೆ. ಅದು ಇಷ್ಟು ದಿನ ಇರಲಿಲ್ಲ ಎಂದಲ್ಲ, ಕಳೆದ ಒಂದು ವರ್ಷದಿಂದ ಕೊಳಚೆ ಪ್ರಜಾಪ್ರಭುತ್ವವನ್ನು ಮಲೀನಗೊಳಿಸುತ್ತಲೇ ಇದೆ.

ಈಗ ಮತ್ತಿಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿವ ಎಂಟಿಬಿ ನಾಗರಾಜ್ ಮತ್ತು ಚಿಕ್ಕಬಳ್ಳಾಪುರ ಶಾಸಕ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ ಸುಧಾಕರ್ ಸ್ಪೀಕರ್ ರಮೇಶಕುಮಾರ್ ಅವರ ಕೈಗೇ ರಾಜೀನಾಮೆ ಸಲ್ಲಿಸಿದ್ದಾರೆ. ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳಕರ್ ಮತ್ತು ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ಸಲ್ಲಿಸುವ ಸಾಧ್ಯೆ ಇದೆ. ಮೈತ್ರಿಬಣದ ಸಂಖ್ಯೆ ಈಗ 100ರ ಕೆಳಕ್ಕೆ ಇಳಿದು ಎರಡಂಕಿ ತಲುಪುತ್ತಿದೆ.

ಅಧಿಕಾರದ ಹಪಾಹಪಿ ಈಗ ಅಧಃಪತನದ ರಾಜಕಾರಣದ ಆಯಾಮ ಪಡೆದುಕೊಂಡಿದೆ. ಅಲ್ಲಿ ಮುಂಬೈಯಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಸಚಿವರೊಬ್ಬರನ್ನು ಹೀನಾಯವಾಗಿ ನಡೆಸಿಕೊಂಡರೆ, ಇಲ್ಲಿ ವಿಧಾನೌಧದ ಕಾರಿಡಾರಿನಲ್ಲಿ ರಾಜೀನಾಮೆ ಕೊಟ್ಟು ಹೊರಬಂದ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ ಸುಧಾಕರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡುರಾವ್ ಮತ್ತು ಸಚಿವ ಪ್ರಿಯಾಂಕ ಗಾಂಧಿ ಅವರು ವಿಧಾನಸೌಧದ ಕಾರಿಡಾರಿನಲ್ಲೇ ಬಲವಂತದಿಂದ ಕರೆದುಕೊಂಡು ಹೋಗುತ್ತಿರುವ ದೃಶ್ಯವನ್ನು ರಾಜ್ಯದ ಜನತೆ ನೋಡಬೇಕಾಗಿತು. ಅಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಹಾಲಿ ಸಚಿವ ಹಾಲಿ ಸಚಿವ ಯು. ಟಿ. ಖಾದರ್ ಮುಖಾಮುಖಿಯಾದಾಗಲಂತೂ ಬೀದಿರಂಪವೇ ನಡೆಯಿತು.

ಇದು ರಾಜ್ಯ ರಾಜಕೀಯ ಮುಟ್ಟಿರುವ ಅಧಃಪತನ, ಅಸಹ್ಯದ ಸಂಕೇತ ಮಾತ್ರ. ಎಲ್ಲಾ ಮೂರೂ ಪಕ್ಷಗಳು ಅಧಿಕಾರದ ಹಪಾಹಪಿಗೆ ಬಿದ್ದಿದ್ದರ ಪರಿಣಾಮವಿದು. ಸುಧಾಕರ್ ಅವರನ್ನು ಬಲವಂತದಿಂದ ಕರೆದುಕೊಂಡು ಹೋಗುವ ಅತಿರೇಕದ ಘಟನೆ ಇಟ್ಟುಕೊಂಡು ಮಾಧ್ಯಮಗಳು ‘ಛೇ, ಛೇ, ಇದೆಂತಹ ನಾಚಿಕೆಗೇಡು ಎಂದೆಲ್ಲ ಅರಚುತ್ತಿವೆ. ಹೌದು ಇದು ನಾಚಿಕೆಗೇಡೇ.

ಆದರೆ 2018ರಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ಕೂಡಲೇ ಈ ಮಾನಗೇಡಿ ರಾಜಕಾರಣದ ಉದ್ಘಾಟನೆಯಾಗಿತ್ತು. ಆಗ ಬಿಜೆಪಿ ಕೇಂದ್ರ ಸರ್ಕಾರದ ಪರೋಕ್ಷ ನೆರವಿನಿಂದ ರಾಜ್ಯಪಾಲರನ್ನು ಬಳಸಿಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಲು ನಡೆಸಿದ ಅಪ್ರಜಾತಾಂತ್ರಿಕ ನಡೆ ಈ ಮಾಧ್ಯಮಗಳಿಗೆ ಅಸಹ್ಯವಾಗಿ ಕಂಡಿರಲೇ ಇಲ್ಲ. ಅದರ ಬದಲು ಅವು ಜನಾದೇಶದ ಪ್ರಕಾರ ಬಿಜೆಪಿಯೇ ಸರ್ಕಾರ ಮಾಡಬೇಕೆ ಎಂಬ ವಾದವನ್ನು ಸಮರ್ಥಿಸಿಕೊಳ್ಳುವ, ಕೇವಲ 104 ಸದಸ್ಯರ ಬಲವಿದ್ದ ಬಿಜೆಪಿ ಕುದುರೆ ವ್ಯಾಪಾರ ಮಾಡಿ ಬಹುಮತ ಸಾಬೀತು ಮಾಡುವುದೇ ನ್ಯಾಯಯುತ ಎಂಬಂತೆ ವರ್ತಿಸಿದ್ದವು.

ಕಳೆದ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಖುದ್ದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಬಹಿರಂಗವಾಗಿ, ‘ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ನಡೆಯಲು ನಾವು ಬಿಡುವುದಿಲ್ಲ’ ಎಂದು ಯಾವುದೇ ಲಜ್ಜೆ ಇಲ್ಲದೇ ಪ್ರಜಾಪ್ರಭುತ್ವವನ್ನು ಅವಮಾನಿಸಿದಾಗ ಇದೇ ಮಾಧ್ಯಮಗಳು ಅದರ ಬಗ್ಗೆ ಚಕಾರ ಎತ್ತಿರಲಿಲ್ಲ. ರೆಸಾರ್ಟ್ ರಾಜಕಾರಣವನ್ನು ಈ ಮಾಧ್ಯಮಗಳು ವೈಭವೀಕರಿಸಿದವೇ ಹೊರತು ಅವು ಜನತೆಗೆ ಬಗೆದ ದ್ರೋಹ ಎಂದು ಜನರ ಮುಂದೆ ಇಡಲೇ ಇಲ್ಲ.

ಹೀಗಾಗಿ ಇವತ್ತು ಕರ್ನಾಟಕ ರಾಜ್ಯ ರಾಜಕಾರಣ ಗಟಾರ ತಲುಪಿರುವುದಕ್ಕೆ ಮೂರೂ ಪಕ್ಷಗಳಷ್ಟೇ ಕಾರಣವಲ್ಲ, ಈ ಮಾಧ್ಯಮಗಳಿಗೂ ಅದರಲ್ಲಿ ಸಮಪಾಲು ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...