Homeಮುಖಪುಟಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ 'ಕರ್ಮಶ್ರೀ' ಯೋಜನೆಗೆ ಮಹಾತ್ಮ ಗಾಂಧಿ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ ‘ಕರ್ಮಶ್ರೀ’ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ.

ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ ಎಂದ ಮಮತಾ ಬ್ಯಾನರ್ಜಿ, ರಾಷ್ಟ್ರಪಿತನಿಗೆ ಅವರು ಗೌರವ ಸಲ್ಲಿಸದಿದ್ದರೆ ನಾನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಕೋಲ್ಕತ್ತಾದ ಧೋನೋ ಧನ್ಯೋ ಸಭಾಂಗಣದಲ್ಲಿ ನಡೆದ ವ್ಯಾಪಾರ ಮತ್ತು ಕೈಗಾರಿಕಾ ಸಮಾವೇಶದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)’ಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸುವ ‘ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) 2025 (ವಿಬಿ-ಜಿ ರಾಮ್‌-ಜಿ) ಎಂಬ ಹೊಸ ಮಸೂದೆಗೆ ಗುರುವಾರ (ಡಿಸೆಂಬರ್ 18) ಲೋಕಸಭೆಯ ಅನುಮೋದನೆ ಪಡೆದಿದೆ.

ಈ ಮಸೂದೆ 2005ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದ ನರೇಗಾ ಕಾಯ್ದೆ ಮತ್ತು ಯೋಜನೆಯ ಹೆಸರು, ನಿಬಂಧನೆಗಳನ್ನು ಬದಲಿಸಲಿದೆ. ಮುಖ್ಯವಾಗಿ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದು ಹಾಕಲಿದೆ.

ನರೇಗಾ ಕಾಯ್ದೆಯ ಹೆಸರು ಬದಲಿಸಿರುವ ಕೇಂದ್ರ ಕೆಲಸದ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಳ ಮಾಡುವುದಾಗಿ ಹೇಳಿದೆ. ಇದಕ್ಕೆ ಟಕ್ಕರ್ ಕೊಟ್ಟಿರುವ ಮಮತಾ ಬ್ಯಾನರ್ಜಿ ‘ಕರ್ಮಶ್ರೀ’ ಯೋಜನೆಯಡಿ ಪ್ರಸ್ತುತ ಇರುವ ಕೆಲಸದ ದಿನಗಳು 75 ಅನ್ನು100ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.

“ನಾವು ಈಗಾಗಲೇ ‘ಕರ್ಮಶ್ರೀ’ ಅಡಿಯಲ್ಲಿ ಸಾಕಷ್ಟು ಕೆಲಸದ ದಿನಗಳನ್ನು ಸೃಷ್ಟಿಸಿದ್ದೇವೆ. ಅದನ್ನು ನಾವು ನಮ್ಮ ಸ್ವಂತ ಸಂಪನ್ಮೂಲಗಳಿಂದ ನಡೆಸುತ್ತಿದ್ದೇವೆ. ಕೇಂದ್ರ ನಿಧಿಯನ್ನು ನಿಲ್ಲಿಸಿದರೂ, ಜನರಿಗೆ ಕೆಲಸ ಸಿಗುವಂತೆ ನೋಡಿಕೊಳ್ಳುತ್ತೇವೆ. ನಾವು ಭಿಕ್ಷುಕರಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಾಲಿಸದ ಕಾರಣ ನೀಡಿ 2005ರ ನರೇಗಾ ಕಾಯ್ದೆಯ ಸೆಕ್ಷನ್ 27 ಅನ್ನು ಅನ್ವಯಿಸಿ ಕೇಂದ್ರ ಸರ್ಕಾರ ಮಾರ್ಚ್ 9, 2022ರಿಂದ ಪಶ್ಚಿಮ ಬಂಗಾಳಕ್ಕೆ ಯೋಜನೆಯ ಹಣ ಬಿಡುಗಡೆ ಮಾಡುವುದನ್ನು ಸ್ಥಗಿತಗೊಳಿಸಿದೆ.

ಅಂದಿನಿಂದ, ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಯಾವುದೇ ಕೆಲಸ ನಡೆದಿಲ್ಲ. ಯೋಜನೆಯನ್ನು ಸ್ಥಗಿತಗೊಳಿಸುವ ಮೊದಲು, 2014-15 ಮತ್ತು 2021-22 ರ ನಡುವೆ ಪಶ್ಚಿಮ ಬಂಗಾಳದ 51 ಲಕ್ಷದಿಂದ 80 ಲಕ್ಷ ಕುಟುಂಬಗಳು ವಾರ್ಷಿಕವಾಗಿ ಅದರ ಲಾಭ ಪಡೆಯುತ್ತಿದ್ದವು.

ಕೇಂದ್ರ ಸರ್ಕಾರ ಹಣ ನೀಡುವುದನ್ನು ನಿಲ್ಲಿಸಿರುವುದರ ವಿರುದ್ದ ಪಶ್ಚಿಮ ಬಂಗಾಳ ಸರ್ಕಾರ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಗಸ್ಟ್ 1, 2025ರಿಂದ ಪಶ್ಚಿಮ ಬಂಗಾಳದಲ್ಲಿ ಯೋಜನೆಯನ್ನು ಪುನರ್‌ ಅನುಷ್ಠಾನಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಅಕ್ಟೋಬರ್ 27, 2025ರಂದು ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಯಾದ ಕಾರಣ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪಶ್ಚಿಮ ಬಂಗಾಳದಲ್ಲಿ ವಿಶೇಷ ಷರತ್ತುಗಳೊಂದಿಗೆ ಯೋಜನೆ ಪುನರಾರಂಭಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...